ಮೈಸೂರು | ಇ.ಡಿ ದುರ್ಬಳಕೆ ಖಂಡಿಸಿ ಕಾಂಗ್ರೆಸ್ ಪಂಜಿಡಿದು ಪ್ರತಿಭಟನೆ

Date:

ಇ.ಡಿ ದುರ್ಬಳಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮೈಸೂರು ಟೌನ್ ಹಾಲ್ ಬಳಿಯ ಡಾ ಅಂಬೇಡ್ಕರ್ ಪುತ್ಥಳಿ ಮುಂಭಾಗ ಪಂಜಿಡಿದು ಪ್ರತಿಭಟನೆ ನಡೆಸಿದರು.

- Advertisement -

ದಲಿತ ಮಹಾಸಭಾ ಅಧ್ಯಕ್ಷ ರಾಜೇಶ್ ಮಾತನಾಡಿ, “ಕೇಂದ್ರ ಸರ್ಕಾರ ಸಿದ್ದರಾಮಯ್ಯ ಅವರನ್ನು ಹಣಿಯಲು ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರ ದುರ್ಬಳಕೆ ಮಾಡಿದೆ. ಇ.ಡಿ ಕೂಡಾ ಕೇಂದ್ರ ಸರ್ಕಾರದ ಕಗೊಂಬೆಯಾಗಿ ವರ್ತಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

“ಇ.ಡಿ ಅಧಿಕಾರಿಗಳು ಸಿದ್ದರಾಮಯ್ಯನವರ ವಿರುದ್ಧ ಇಸಿಐಆರ್ ದೂರು ದಾಖಲು ಮಾಡಿರುವುದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಷಡ್ಯಂತ್ರ ಹಾಗೂ ಸಿದ್ದರಾಮಯ್ಯನವರನ್ನು ವಾಮಮಾರ್ಗದಿಂದ ಸಿಎಂ ಸ್ಥಾನದಿಂದ ಕೆಳಗಿಳಿಸಲು ಮಾಡಿರುವ ಸಂಚು. ಈ ಮೂಲಕ ಕಾಂಗ್ರೆಸ್ ಪಕ್ಷವನ್ನು ಅಸ್ಥಿರಗೊಳಿಸಲು ಬಿಜೆಪಿ ಪಕ್ಷದಿಂದ ಕುತಂತ್ರ ನಡೆಯುತ್ತಿದೆ. ದೇಶದಲ್ಲಿ ವಿರೋಧ ಪಕ್ಷಗಳನ್ನು ಅಸ್ಥಿರಗೊಳಿಸಲು, ಜಾರ್ಖಾಂಡ್, ದೆಹಲಿ, ಮಹಾರಾಷ್ಟ್ರಗಳಲ್ಲಿ ಜನತಂತ್ರ ಸರ್ಕಾರವನ್ನು ಅತಂತ್ರಗೊಳಿಸುವಲ್ಲಿ ನಿರಂತರ ಪ್ರಯತ್ನ ನಡೆಯುತ್ತಿದೆ” ಎಂದು ಆರೋಪಿಸಿದರು.

ಅಹಿಂದ ಕೆ ಶಿವರಾಮು ಮಾತನಾಡಿ, “ಸಿದ್ದರಾಮಯ್ಯ ಕರ್ನಾಟಕ ರಾಜ್ಯದ ಅತ್ಯಂತ ಜನಪ್ರಿಯ, ಅಂತಃಕರಣ ಉಳ್ಳಂತಹ, ಸಮಾಜವಾದಿ ಹಿನ್ನೆಲೆಯ ನಾಯಕರಾಗಿ, ಅಹಿಂದ ವರ್ಗಗಳ ಹೋರಾಟದ ನೇತೃತ್ವ ವಹಿಸಿದವರು. ಆದರೆ, ಕೇಂದ್ರ ಸರ್ಕಾರ ತನ್ನ ದುಷ್ಟ ನಡೆಯಿಂದ ಇ.ಡಿ, ಸಿಬಿಐ ತನಿಖೆಗೆ ಒಳಪಡಿಸಿ, ಹೇಗಾದರೂ ಸರಿ ಮಾನಸಿಕವಾಗಿ ಕುಗ್ಗಿಸಲು ಹುನ್ನಾರ ನಡೆಸಿದೆ” ಎಂದು ಕಿಡಿಕಾರಿದರು.

