ಮೈಸೂರು | ಚುನಾವಣಾ ಪ್ರಚಾರಕ್ಕೆ ರೌಡಿ ಶೀಟರ್‌ಗಳನ್ನು ಬಳಸಿಕೊಳ್ಳದಂತೆ ಎಚ್ಚರಿಕೆ

Date:

  • ಸಮಾಜ ವಿರೋಧಿ ಕೃತ್ಯಗಳಲ್ಲಿ ತೊಡಗದಂತೆ 2,500 ರೌಡಿ ಶೀಟರ್‌ಗಳಿಗೆ ಎಚ್ಚರಿಕೆ
  • ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ಕಾನೂನು ಕ್ರಮ

ರೌಡಿಗಳಿಗೆ ಪೊಲೀಸ್‌ ಇಲಾಖೆ ಎಚ್ಚರಿಕೆ ನೀಡಿದ ಬಳಿಕ ರಾಜಕಾರಣಿಗಳೂ ಚುನಾವಣಾ ಪ್ರಚಾರಕ್ಕೆ ಕಾರ್ಯಕರ್ತರನ್ನು ಆಯ್ಕೆ ಮಾಡುವಾಗ ಜಾಗರೂಕರಾಗಿದ್ದಾರೆ. ಆಯಾ ಬೂತ್‌ಗಳಲ್ಲಿನ ತಮ್ಮ ಪಕ್ಷದ ಕಾರ್ಯಕರ್ತರಿಗೆ ಮಾತ್ರ ಪ್ರಚಾರದ ಜವಾಬ್ದಾರಿ ನೀಡಲಾಗುವುದು ಎಂದು ರಾಜಕೀಯ ನಾಯಕರು ಹೇಳಿದ್ದಾರೆ.

- Advertisement -

“ಚುನಾವಣೆ ಸಂದರ್ಭದಲ್ಲಿ ರೌಡಿ ಶೀಟರ್‌ ಪಟ್ಟಿಯಲ್ಲಿರುವ ಕೆಲವು ಗಲಭೆಕೋರರನ್ನು ಗಡಿಪಾರು ಮಾಡಿದ ಬಳಿಕ ಉಳಿದ ರೌಡಿಗಳ ಪಟ್ಟಿ ಮಾಡಿ ಅವರಿಗೆ ಎಚ್ಚರಿಕೆ ನೀಡಲಾಗಿದೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಾರ್ವಜನಿಕರಿಗೆ ಬೆದರಿಕೆ ಹಾಕುವುದು ಅಥವಾ ಏನನ್ನಾದರೂ ಮಾಡುವಂತೆ ಒತ್ತಾಯಿಸುವುದು ಸೇರಿದಂತೆ ಮುಂತಾದ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗದಂತೆ ಜಿಲ್ಲೆಯ 2,500ಕ್ಕೂ ಹೆಚ್ಚು ರೌಡಿಗಳಿಂದ ಪ್ರತಿಜ್ಞೆ ಮಾಡಿಸಲಾಗಿದೆ. ಅವರು ಕಾನೂನು ಉಲ್ಲಂಘನೆ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ನಗರ ಮತ್ತು ಜಿಲ್ಲಾ ಪೊಲೀಸರು ಹಾಗೂ ಜಿಲ್ಲಾಡಳಿತದ ವತಿಯಿಂದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಚುನಾವಣಾ ಆಯೋಗ ಹೊರಡಿಸಿದ ಎಲ್ಲ ಮಾರ್ಗಸೂಚಿಗಳನ್ನು ಪಾಲಿಸುವಂತೆ ನಿರ್ದೇಶನ ನೀಡಲಾಗಿದೆ.

“ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್‌ ಕಾರ್ಯಕರ್ತರನ್ನು ಮಾತ್ರ ಬಳಸಿಕೊಳ್ಳಲಾಗುತ್ತಿದೆ. ಪ್ರತಿಯೊಬ್ಬರೂ ಆಯಾ ಬೂತ್‌ಗಳಲ್ಲಿ ಕೆಲಸ ಮಾಡಬೇಕು. ಪಕ್ಷದ ಮುಖಂಡರು ಕಾರ್ಯಕರ್ತರನ್ನು ಮೇಲ್ವಿಚಾರಣೆ ಮಾಡಲಿದ್ದಾರೆ” ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಆರ್ ಮೂರ್ತಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಹುಲ್ ಗಾಂಧಿ ಕೋಲಾರ ಭೇಟಿ ಮುಂದೂಡಿಕೆ

“ಚುನಾವಣಾ ಕೆಲಸದ ಸಮಯದಲ್ಲಿ ಜಾಗರೂಕರಾಗಿರಲು ಮತ್ತು ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ಯಾವುದೇ ಹಿನ್ನೆಲೆಯ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡುವಂತೆ ನಮ್ಮ ಎಲ್ಲ ಕಾರ್ಯಕರ್ತರಿಗೆ ತಿಳಿಸಿದ್ದೇವೆ. ಪ್ರಚಾರದ ಜವಾಬ್ದಾರಿಯನ್ನು ನಮ್ಮ ಕಾರ್ಯಕರ್ತರಿಗೆ ಮಾತ್ರ ನೀಡಲಾಗಿದೆ” ಎಂದು ನಗರ ಬಿಜೆಪಿ ಅಧ್ಯಕ್ಷ ಟಿ ಎಸ್ ಶ್ರೀವತ್ಸ ಹೇಳಿದ್ದಾರೆ.

“ಜಿಲ್ಲೆಯಲ್ಲಿ ಸುಮಾರು 1,400 ರೌಡಿಗಳಿದ್ದು, ಚುನಾವಣೆ ಸಂದರ್ಭದಲ್ಲಿ ಯಾವುದೇ ಸಮಾಜ ವಿರೋಧಿ ಚಟುವಟಿಕೆ ನಡೆಸದಂತೆ ಅವರಿಂದ ಪ್ರತಿಜ್ಞೆ ಮಾಡಿಸಿದ್ದೇವೆ. ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...

ಕಲಬುರಗಿ | ಗ್ಯಾರಂಟಿ ಯೋಜನೆಗಳು ಹಂಗಲ್ಲ, ಜನರ ಹಕ್ಕು: ಪ್ರೊ. ಟಿ.ಆರ್. ಚಂದ್ರಶೇಖರ್

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲಿನ ಹೂಡಿಕೆಯಾಗಿದ್ದು, ಅವು...