ಪಟಾಕಿ ದಾಸ್ತಾನು ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಡೀ ಕಾರ್ಖಾನೆಯೇ ಸುಟ್ಟುಹೋಗಿರುವ ಘಟನೆ ಮೈಸೂರು ನಗರದ ಹೊರವಲಯದ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಪಟಾಕಿ ದಾಸ್ತಾನು ಕಾರ್ಖಾನೆಯಲ್ಲಿ ಸುಮಾರು 1.30ಕ್ಕೆ ಬೆಂಕಿ ಹೊತ್ತಿಕೊಂಡಿದೆ. ಸುತ್ತಮುತ್ತಲಿನ ನಾಲ್ಕು ಕಾರ್ಖಾನೆಗಳಿಗೂ ಹರಡಿದೆ. ಸ್ಥಳಕ್ಕೆ ಸುಮಾರು 15 ಅಗ್ನಿಶಾಮಕ ದಳದ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕೆಲಸಕ್ಕೆ ಮುಂದಾಗಿವೆ.
ಈ ಸುದ್ದಿ ಓದಿದ್ದೀರಾ? ಗದಗ | ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಶರಣ ಬಸವೇಶ್ವರ ದೇವಸ್ಥಾನ
ಬೆಂಕಿ ನಂದಿಸಲು ಹರಸಾಹಸಪಟ್ಟ ಅಗ್ನಿಶಾಮಕ ಸಿಬ್ಬಂದಿ
ಮೈಸೂರು ನಗರದ ಸರಸ್ವತಿಪುರಂ ಅಗ್ನಿ ಶಾಮಕ ಠಾಣೆಯ 3 ಅಗ್ನಿ ಶಾಮಕ ವಾಹನಗಳು, ಬನ್ನಿಮಂಟಪದ 3, ಹೆಬ್ಬಾಳದ 3, ಆರ್ಬಿಐನ ಎರಡು, ಹುಣಸೂರು ನಗರದ ಒಂದು, ಟಿ ನರಸೀಪುರದ ಒಂದು, ಕೆ ಆರ್ ನಗರದ 1 ಹಾಗೂ ಶ್ರೀರಂಗಪಟ್ಟಣದ 1 ಅಗ್ನಿಶಾಮಕ ವಾಹನ ಸೇರಿದಂತೆ 15 ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಈ ಬೆಂಕಿ ಅವಘಡ ಸಂಭವಿಸಿರುವ ಸ್ವಲ್ಪ ದೂರದಲ್ಲೇ ಇನ್ಫೋಸಿಸ್ ಕ್ಯಾಂಪಸ್ ಕೂಡ ಇದೆ.