ಪ್ರಿವೆನ್ಷನ್‌ ಆಫ್ ಮನಿ ಲಾಂಡರಿಂಗ್‌ ಅಡಿಯಲ್ಲಿ ಈ ಪ್ರಕರಣ ಬರುವುದಿಲ್ಲ. ಸಿದ್ದರಾಮಯ್ಯರವರ ಪಾತ್ರ ಅಥವಾ ಯಾವುದೇ ಸಹಿಯುಳ್ಳ ಆದೇಶ ಇರುವುದಿಲ್ಲ. ಮುಡಾ ಪ್ರಕರಣದಲ್ಲಿ ಇವೆಲ್ಲವೂ ದುರುದ್ದೇಶಪೂರಿತ, ಶೋಷಿತ ಸಮುದಾಯದ ವ್ಯಕ್ತಿ ಸಿಎಂ ಸ್ಥಾನದಲ್ಲಿ ಮುಂದುವರೆಯಬಾರದೆಂದು ಪಿತೂರಿ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಚಿತ್ತಾಪುರ | ಕಾಗಿಣಾ ನದಿಗೆ ಬಿದ್ದ ಕಾರು : ಚಾಲಕ ಸಾವು; ಇಬ್ಬರಿಗೆ ಗಾಯ

“ಇ.ಡಿ ಇಲಾಖೆ ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದರೆ, ಇಡಿ ತನಿಖೆ ನಡೆಸಲು ಅವಕಾಶವಿರುತ್ತದೆ. ಆದರೆ ಭೂ ವಿಷಯಕ್ಕೆ ಸಂಬಂಧಿಸಿರುವುದು” ಎಂದರು.

ಲೋಕೇಶ್, ಯೋಗೇಶ್, ರವಿನಂದನ್, ಪ್ರಕಾಶ್, ರವಿ, ಸಿದ್ದರಾಜು, ಎಸ್ ಎ ರಹೀಂ, ಶಿವರುದ್ರ, ನಂಜಪ್ಪ, ರಾಮಣ್ಣ, ಮಹೇಶ್, ಭಾಸ್ಕರ್, ರಾಜಣ್ಣ, ಕೇಶವ, ಸುನಿಲ್, ನಾರಾಯಣ, ರವಿನಾಯಕ, ರಂಗಸ್ವಾಮಿ, ರಾಜಶೇಖರ್, ನರಸಿಂಹ ಮೂರ್ತಿ, ನಂಜುಂಡಸ್ವಾಮಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ: ರಾಷ್ಟ್ರಮಟ್ಟದ ಸಾಧನೆಗೆ ಸಚಿವ ಕಾಶಪ್ಪನವರ ಕರೆ

ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಮಹತ್ವ ನೀಡುವ ಮೂಲಕ ಮಕ್ಕಳ ಸರ್ವಾಂಗೀಣ...

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾಕ್ಕೆ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು

ಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಹಾಗೂ ಮದರಸಾಕ್ಕೆ ಕಲ್ಲು ತೂರಾಟ...

ರಾಯಚೂರು | ಮಳೆಗಾಲ ಮುಗಿಯುವ ಮುನ್ನವೇ ಬಿಸಿಲಿನ ತಾಪ; ರಾಯಚೂರಿನಲ್ಲಿ 37.6 ಡಿಗ್ರಿ ಉಷ್ಣಾಂಶ

ಸೆಪ್ಟೆಂಬರ್‌ ಮಳೆಗಾಲ ಮುಕ್ತಾಯವಾಗಿ, ಅಕ್ಟೋಬರ್‌ನಲ್ಲಿ ಚಳಿಗಾಲ ಆರಂಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ...

ಕಲಬುರಗಿ | ಔಷಧೀಯ ಸಸ್ಯಗಳ ಪರಿಚಯದೊಂದಿಗೆ ಪರಿಸರ ಸಂರಕ್ಷಣೆಗೆ ಕರೆ

ಔಷಧೀಯ ಹಾಗೂ ಆಯುರ್ವೇದಿಕ ಗಿಡಮೂಲಿಕೆಗಳ ಮಹತ್ವ, ಸಾಂಪ್ರದಾಯಿಕ ಬಳಕೆ ಮತ್ತು ಆರೋಗ್ಯದ...