ಮೈಸೂರು | ಜೋಡಿ ಕೊಲೆ ಪ್ರಕರಣ; ಒರ್ವನ ಬಂಧನ, ಮತ್ತಿಬ್ಬರಿಗಾಗಿ ಶೋಧ

Date:

Advertisements

ಮೂರು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಹುಣಸೂರಲ್ಲಿ ನಡೆದಿದ್ದ ಭೀಕರ ಜೋಡಿ ಕೊಲೆ ಪ್ರಕರಣ ತಿರುವು ಕಂಡಿದ್ದು, ಕೇವಲ 485 ರೂಪಾಯಿಯಾಗಿ ಈ ಡಬಲ್​ ಮರ್ಡರ್​ ನಡೆದಿದೆ ಎನ್ನಲಾಗಿದೆ.

ಆರೋಪಿ ಅಭಿಷೇಕ್​ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಮತ್ತಿಬ್ಬರು ಆರೋಪಿಗಳು ನಾಪತ್ತೆಯಾಗಿದ್ದಾರೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಹುಣಸೂರು ಪಟ್ಟಣದ ಸರಸ್ವತಿಪುರಂ ಬಡಾವಣೆಯಲ್ಲಿರುವ ಮಿಸ್ಬಾ ಸಾಮಿಲ್‌ನಲ್ಲಿದ್ದ ಇಬ್ಬರು ಕಾವಲುಗಾರರಾದ ವೆಂಕಟೇಶ (75), ಷಣ್ಮುಗ (65) ಎಂಬುವರ ಹತ್ಯೆ ಮೂರು ದಿನಗಳ ಹಿಂದೆ ನಡೆದಿತ್ತು. ಇವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣವನ್ನು ಈಗ ಪೊಲೀಸರು ಬೇಧಿಸಿದ್ದಾರೆ.

Advertisements

ಕೊಲೆ ಆರೋಪಿ ಅಭಿಷೇಕ್ ಸುಲಿಗೆ,​ ದರೋಡೆ, ಕಳ್ಳತನ, ವಸೂಲಿಯನ್ನೇ ಕಾಯಕ ಮಾಡಿಕೊಂಡಿದ್ದ. ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಅವನಿಗೆ ಶೋಕಿಗಾಗಿ ಹಣ ಬೇಕಿತ್ತು. ನ್ಯಾಯವಾಗಿ ದುಡಿಯುವುದು ಗೊತ್ತಿಲ್ಲದ ಈತ ತನ್ನ ಸಹಚರರೊಂದಿಗೆ ಸೇರಿ ಕಳ್ಳತನದ ಪ್ಲ್ಯಾನ್ ಹಾಕಿದ್ದ.

ಇಬ್ಬರು ವಾಚ್‌ಮ್ಯಾನ್​ಗಳಿದ್ದ ಸಾಮಿಲ್​​ಗೆ ನುಗ್ಗಿ ಅವರಿಬ್ಬರನ್ನೂ ಬೆದರಿಸಿ ಹಣ ಕೊಡುವಂತೆ ಹೇಳಿದ್ದಾರೆ. ಇಬ್ಬರ ಜೇಬನ್ನೂ ಹುಡುಕಿದಾಗ ಸಿಕ್ಕಿದ್ದು 485 ರೂಪಾಯಿ. ಇದರಿಂದ ಕೋಪಗೊಂಡ ಅಭಿಷೇಕ್ ಮತ್ತು ಸಹಚರರು ಕಾವಲುಗಾರರನ್ನು ಕೊಂದು ಹಾಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿರಾಡಿಘಾಟ್ ಮಾರ್ಗದಲ್ಲಿ ಸುರಂಗ ನಿರ್ಮಾಣ; ಕೇಂದ್ರಕ್ಕೆ ಪ್ರಸ್ತಾವನೆ: ಸತೀಶ್‌ ಜಾರಕಿಹೊಳಿ

ಈ ಮರದ ಮಿಲ್​ಗೆ ನಿಜವಾದ ಕಾವಲುಗಾರ ವೆಂಕಟೇಶ್​ ಆಗಿದ್ದ. ಷಣ್ಮುಗ ಬುದ್ಧಿಮಾಂದ್ಯನಾಗಿದ್ದು, ಸದಾ ವೆಂಕಟೇಶ್ ಜತೆಗೇ ಇರುತ್ತಿದ್ದ. ಅವನನ್ನೂ ವಾಚ್​ಮ್ಯಾನ್​ ಎಂದೇ ಪರಿಗಣಿಸಲಾಗಿತ್ತು. ಇವರಿಬ್ಬರೂ ಹತ್ಯೆಯಾಗಿದ್ದು ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಇದೀಗ ಆರೋಪಿ ಅಭಿಷೇಕ್​​ನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇನ್ನಿಬ್ಬರು ಆರೋಪಿಗಳ ಪತ್ತೆಗೆ ಶೋಧ ನಡೆಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X