ಮೈಸೂರು | ಮತದಾನದ ವೇಳೆ ವ್ಯಕ್ತಿಯೋರ್ವನಿಂದ ಇವಿಎಂ ನಿಯಂತ್ರಣ ದ್ವಂಸ

Date:

ಮೈಸೂರು ನಗರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 40ರಲ್ಲಿ ಮತದಾನ ಮಾಡಲು ಬಂದಿದ್ದ ಹೂಟಗಳ್ಳಿ ನಿವಾಸಿ ಶಿವಮೂರ್ತಿ (48) ವಿದ್ಯುನ್ಮಾನ ಮತಯಂತ್ರ (ಇವಿಎಂ) ನಿಯಂತ್ರಣ ಘಟಕ ಉಪಕರಣ ದ್ವಂಸಗೊಳಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಮೇ.10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವ ವೇಳೆ ತನ್ನ ಅಧಿಕೃತ ಗುರುತಿನ ಚೀಟಿ ತೋರಿಸಿ, ಸಹಿ ಮಾಡಿ, ಬೆರಳಿಗೆ ಶಾಯಿ ಹಾಕಿದ ಬಳಿಕ ಶಿವಮೂರ್ತಿ ಎಂಬುವವರು ಏಕಾಏಕಿ ವಿದ್ಯುನ್ಮಾನ ಉಪಕರಣವನ್ನು ಒಡೆದು ಹಾಕಿದ್ದಾರೆ.

ಮತಯಂತ್ರ ನಿಯಂತ್ರಣ ಒಡೆದು ಹಾಕಿದ ವ್ಯಕ್ತಿ

ಶಿವಮೂರ್ತಿ ಜೊತೆಯಲ್ಲಿ ಬಂದಿದ್ದ ಪತ್ನಿ ಹಾಗೂ ಸ್ಥಳದಲ್ಲಿದ್ದ ಅಧಿಕಾರಿಗಳು ಒಮ್ಮೆಲೆ ಗಾಬರಿಗೊಂಡಿದ್ದಾರೆ. ವಿಜಯನಗರ ಪೊಲೀಸ್ ಠಾಣೆ ಅಧಿಕಾರಿಗಳು ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ ಎನ್ನಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ನಾಳೆ ಚುನಾವಣೆ ಫಲಿತಾಂಶ ಪ್ರಕಟ: ಮತ ಎಣಿಕೆ ಕೇಂದ್ರಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್

ಅರ್ಧ ಗಂಟೆ ತಡವಾಗಿ ವಿದ್ಯುನ್ಮಾನ ಯಂತ್ರ ಬದಲಾಯಿಸಿದ ಅಧಿಕಾರಿಗಳು ಎಂದಿನಂತೆ ಮತ ಚಲಾಯಿಸಲು ಅನುವು ಮಾಡಿಕೊಟ್ಟಿದ್ದಾರೆ.

ಮತಯಂತ್ರ ನಿಯಂತ್ರಣ ದ್ವಂಸಗೊಳಿಸಿದ ವ್ಯಕ್ತಿಯನ್ನು ನಿಯಂತ್ರಿಸುತ್ತಿರುವ ಸಿಬ್ಬಂದಿ

ಪೊಲೀಸ್ ಅಧಿಕಾರಿಗಳು ಬಂಧಿತ ವ್ಯಕ್ತಿಯನ್ನು ತನಿಖೆಗೆ ಒಳಪಡಿಸಿದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿರುವುದು ದೃಢಪಟ್ಟಿದೆ. ನಂತರ ಬಂಧಿತ ಶಿವಮೂರ್ತಿ ಅವರಿಗೆ ತಿಳುವಳಿಕೆ ಹೇಳಿ ಬಿಡುಗಡೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...