ಮೈಸೂರು | ಕುಸಿದು ಬಿದ್ದ ಸೇತುವೆ; ನಾಲೆಗೆ ಜಾರಿದ ಲಾರಿ

Date:

Advertisements

ಭತ್ತ ತುಂಬಿದ ಲಾರಿಯೊಂದು ತೆರಳುತ್ತಿದ್ದಾಗ ಸೇತುವೆ ಕುಸಿದು ಬಿದ್ದಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಾಲುಗಡದಲ್ಲಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಹಾಲುಗಡ ಬಳಿ ಕಬಿಸಿ ಬಲದಂಡೆ ನಾಲೆಯ ಮೇಲೆ ನಿರ್ಮಿಸಲಾಗಿದ್ದ ಸೇತುವೆಯು ಭತ್ತದ ಮೂಟೆಗಳನ್ನು ಹೊತ್ತ ಲಾರಿ ಸಾಗುತ್ತಿದ್ದಾಗ ಕುಸಿದು ಬಿದ್ದಿದೆ. ಈ ಸೇತುವೆಯು ಚಿಕ್ಕದೇವಮ್ಮನ ಬೆಟ್ಟ ಮತ್ತು ವಿವಿಧ ಗ್ರಾಮಗಳಿಗೆ ತೆರಳುವ ಪ್ರಮುಖ ರಸ್ತೆಯ ಭಾಗವಾಗಿತ್ತು. ಇದೀಗ, ವಿವಿಧ ಗ್ರಾಮಗಳ ನಡುವಿನ ಸಂಪರ್ಕಕೊಂಡಿ ಕಳಚಿದಂತಾಗಿದೆ.

ಭತ್ತದ ಮೂಟೆಗಳು ತುಂಬಿದ್ದ ಲಾರಿಯು ಸರಗೂರು ಬಳಿಯ ಇಟ್ನ ಗ್ರಾಮದಿಂದ ತಮಿಳುನಾಡಿಗೆ ತೆರಳುತ್ತಿತ್ತು. ಲಾರಿಯು ಸೇತುವೆ ಮೇಲೆ ಬಂದಾಗ, ಸೇತುವೆ ಕುಸಿದಿದೆ. ಲಾರಿ ನಾಲೆಗೆ ಜಾರಿದೆ. ಅದೃಷ್ಟವಶಾತ್, ಚಾಲಕಿಗೆ ಯಾವುದೇ ಅಪಾಯವಾಗಿಲ್ಲ. ಲಾರಿಗೂ ಹೆಚ್ಚಿನ ಹಾನಿಯಾಗಿಲ್ಲ ಎಂದು ವರದಿಯಾಗಿದೆ.

Advertisements

ಸೇತುವೆಯು ಹಲವು ದಶಕಗಳಷ್ಟು ಹಳೆಯದಾಗಿದ್ದು, ದುರಸ್ತಿ ಮಾಡಿಸುವಂತೆ ಗ್ರಾಮಸ್ಥರು ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರು. ಆದರೂ, ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಪರಿಣಾಮವಾಗಿ, ಈ ಅವಘಡ ನಡೆದಿದೆ ಎಂದು ಸ್ಥಳೀಯರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಕಬಿನಿ ಜಲಾಶಯದ ಕಾರ್ಯಪಾಲಕ ಅಭಿಯಂತರ ಕೆ ಉಷಾ ಹಾಗೂ ಸರಗೂರು ಪೊಲೀಸ್‌ ಠಾಣೆಯ ಎಸ್‌ಐ ಕಿರಣ್ ಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಈ ವರದಿ ಓದಿದ್ದೀರಾ?: ಯುವತಿಯ ಅಪಹರಣ- ಪ್ರತ್ಯಕ್ಷ ಸಾಕ್ಷಿಯಿಂದ ಎಸ್‌ಐಟಿಗೆ ದೂರು; ಅಲ್ಲಿದ್ದ ಆ ವ್ಯಕ್ತಿ ಯಾರು ಗೊತ್ತೇ?

“ಹಳೆಯದಾದ ಸೇತುವೆಯ ಮೇಲೆ ಭಾರೀ ವಾಹನಗಳು ಸಂಚರಿಸದಂತೆ ಎಚ್ಚರಿಕೆ ವಹಿಸಲು ಗ್ರಾಮಸ್ಥರು ಮತ್ತು ರೈತರಿಗೆ ಸೂಚಿಸಿದ್ದೆವು. ಆದರೂ, ದೊಡ್ಡ ವಾಹನಗಳು ಇದೇ ಸೇತುವೆ ಮೇಲೆ ಸಂಚರಿಸುತ್ತಿವೆ. ಅದಕ್ಕಾಗಿ, ವಾಹನಗಳನ್ನು ತಡೆಯಲು ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು. ಆದರೆ, ಲಾರಿ ಚಾಲಕರು ರಾತ್ರಿ ವೇಳೆ, ಬ್ಯಾರಿಕೇಡ್‌ಗಳನ್ನು ಸರಿಸಿ, ಸೇತುವೆ ಮೇಲೆ ಲಾರಿಗಳನ್ನು ಚಲಾಯಿಸುತ್ತಿದ್ದಾರೆ” ಎಂದು ಉಷಾ ಆರೋಪಿಸಿದ್ದಾರೆ.

“ಹೊಸ ಸೇತುವೆ ನಿರ್ಮಾಣಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ರೈತರ ಅನುಕೂಲಕ್ಕೆ ತಾತ್ಕಾಲಿಕವಾಗಿ ಬೇರೆ ಸೇತುವೆ ನಿರ್ಮಾಣ ಮಾಡಲು ಮುಂದಾಗುತ್ತೇವೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X