ಮೈಸೂರು | ಸಾಲಬಾಧೆ; ಇಬ್ಬರು ರೈತರ ಆತ್ಮಹತ್ಯೆ

Date:

Advertisements

ಸಾಲಬಾಧೆ ತಾಳಲಾರದೆ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿರುವ ಪ್ರತ್ಯೇಕ ಘಟನೆಗಳು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿವೆ.

ತಾಲೂಕಿನ ಕರ್ಣಕುಪ್ಪೆ ಗ್ರಾಮದ ರೈತ ರಾಜಶೆಟ್ಟಿ(78) ಮತ್ತು ಶ್ಯಾನುಭೋಗನಹಳ್ಳಿಯ ಸುರೇಶ್(58) ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು.

ರೈತರು ತಾವು ಬೆಳೆದ ಬೆಳೆಯನ್ನು ನಂಬಿ ಲಕ್ಷಾಂತರ ರೂ. ಸಾಲಸೋಲ ಮಾಡಿ ವ್ಯವಸಾಯ ಮಾಡುತ್ತಾರೆ. ಬೆಳೆ ಚೆನ್ನಾಗಿ ಬಂದರೆ ಬೆಲೆ ಇರುವುದಿಲ್ಲ. ಬೆಲೆ ಇದ್ದರೆ ಬೆಳೆ ಬರುವುದಿಲ್ಲ. ರೈತರ ಬಾಳು ಡೋಲಾಯಮಾನ ಪರಿಸ್ಥಿತಿ. ವ್ಯವಸಾಯ ಮಾಡೋದು ಇಂದಿನ ಪರಿಸ್ಥಿತಿಯಲ್ಲಿ ದುಸ್ಸಾಹಸ ಎನ್ನುವಂತಿದೆ. ಗೊಬ್ಬರಗೋಡು, ಕೀಟನಾಶಕ, ಯೂರಿಯಾ, ಉಳುಮೆ ಮಾಡುವುದು, ಖರ್ಚು ವೆಚ್ಚ ದುಬಾರಿಯಾಗಿರುವ ಸಮಯದಲ್ಲಿ ರೈತ ಬೆಳೆದ ಬೆಳೆಗೆ ಸೂಕ್ತ ಬೆಂಬಲ ಬೆಲೆ ಇರದೆ ಕಂಗಾಲಾಗಿ ಹೋಗಿದ್ದು ವ್ಯವಸಾಯಕ್ಕೆ ಪಡೆದ ಸಾಲ ತೀರಿಸಲು ಆಗದೆ ಪ್ರಾಣ ಕಳೆದುಕೊಳ್ಳುವ ಸ್ಥಿತಿ ಎದುರಾಗಿದೆ.

Advertisements

ಹುಣಸೂರು ತಾಲೂಕು ಶ್ಯಾನುಭೋಗನಹಳ್ಳಿಯ ಸುರೇಶ್(58) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೊಸೈಟಿ, ಬ್ಯಾಂಕ್ ಸೇರಿದಂತೆ ಅಂದಾಜು 7 ಲಕ್ಷ ರೂ. ಸಾಲ ಮಾಡಿದ್ದ ಎನ್ನಲಾಗಿದ್ದು, ಸರಿಯಾದ ಬೆಳೆ ಬಾರದ ಹಿನ್ನೆಲೆಯಲ್ಲಿ ಸಾಲ ಹಿಂದುರಿಗಿಸಲಾಗದೆ ತನ್ನ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದರಿ ಘಟನೆಗೆ ಸಂಬಂಧಿಸಿದಂತೆ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ದುರ್ಮರಣ

ಸದರಿ ತಾಲೂಕಿನ ಇನ್ನೋರ್ವ ರೈತ ಹನಗೊಡು ಹೋಬಳಿ ಕರ್ಣಕುಪ್ಪೆ ಗ್ರಾಮದ ರಾಜಶೆಟ್ಟಿ (78) ತಮ್ಮ ಐದು ಎಕರೆ ಭೂಮಿಯಲ್ಲಿ ತಂಬಾಕು ಹಾಗೂ ರಾಗಿ ಬೆಳೆ ಬೆಳೆದಿದ್ದಾರೆ. ಬ್ಯಾಂಕ್, ಸೊಸೈಟಿ, ಮಹಿಳಾ ಸಂಘ, ಕೈ ಸಾಲ ಸೇರಿದಂತೆ ಅಂದಾಜು 8 ಲಕ್ಷ ಸಾಲ ಪಡೆದಿದ್ದರು ಎನ್ನಲಾಗಿದೆ. ಸರಿಯಾದ ಸಮಯಕ್ಕೆ ಸಾಲ ತೀರಿಸಲಾಗದೆ ಬಡ್ಡಿ ಹೆಚ್ಚಾದ್ದರಿಂದ ಮನನೊಂದು ತಮ್ಮ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸದರಿ ಘಟನೆಗೆ ಸಂಬಂಧಿಸಿದಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X