ಮೈಸೂರು | ದೇವರಾಜ ಅರಸು ಜನಸಾಮಾನ್ಯರು ಸ್ಮರಿಸುವಂತಹ ನಾಯಕ: ಎಂಎಲ್‌ಸಿ ವಿಶ್ವನಾಥ್

Date:

Advertisements

ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರು ಜನಸಾಮಾನ್ಯರು ಸ್ಮರಿಸುವಂತಹ ನಾಯಕ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ (ಎಂಎಲ್‌ಸಿ) ಎ.ಎಚ್ ವಿಶ್ವನಾಥ್ ಹೇಳಿದರು.

ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ದೇವರಾಜ ಅರಸು ಅವರ ಪುತ್ಥಳಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

“ಅರಸು ಅವರು ಹಾವನೂರು ಆಯೋಗದ ವರದಿಯನ್ನು ಜಾರಿಗೆ ತಂದು ಹಲವು ಜಾತಿಗಳಿಗೆ ರಾಜಕೀಯ ಮೀಸಲಾತಿ ಒದಗಿಸಿ, ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿದ ಡಿ ದೇವರಾಜ ಅರಸು ಅವರು ಸದಾ ಕಾಲಕ್ಕೂ ನೆನಪಿನಲ್ಲಿ ಉಳಿಯುವ ನಾಯಕರಾಗಿದ್ದಾರೆ. ಒಂದೇ ಒಂದು ನಿವೇಶನ ನೀಡಲು ಸಾಧ್ಯವಾಗದ ಸಂಂದರ್ಭದಲ್ಲಿ ಅರಸು ಅವರು ಬಡವರಿಗೆ ಸಾವಿರಾರು ಎಕರೆ ಭೂಮಿಯನ್ನು ವಿತರಿಸಿ, ಅವರನ್ನು ಭೂಮಾಲೀಕರನ್ನಾಗಿ ಮಾಡಿದರು” ಎಂದು ವಿಶ್ವನಾಥ್ ಸ್ಮರಿಸಿದರು.

Advertisements

“ದೇವರಾಜ ಅರಸು ಅವರ ಕ್ರಾಂತಿಕಾರಿ ಯೋಜನೆಗಳು ದೇಶಕ್ಕೆ ಮಾದರಿಯಾಗಿದ್ದವು. 1978ರಲ್ಲಿ ನನ್ನಂತಹ ಜನರನ್ನು ಗುರುತಿಸಿ ಶಾಸಕನನ್ನಾಗಿ ಮಾಡಿದರು. ನಂತರ, 70 ಮಂದಿ ಶಾಸಕರು ಯುವಕರಿದ್ದರು. ಜತೆಗೆ ವರ್ಗವನ್ನು ಲೆಕ್ಕಿಸದೆ ಜನರಿಗೆ ಅವಕಾಶಗಳನ್ನು ನೀಡಿದ್ದರು. ಮಲ್ಲಿಕಾರ್ಜುನ ಖರ್ಗೆ, ಜನಾರ್ದನ ಪೂಜಾರಿ, ವೀರಪ್ಪ ಮೊಯ್ಲಿ ಅವರಂತಹ ನಾಯಕರು ಅರಸು ಅವರ ಮಾರ್ಗದರ್ಶನದಲ್ಲಿ ನಾಯಕರಾಗಿ ಬೆಳೆದರು” ಎಂದರು.

“ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಲು ಚಿನ್ನಪ್ಪ ರೆಡ್ಡಿ, ಟಿ ವೆಂಕಟಸ್ವಾಮಿ ಅವರ ನೇತೃತ್ವದಲ್ಲಿ ಆಯೋಗಗಳನ್ನು ರಚಿಸಿದರು. ವೀರಶೈವ ಮತ್ತು ಒಕ್ಕಲಿಗರಿಗೂ ಮೀಸಲಾತಿ ನೀಡಿದ್ದಾರೆ” ಎಂದರು.

ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮಾತನಾಡಿ, “ನಾವು 21ನೇ ಶತಮಾನದಲ್ಲಿದ್ದು, ದೇಶವನ್ನು ಆಳುವ ನಾಯಕರು ಅರಸು ಮತ್ತು ಅವರ ಕೆಲಸವನ್ನು ನೆನಪಿಸಿಕೊಳ್ಳಬೇಕು. ದುಡಿಯುವ ಕೈಗಳಿಗೆ ಹೆಚ್ಚಿನ ಕೆಲಸ ಸಿಗಬೇಕು. ದೇಶದಲ್ಲಿ ಸ್ನೇಹಪರ ವಾತಾವರಣವನ್ನು ಸೃಷ್ಟಿಸುವ ಅವಶ್ಯಕತೆಯಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗುತ್ತಿಗೆ ಧೋರಣೆ ಕೈಬಿಟ್ಟು ಸಿಎಚ್‌ಒ ನೌಕರರನ್ನು ಖಾಯಂ ಮಾಡಿ: ಆರ್ ಮಾನಸಯ್ಯ

“ದೇವರಾಜ ಅರಸು ಅವರ ಆಡಳಿತವನ್ನು ಗಮನದಲ್ಲಿಟ್ಟುಕೊಂಡು ವ್ಯವಸ್ಥೆಯನ್ನು ರೂಪಿಸಬೇಕು. ಕಲ್ಲಹಳ್ಳಿ ಗ್ರಾಮವನ್ನು ಅಭಿವೃದ್ಧಿಪಡಿಸಲು 10 ವರ್ಷಗಳು ಬೇಕಾಯಿತು” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X