ಮೈಸೂರು | ಜೋಡಿ ಕೊಲೆ ಪ್ರಕರಣ; ಒರ್ವನ ಬಂಧನ, ಮತ್ತಿಬ್ಬರಿಗಾಗಿ ಶೋಧ

Date:

ಮೂರು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಹುಣಸೂರಲ್ಲಿ ನಡೆದಿದ್ದ ಭೀಕರ ಜೋಡಿ ಕೊಲೆ ಪ್ರಕರಣ ತಿರುವು ಕಂಡಿದ್ದು, ಕೇವಲ 485 ರೂಪಾಯಿಯಾಗಿ ಈ ಡಬಲ್​ ಮರ್ಡರ್​ ನಡೆದಿದೆ ಎನ್ನಲಾಗಿದೆ.

ಆರೋಪಿ ಅಭಿಷೇಕ್​ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಮತ್ತಿಬ್ಬರು ಆರೋಪಿಗಳು ನಾಪತ್ತೆಯಾಗಿದ್ದಾರೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಹುಣಸೂರು ಪಟ್ಟಣದ ಸರಸ್ವತಿಪುರಂ ಬಡಾವಣೆಯಲ್ಲಿರುವ ಮಿಸ್ಬಾ ಸಾಮಿಲ್‌ನಲ್ಲಿದ್ದ ಇಬ್ಬರು ಕಾವಲುಗಾರರಾದ ವೆಂಕಟೇಶ (75), ಷಣ್ಮುಗ (65) ಎಂಬುವರ ಹತ್ಯೆ ಮೂರು ದಿನಗಳ ಹಿಂದೆ ನಡೆದಿತ್ತು. ಇವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣವನ್ನು ಈಗ ಪೊಲೀಸರು ಬೇಧಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೊಲೆ ಆರೋಪಿ ಅಭಿಷೇಕ್ ಸುಲಿಗೆ,​ ದರೋಡೆ, ಕಳ್ಳತನ, ವಸೂಲಿಯನ್ನೇ ಕಾಯಕ ಮಾಡಿಕೊಂಡಿದ್ದ. ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಅವನಿಗೆ ಶೋಕಿಗಾಗಿ ಹಣ ಬೇಕಿತ್ತು. ನ್ಯಾಯವಾಗಿ ದುಡಿಯುವುದು ಗೊತ್ತಿಲ್ಲದ ಈತ ತನ್ನ ಸಹಚರರೊಂದಿಗೆ ಸೇರಿ ಕಳ್ಳತನದ ಪ್ಲ್ಯಾನ್ ಹಾಕಿದ್ದ.

ಇಬ್ಬರು ವಾಚ್‌ಮ್ಯಾನ್​ಗಳಿದ್ದ ಸಾಮಿಲ್​​ಗೆ ನುಗ್ಗಿ ಅವರಿಬ್ಬರನ್ನೂ ಬೆದರಿಸಿ ಹಣ ಕೊಡುವಂತೆ ಹೇಳಿದ್ದಾರೆ. ಇಬ್ಬರ ಜೇಬನ್ನೂ ಹುಡುಕಿದಾಗ ಸಿಕ್ಕಿದ್ದು 485 ರೂಪಾಯಿ. ಇದರಿಂದ ಕೋಪಗೊಂಡ ಅಭಿಷೇಕ್ ಮತ್ತು ಸಹಚರರು ಕಾವಲುಗಾರರನ್ನು ಕೊಂದು ಹಾಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿರಾಡಿಘಾಟ್ ಮಾರ್ಗದಲ್ಲಿ ಸುರಂಗ ನಿರ್ಮಾಣ; ಕೇಂದ್ರಕ್ಕೆ ಪ್ರಸ್ತಾವನೆ: ಸತೀಶ್‌ ಜಾರಕಿಹೊಳಿ

ಈ ಮರದ ಮಿಲ್​ಗೆ ನಿಜವಾದ ಕಾವಲುಗಾರ ವೆಂಕಟೇಶ್​ ಆಗಿದ್ದ. ಷಣ್ಮುಗ ಬುದ್ಧಿಮಾಂದ್ಯನಾಗಿದ್ದು, ಸದಾ ವೆಂಕಟೇಶ್ ಜತೆಗೇ ಇರುತ್ತಿದ್ದ. ಅವನನ್ನೂ ವಾಚ್​ಮ್ಯಾನ್​ ಎಂದೇ ಪರಿಗಣಿಸಲಾಗಿತ್ತು. ಇವರಿಬ್ಬರೂ ಹತ್ಯೆಯಾಗಿದ್ದು ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಇದೀಗ ಆರೋಪಿ ಅಭಿಷೇಕ್​​ನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇನ್ನಿಬ್ಬರು ಆರೋಪಿಗಳ ಪತ್ತೆಗೆ ಶೋಧ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...