ಮೈಸೂರು ಜೀವಧಾರ ರಕ್ತ ನಿಧಿ ಕೇಂದ್ರದ ವತಿಯಿಂದ ರಾಮಸ್ವಾಮಿ ವೃತದಲ್ಲಿ ವಾಹನ ಸವಾರರಿಗೆ ಹಾಗೂ ರಸ್ತೆ ಬದಿಯಲ್ಲಿ ನಿಂತಿರುವ ಸಾರ್ವಜನಿಕರಿಗೆ ರಕ್ತದಾನದ ಮಹತ್ವದ ಅರಿವು ಮೂಡಿಸುವ ನಿಟ್ಟಿನಲ್ಲಿ ಗಣೇಶ ವೇಷದಾರಿ ಹಳೆ ಕೆಸರೆ ನಿವಾಸಿ ಲೋಹಿತ್ ರವರು ಜಾಗೃತಿಯ ನಾಮಫಲಕ ಹಿಡಿದು, ಕರಪತ್ರ ನೀಡಿ ಜಾಗೃತಿ ಮೂಡಿಸಿದರು.
ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿ “ನಾವು ನಿರಂತರವಾಗಿ ರಕ್ತದಾನದ ಬಗ್ಗೆ ಹಲವಾರು ರೀತಿಯಲ್ಲಿ ಜಾಗೃತಿ ಮೂಡಿಸುತ್ತಾ ಬಂದಿದ್ದೇವೆ. ಗೌರಿ ಗಣೇಶ ಹಬ್ಬ ಇರುವ ಹಿನ್ನೆಲೆಯಲ್ಲಿ ವಿಭಿನ್ನವಾಗಿ ಸಾರ್ವಜನಿಕರಲ್ಲಿ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಿದ್ದೇವೆ. ರಕ್ತದಾನ ಮಹಾದಾನ. ಮೂಢನಂಬಿಕೆಯನ್ನು ಬಿಟ್ಟು ಸಾರ್ವಜನಿಕರು ಸ್ವಯಂ ಪ್ರೇರಿತ ರಕ್ತದಾನ ಮಾಡಬಹುದು” ಎಂದು ಹೇಳಿದರು.

ನೀವು ನೀಡುವ ರಕ್ತದಿಂದ ಇನ್ನೊಂದು ಜೀವ ಉಳಿಸಬಹುದು. ದಯಮಾಡಿ ಯುವ ಪೀಳಿಗೆ ನಿರಂತರವಾಗಿ ಸ್ವಯಂ ಪ್ರೇರಿತ ರಕ್ತದಾನ ಮಾಡಲಿ. ಆರೋಗ್ಯದ ದೃಷ್ಟಿಯಿಂದಲೂ ರಕ್ತ ನೀಡುವುದು ಒಳ್ಳೆಯದು. ಇದರ ಬಗ್ಗೆ ಯುವ ಪೀಳಿಗೆ ಗಮನ ಹರಿಸಲಿ ಎಂದು ಮನವಿ ಮಾಡಿದರು
ಈ ಸುದ್ದಿ ಓದಿದ್ದೀರಾ? ಮೈಸೂರು | ಮನುವಾದಿಗಳ ವಿಷ ತಲೆಗೇರಿಸಿಕೊಂಡ ಬಿಜೆಪಿಗರು; ಮುಸ್ಲಿಮರ ಕಂಡರೆ ದ್ವೇಷಕಾರುವುದನ್ನು ಬಿಡಿ : ಸಚಿವ ಮಹದೇವಪ್ಪ
ಇದೇ ಸಂದರ್ಭದಲ್ಲಿ ಕೆಎಂಪಿಕೆ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಸೂರಜ್, ಸದಾಶಿವ್, ಚಂದ್ರು ಸೇರಿದಂತೆ ಇನ್ನಿತರರು ಇದ್ದರು.