ಮೈಸೂರು | ಕೈಕೊಟ್ಟ ಮುಂಗಾರು; ಆಗಸದತ್ತ ಮುಖ ಮಾಡುತ್ತಿರುವ ರೈತರು

Date:

Advertisements

ಮೈಸೂರು ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿದ್ದರಿಂದ ರೈತರು ಕೃಷಿ ಭೂಮಿ ಹದ ಮಾಡಿ, ತಂಬಾಕು, ಹತ್ತಿ, ಜೋಳ, ಸೂರ್ಯಕಾಂತಿ ಹಾಗೂ ದ್ವಿದಳ ದಾನ್ಯಗಳನ್ನು ಬಿತ್ತಿದ್ದರು. ಆದರೆ ಮೇ ಕೊನೆಯಿಂದ ಮಳೆ ಬೀಳದ ಹಿನ್ನೆಲೆಯಲ್ಲಿ ಬೆಳೆ ಒಣಗುತ್ತಿದ್ದು, ರೈತರು ಮಳೆ ಯಾವಾಗ ಬೀಳುತ್ತದೆಯೋ ಎಂದು ಆಗಸದತ್ತ ಮುಖ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರಸ್ತುತ ವರ್ಷದಲ್ಲಿ ಮುಂಗಾರು ಆರಂಭ ದುರ್ಬಲವಾಗಿರುವ ಕಾರಣ ಮಳೆ ವಿಳಂಬವಾಗುತ್ತಿದೆ. ಕೇರಳಕ್ಕೆ ಮೊದಲ ವಾರದಲ್ಲಿ ಮಳೆ ಆಗಮಿಸಿದ್ದರೂ, ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಗಾಳಿಯ ತೀವ್ರತೆ ಇಲ್ಲದೇ ರಾಜ್ಯಕ್ಕೆ ಮುಂಗಾರು ಪ್ರವೇಶ ತಡವಾಗಿದೆ. ಹೀಗಾಗಿ ಜೂ. 10 ರಿಂದ 12ರ ಒಳಗಾಗಿ ಮಳೆ ಆಗಮಿಸುವ ನಿರೀಕ್ಷೆ ಇದೆ ಎಂದು ಹವಮಾನ ಇಲಾಖೆ ಹೇಳಿರುವುದು ರೈತರಲ್ಲಿ ಆತಂಕ ಮೂಡಿಸಿದೆ.

ಕಳೆದ ಏಪ್ರಿಲ್‌ನಲ್ಲಿ ಜಮೀನು ಉಳುಮೆ ಮಾಡಿ ಬಿತ್ತನೆ ಮಾಡಿದ್ದ ರೈತರು ಎರಡು ಬಾರಿ ಉಳುಮೆ ಮಾಡಿ, ರಸಗೊಬ್ಬರ ನೀಡಿದ್ದರು. ಮೇ ಅಂತ್ಯ ಮತ್ತು ಜೂನ್ ಮೊದಲ ವಾರದಲ್ಲಿ ಬೆಳೆ ಮೊಳಕೆಯೊಡೆದು, ಭೂಮಿಯಿಂದ ಮೇಲ್ಬರುವ ವೇಳೆಗೆ ಮುಂಗಾರು ಕೈಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಬೆಳೆ ಒಣಗುವಂತಾಗಿದೆ. ಪರಿಣಾಮ ಈ ಬಾರಿ ಹಲಸಂದೆ, ಎಸರು, ಉದ್ದು, ಸೂರ್ಯಕಾಂತಿ, ಹತ್ತಿ, ಜೋಳ ಹಾಗೂ ತಂಬಾಕು ಬೆಳೆಯಲ್ಲಿ ಇಳುವರಿ ಕುಂಠಿತಗೊಳ್ಳುವ ಭೀತಿ ಎದುರಾಗಿದೆ.

