ಮೈಸೂರು | ಸಿದ್ದರಾಮಯ್ಯ ಬಗ್ಗೆ ಅವಹೇಳನ; ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಪ್ರತಿಭಟನೆ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕರ್ನಾಟಕ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಅಧ್ಯಕ್ಷ ಕೆ ಎಸ್ ಶಿವರಾಮು ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಹೆಗಡೆ ವಿರುದ್ಧ ಘೋಷಣೆ ಕೂಗಿ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡ ಶಿವರಾಮು ಮಾತನಾಡಿ, “ಹೆಗಡೆ ಅವರ ಹೇಳಿಕೆ ಆರ್‌ಎಸ್‌ಎಸ್‌ ಮತ್ತು ಬಿಜೆಪಿಯ ಸಂಸ್ಕೃತಿಯನ್ನು ಬಹಿರಂಗಪಡಿಸಿದೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಪಡೆಯಲು ಬಿಜೆಪಿ ಸಂಸದರು ಸಿಎಂ ವಿರುದ್ಧ ಕೆಟ್ಟ ಭಾಷೆಯನ್ನು ಬಳಸಿದ್ದಾರೆ” ಎಂದು ಅವರು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಪ್ರಚೋದನಾಕಾರಿ ಹೇಳಿಕೆ; ಸಂಸದ ಅನಂತ್‌ ಕುಮಾರ್ ಹೆಗಡೆ ಬಂಧನಕ್ಕೆ ಆಗ್ರಹ

“ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಸಂಜಯ್ ಗಾಂಧಿ ಗೋಹತ್ಯೆಯಿಂದ ಶಾಪಗ್ರಸ್ತರಾಗಿದ್ದರೆಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು. ಈ ಹಿಂದೆ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಹೇಳಿಕೆಯನ್ನು ನೀಡಿದ್ದರು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X