ಮೈಸೂರು | ವಾಹನ ತಪಾಸಣೆ ಹೆಸರಲ್ಲಿ ಹಗಲು ದರೋಡೆ; ಸ್ಥಳೀಯರ ಆರೋಪ

Date:

Advertisements

ಮೈಸೂರು ನಗರ ಪ್ರದೇಶಗಳಲ್ಲಿ ನಗರ ಸಂಚಾರ ಪೊಲೀಸರಿಂದ ವಾಹನ ತಪಾಸಣೆ ನಡೆಯುತ್ತಿದೆ. ನಗರ ಸಂಚಾರ ಪೊಲೀಸರು ತಪಾಸಣೆ ವೇಳೆ ಎಲ್ಲ ವಾಹನಗಳನ್ನು ತಡೆದು, ಗಂಟೆಗಟ್ಟಲೆ ನಿಲ್ಲಿಸಿಕೊಂಡು ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

“ನಗರದ ಸಬರ್‌ ರಸ್ತೆ, ಅರಮನೆ ರಸ್ತೆ ಆರ್‌ ಗೇಟ್‌ ಬಳಿ ಸಂಚಾರ ಪೊಲೀಸರ ದಂಡು ಜಮಾಯಿಸಿದ್ದು, ತಪಾಸಣೆ ಹೆಸರಿನಲ್ಲಿ ಎಲ್ಲ ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದಾರೆ. ಮೇಲ್ನೋಟಕ್ಕೆ ಹಗಲು ದರೋಡೆಯಂತೆ ಕಂಡುಬರುತ್ತಿದೆ” ಎಂದು ಸ್ಥಳೀಯ ವಾಹನ ಸವಾರರು ಆರೋಪಿಸಿದ್ದಾರೆ.

ವಾಹನ ತಪಾಸಣೆ

“ಪರೀಕ್ಷೆ ಮುಗಿಸಿಕೊಂಡು, ಮುಂದಿನ ಪರೀಕ್ಷೆಗೆ ಕೆಲವು ನೋಟ್ಸ್‌ಗಳನ್ನು ತೆಗೆದುಕೊಳ್ಳಲು ಅರಮನೆ ರಸ್ತೆ ಮಾರ್ಗದಲ್ಲಿ ಹೋಗುತ್ತಿದ್ದಾಗ ಆರ್‌ ಗೇಟ್‌ ಬಳಿ ತನ್ನ ವಾಹನವನ್ನು ತಡೆದು ಗಂಟೆ ಗಟ್ಟಲೆ ನಿಲ್ಲಿಸಿಕೊಂಡಿದ್ದಾರೆ. ದಾಖಲೆಗಳೆಲ್ಲವನ್ನು ತೋರಿಸಿದರೂ ಯಾವಾಗಲೋ ಸಿಗ್ನಲ್‌ ಜಂಪ್‌ ಮಾಡಿದ್ದೀಯ ಎಂದು ಹೇಳಿ ಗಾಡಿ ತಡೆದಿದ್ದಾರೆ” ಎಂದು ವಿದ್ಯಾರ್ಥಿಯೊಬ್ಬರು ಈ ದಿನ. ಕಾಮ್‌ಗೆ ತಿಳಿಸಿದ್ದಾರೆ.

Advertisements

“ಹಣವಿಲ್ಲ ಎಂದು ಹೇಳಿದರೂ ಬಿಡದೆ ತಡೆ ಹಿಡಿದಿದ್ದು, ಕೊನೆಗೆ ₹500 ಹಣ ಕಸಿದುಕೊಂಡು ಕಳುಹಿಸಿದರು. ನಾನು ಕೆಲಸ ಮಾಡಿಕೊಂಡು ಓದುತ್ತಿದ್ದೇನೆ. ಬಂದ ಹಣದಲ್ಲಿ ಮನೆಗೆ ಕೊಡುವುದರ ಜೊತೆಗೆ ನನ್ನ ಓದಿಗೂ ಅದೇ ಹಣವನ್ನು ಬಳಸಿಕೊಳ್ಳಬೇಕು. ಪರೀಕ್ಷೆಗೆ ಓದಲು ನೋಟ್ಸ್‌ ತೆಗೆದುಕೊಳ್ಳಲು ಇಟ್ಟುಕೊಂಡು ಹೋಗುತ್ತಿದ್ದ ಹಣವನ್ನು ಅವರಿಗೆ ನೀಡಿ ಪುಸ್ತಕವಿಲ್ಲದೇ ಬರಿಗೈಯಲ್ಲಿ ಮನೆಗೆ ಹೋಗುವಂತಾಯಿತು” ಎಂದು ಅವಲತ್ತುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ವ್ಯಾಪಕವಾದ ಅಪ್ರಾಪ್ತ ಮಕ್ಕಳ ಬೈಕ್ ಸವಾರಿ; ಸಂಚಾರಿ ಪೊಲೀಸ್‌ ನಿರ್ಲಕ್ಷ್ಯ

ವಾಹನ ತಪಾಸಣೆಗೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಎಸಿಪಿ ಟ್ರಾಫಿಕ್‌ ಅವರನ್ನು ಸಂಪರ್ಕಿಸಿದಾಗ ಪ್ರತಿಕ್ರಿಯಿಸಿದ್ದು, ಯಾರೋ ಹಾಗೆ ಹೇಳಿ ಹಣ ತೆಗೆದುಕೊಳ್ಳುತ್ತಿದ್ದಾರೆಂದು ಹೇಳಿದರೆ ಹೇಗೆ? ಹಣ ತೆಗೆದುಕೊಂಡು ರಶೀದಿ ಕೊಡದೆ ಕಳುಹಿಸಿರುವುದಕ್ಕೆ ಪ್ರೂಫ್‌ ಬೇಕಲ್ಲವೇ ಎಂದರು.

“ಯಾರ ಬಳಿ ಹಣ ತೆಗೆದುಕೊಂಡು ರಶೀದಿ ಕೊಡದೆ ಕಳುಹಿಸಿದ್ದಾರೆ, ಹಣ ನೀಡಿದವರು ಬಂದು ತೆಗೆದುಕೊಂಡಿರುವವರ ವಿರುದ್ಧ ದೂರು ನೀಡಲಿ. ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X