Advertisements

ಬಿಸಿಲಿನ ತೀವ್ರತೆ ಹೆಚ್ಚು

“ಜಿಲ್ಲೆಯಲ್ಲಿ ಬೇಸಿಗೆ ಕಳೆದು ಮಳೆಗಾಲ ಆರಂಭವಾದರೂ ಬೇಸಿಗೆಯ ವಾತಾವರಣ ಮುಂದುವರೆದಿದೆ. ಸಾಮಾನ್ಯವಾಗಿ 33 ಸೆಲ್ಸಿಯಸ್ ಉಷ್ಣಾಂಶವಿದ್ದರೆ, 36ರಿಂದ 38 ಉಷ್ಣಾಂಶದಷ್ಟು ತಾಪಮಾನದ ಅನುಭವ ಕಂಡುಬರುತ್ತಿದೆ. ಪರಿಣಾಮ ಮಳೆಗಾಲದಲ್ಲೂ ಬೇಸಿಗೆ ವಾತಾವರಣವಿದ್ದು, ಬಿಸಿಲಿನ ತೀವ್ರತೆ ಹೆಚ್ಚಿದೆ. ಪರಿಣಾಮ ನೀರಿಲ್ಲದೆ ಬೆಳೆ ಬಾಡುವಂತಾಗಿದೆ. ಒಂದು ವೇಳೆ ಜೂನ್ ಮಧ್ಯದಲ್ಲಿ ಮಳೆಯಾಗದೇ ಇದ್ದರೆ ಬೆಳೆ ಸಂಪೂರ್ಣವಾಗಿ ಒಣಗುವ ಸಾಧ್ಯಯತೆಗಳಿವೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಪರ್‌ಜಾಯ್‌ ಚಂಡಮಾರುತ; ಕೆಲವೆಡೆ ಸೃಷ್ಟಿಯಾದ ಅವಾಂತರ

ವಾಡಿಕೆಯಂತೆ ಈ ಬಾರಿ ಮಳೆ ಕಡಿಮೆಯಾಗಿದ್ದು, ಇದು ಜೂನ್ ತಿಂಗಳಿಗೂ ಮುಂದುವರೆಯುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 2022 ಮಾರ್ಚ್‌ನಲ್ಲಿ 30.1 ಮಿಮೀ ಮಳೆಯಾಗಿದ್ದರೆ ಈ ಬಾರಿಯ ಮಾರ್ಚ್‌ನಲ್ಲಿ 15.7 ರಷ್ಟು ಮಳೆಯಾಗಿದೆ. ಹಾಗೆಯೇ ಕಳೆದ ವರ್ಷದ ಏಪ್ರಿಲ್‌ನಲ್ಲಿ 71.6 ರಷ್ಟು ಮಳೆಯಾಗಿದ್ದರೆ, ಈ ಬಾರಿ 33.7 ರಷ್ಟು ಹಾಗೂ ಕಳೆದ ವರ್ಷದ ಮೇ ತಿಂಗಳಿನಲ್ಲಿ 251.6 ಮಿಮೀ ಮಳೆಯಾಗಿದ್ದು, ಈ ಬಾರಿ 155.7 ಮಿಮೀ ಮಳೆಗೆ ಕುಸಿತ ಕಂಡಿದೆ. ಒಟ್ಟಾರೆ ಕಳೆದ ವರ್ಷ 383.5ರಷ್ಟು ಮಳೆಯಾಗಿದ್ದರೆ, ಈ ಬಾರಿ 220 ಮಿಮೀ ನಷ್ಟು ಕಡಿಮೆ ಮಳೆಯಾಗಿದೆ.

ಹಿಂಗಾರಿನಲ್ಲೂ ಮಳೆ ಕೊರತೆ
2022ರ ಹಿಂಗಾರಿನಲ್ಲೂ ಜಿಲ್ಲೆಯಲ್ಲಿ ರೈತರು ಉತ್ತಮ ಮಳೆ ಬಾರದೆ ನಷ್ಟ ಅನುಭವಿಸಿದ್ದರು. ಸೆಪ್ಟಂಬರ್, ನವೆಂಬರ್‌ನಲ್ಲಿ ಉತ್ತಮ ಮಳೆ ಬೀಳದ ಪರಿಣಾಮ ರಾಗಿ, ಜೋಳ, ಹತ್ತಿ, ಹುರುಳಿ, ಅವರೆ ಸೇರಿದಂತೆ ಇತರೆ ಬೆಳೆಗಳಲ್ಲಿ ವಾಡಿಕೆಗಿಂತ ಕಡಿಮೆ ಇಳುವರಿ ಬಂದಿದ್ದರಿಂದ ರೈತರು ನಷ್ಟಕ್ಕೀಡಾಗಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X