ಮೈಸೂರು | ಮತದಾನದ ವೇಳೆ ವ್ಯಕ್ತಿಯೋರ್ವನಿಂದ ಇವಿಎಂ ನಿಯಂತ್ರಣ ದ್ವಂಸ

Date:

Advertisements

ಮೈಸೂರು ನಗರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 40ರಲ್ಲಿ ಮತದಾನ ಮಾಡಲು ಬಂದಿದ್ದ ಹೂಟಗಳ್ಳಿ ನಿವಾಸಿ ಶಿವಮೂರ್ತಿ (48) ವಿದ್ಯುನ್ಮಾನ ಮತಯಂತ್ರ (ಇವಿಎಂ) ನಿಯಂತ್ರಣ ಘಟಕ ಉಪಕರಣ ದ್ವಂಸಗೊಳಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಮೇ.10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವ ವೇಳೆ ತನ್ನ ಅಧಿಕೃತ ಗುರುತಿನ ಚೀಟಿ ತೋರಿಸಿ, ಸಹಿ ಮಾಡಿ, ಬೆರಳಿಗೆ ಶಾಯಿ ಹಾಕಿದ ಬಳಿಕ ಶಿವಮೂರ್ತಿ ಎಂಬುವವರು ಏಕಾಏಕಿ ವಿದ್ಯುನ್ಮಾನ ಉಪಕರಣವನ್ನು ಒಡೆದು ಹಾಕಿದ್ದಾರೆ.

ಮತಯಂತ್ರ ಒಡೆದ ವ್ಯಕ್ತಿ
ಮತಯಂತ್ರ ನಿಯಂತ್ರಣ ಒಡೆದು ಹಾಕಿದ ವ್ಯಕ್ತಿ

ಶಿವಮೂರ್ತಿ ಜೊತೆಯಲ್ಲಿ ಬಂದಿದ್ದ ಪತ್ನಿ ಹಾಗೂ ಸ್ಥಳದಲ್ಲಿದ್ದ ಅಧಿಕಾರಿಗಳು ಒಮ್ಮೆಲೆ ಗಾಬರಿಗೊಂಡಿದ್ದಾರೆ. ವಿಜಯನಗರ ಪೊಲೀಸ್ ಠಾಣೆ ಅಧಿಕಾರಿಗಳು ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ನಾಳೆ ಚುನಾವಣೆ ಫಲಿತಾಂಶ ಪ್ರಕಟ: ಮತ ಎಣಿಕೆ ಕೇಂದ್ರಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್

ಅರ್ಧ ಗಂಟೆ ತಡವಾಗಿ ವಿದ್ಯುನ್ಮಾನ ಯಂತ್ರ ಬದಲಾಯಿಸಿದ ಅಧಿಕಾರಿಗಳು ಎಂದಿನಂತೆ ಮತ ಚಲಾಯಿಸಲು ಅನುವು ಮಾಡಿಕೊಟ್ಟಿದ್ದಾರೆ.

ಮಾಸಿಕ ಅಸ್ವಸ್ತ
ಮತಯಂತ್ರ ನಿಯಂತ್ರಣ ದ್ವಂಸಗೊಳಿಸಿದ ವ್ಯಕ್ತಿಯನ್ನು ನಿಯಂತ್ರಿಸುತ್ತಿರುವ ಸಿಬ್ಬಂದಿ

ಪೊಲೀಸ್ ಅಧಿಕಾರಿಗಳು ಬಂಧಿತ ವ್ಯಕ್ತಿಯನ್ನು ತನಿಖೆಗೆ ಒಳಪಡಿಸಿದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿರುವುದು ದೃಢಪಟ್ಟಿದೆ. ನಂತರ ಬಂಧಿತ ಶಿವಮೂರ್ತಿ ಅವರಿಗೆ ತಿಳುವಳಿಕೆ ಹೇಳಿ ಬಿಡುಗಡೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X