ಮೈಸೂರಿನ ಕೃಷ್ಣಮೂರ್ತಿ ಪುರಂನಲ್ಲಿರುವ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಆವರಣದಲ್ಲಿ 71ನೇ ‘ಸಹಕಾರ ಸಪ್ತಾಹ’ಕ್ಕೆ ಚಾಲನೆ ನೀಡಲಾಯಿತು.
ಈ ವೇಳೆ ಮಾತನಾಡಿದ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಖಜಾಂಜಿ ಕೆ ನಾಗರಾಜು, “ಉಳ್ಳವರು ಇತರರಿಗೆ ಸಹಾಯಹಸ್ತ ಚಾಚುವ ಅದಮ್ಯ ಗುಣವನ್ನು ಸರ್ವರೂ ಮೈಗೂಡಿಸಿಕೊಳ್ಳುವಂತೆ ಮಾಡಿ, ಜೀವನಾ ಅಭಿವೃದ್ಧಿಯ ಕಹಳೆ ಮೊಳಗಿಸುವಲ್ಲಿ ತನ್ನದೇ ಆದ ಪಾತ್ರವನ್ನು ಸಹಕಾರಿ ಸಂಘಗಳು ನಡೆಸುತ್ತಿರುವುದು ಶ್ಲಾಘನೀಯ” ಎಂದು ಹೇಳಿದರು.
“ಸಹಕಾರ ತತ್ವವು ಭಾರತದಲ್ಲಿ ಉತ್ಕೃಷ್ಟ ಸಾಧನೆ ಮಾಡಿದೆ. ಯುವಜನರ ಅಭಿವೃದ್ಧಿಯಲ್ಲಿ ಮತ್ತು ಮಹಿಳೆಯರ ಸಬಲೀಕರಣಕ್ಕೆ ಸಹಕಾರಿ ಸಂಘಗಳು ಅತ್ಯುತ್ತಮ ಕಾರ್ಯ ಮಾಡಿವೆ.ಈಗಲೂ ಸಮಾಜದಲ್ಲಿ ನರ ನಾಡಿಗಳಂತೆ ಕೆಲಸ ನಿರ್ವಹಿಸುತ್ತಿದ್ದು. ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುವಲ್ಲಿ ಯಶಸ್ವಿಯಾಗಿವೆ” ಎಂದರು.
ಇದನ್ನು ಓದಿದ್ದೀರಾ? ಮೈಸೂರು | ನ.15 ರಿಂದ 25ರವರೆಗೆ ರೈತ, ಕಾರ್ಮಿಕ ವಿರೋಧಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ಬಡಗಲಪುರ ನಾಗೇಂದ್ರ
ಇದೇ ಸಂದರ್ಭದಲ್ಲಿ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ ಡಿ ಗೋಪಿನಾಥ್,ಉಪಾಧ್ಯಕ್ಷ ಎಂ ಎನ್ ಸೌಮ್ಯ, ಮಂಡಲಿ ಸದಸ್ಯರಾದ ಸಿ ವಿ ಪಾರ್ಥಸಾರಥಿ, ಹೆಚ್ ಎಸ್ ಪ್ರಶಾಂತ್ ತಾತಾಚಾರ್,ಎಂ ಆರ್ ಬಾಲಕೃಷ್ಣ ,ಹೆಚ್ ಪಿ ಚೇತನ್, ಎನ್ ಪಣಿರಾಜ್, ವಿಕ್ರಂ ಅಯ್ಯಂಗಾರ್, ಪಿ ಮಹಿಮ, ಎನ್ ನಾಗಶ್ರೀ, ಕೆ ಎನ್ ಅರುಣ್,ಶಿವರುದ್ರಪ್ಪ, ಎಸ್ ರಾಜಮ್ಮ, ಎಂ ಪಿ ಶಾಶ್ವತಿ ನಾಯಕ, ಪ್ರಭಾರ ಕಾರ್ಯದರ್ಶಿ ಎನ್ ವೀಣಾ ಹಾಗೂ ಸೊಸೈಟಿ ಸದಸ್ಯರುಗಳು ಮತ್ತು ಸಿಬ್ಬಂದಿ ವರ್ಗದವರು ಇದ್ದರು.
