ಮೈಸೂರು ನಗರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 40ರಲ್ಲಿ ಮತದಾನ ಮಾಡಲು ಬಂದಿದ್ದ ಹೂಟಗಳ್ಳಿ ನಿವಾಸಿ ಶಿವಮೂರ್ತಿ (48) ವಿದ್ಯುನ್ಮಾನ ಮತಯಂತ್ರ (ಇವಿಎಂ) ನಿಯಂತ್ರಣ ಘಟಕ ಉಪಕರಣ ದ್ವಂಸಗೊಳಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಮೇ.10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವ ವೇಳೆ ತನ್ನ ಅಧಿಕೃತ ಗುರುತಿನ ಚೀಟಿ ತೋರಿಸಿ, ಸಹಿ ಮಾಡಿ, ಬೆರಳಿಗೆ ಶಾಯಿ ಹಾಕಿದ ಬಳಿಕ ಶಿವಮೂರ್ತಿ ಎಂಬುವವರು ಏಕಾಏಕಿ ವಿದ್ಯುನ್ಮಾನ ಉಪಕರಣವನ್ನು ಒಡೆದು ಹಾಕಿದ್ದಾರೆ.
ಶಿವಮೂರ್ತಿ ಜೊತೆಯಲ್ಲಿ ಬಂದಿದ್ದ ಪತ್ನಿ ಹಾಗೂ ಸ್ಥಳದಲ್ಲಿದ್ದ ಅಧಿಕಾರಿಗಳು ಒಮ್ಮೆಲೆ ಗಾಬರಿಗೊಂಡಿದ್ದಾರೆ. ವಿಜಯನಗರ ಪೊಲೀಸ್ ಠಾಣೆ ಅಧಿಕಾರಿಗಳು ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ನಾಳೆ ಚುನಾವಣೆ ಫಲಿತಾಂಶ ಪ್ರಕಟ: ಮತ ಎಣಿಕೆ ಕೇಂದ್ರಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್
ಅರ್ಧ ಗಂಟೆ ತಡವಾಗಿ ವಿದ್ಯುನ್ಮಾನ ಯಂತ್ರ ಬದಲಾಯಿಸಿದ ಅಧಿಕಾರಿಗಳು ಎಂದಿನಂತೆ ಮತ ಚಲಾಯಿಸಲು ಅನುವು ಮಾಡಿಕೊಟ್ಟಿದ್ದಾರೆ.
ಪೊಲೀಸ್ ಅಧಿಕಾರಿಗಳು ಬಂಧಿತ ವ್ಯಕ್ತಿಯನ್ನು ತನಿಖೆಗೆ ಒಳಪಡಿಸಿದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿರುವುದು ದೃಢಪಟ್ಟಿದೆ. ನಂತರ ಬಂಧಿತ ಶಿವಮೂರ್ತಿ ಅವರಿಗೆ ತಿಳುವಳಿಕೆ ಹೇಳಿ ಬಿಡುಗಡೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.