ಮೈಸೂರು ನಗದರ ವಿಶ್ವೇಶ್ವರನಗರ ಇಂಡಸ್ಟ್ರಿಯಲ್ ಸಬರ್ಬ್ ವ್ಯಾಪ್ತಿಯ ಮಹರ್ಷಿ ಪಬ್ಲಿಕ್ ಶಾಲೆಯಲ್ಲಿ ಫೆಬ್ರವರಿ 14ರಂದು ಉಚಿತವಾಗಿ ಸಾಮೂಹಿಕ ಅಕ್ಷರಭ್ಯಾಸ ಹಾಗೂ ಸರಸ್ವತಿ ಪೂಜೆ ಕಾರ್ಯಕ್ರಮ ನಡೆಯುವ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ಪೋಸ್ಟರ್ ಬಿಡುಗಡೆ ಮಾಡಿದರು.
ಪೋಸ್ಟರ್ ಬಿಡುಗಡೆಗೊಳಿಸಿದ ಪ್ರತಾಪ್ ಸಿಂಹ ಮಾತನಾಡಿ, “ಪ್ರತಿಯೊಬ್ಬ ನಾಗರಿಕನಿಗೂ ಜೀವಿಸಲು ಮನೆ, ಆಹಾರ, ಬಟ್ಟೆ ಸೇರಿದಂತೆ ಇತರೆ ಮೂಲಭೂತ ವ್ಯವಸ್ಥೆಗಳ ಅಗತ್ಯವಿದೆ. ಅಲ್ಲದೆ ಹುಟ್ಟಿದ ಮಗುವಿಗೂ ಕೂಡಾ ಅನ್ನ, ಅಕ್ಷರ, ಆರೋಗ್ಯ ಪ್ರಮುಖ ಅವಶ್ಯವಾಗಿದೆ. ಹಾಗಾಗಿ, ಮಗುವಿಗೆ ಮಾತನಾಡುವ ಭಾಷೆ ಮತ್ತು ವಿದ್ಯೆ ಕಲಿಸುವ ಪ್ರಾರಂಭ ಹಂತದಲ್ಲಿ ಅಕ್ಷರಾಭ್ಯಾಸ ಮಾಡಿಸುವುದು ಪೋಷಕರ ಮೂಲ ಕರ್ತವ್ಯ” ಎಂದು ತಿಳಿಸಿದರು.
“ಮಕ್ಕಳಿಗೆ ಮನೆಯೇ ಮೊದಲ ಪಾಠ ಶಾಲೆಯಾಗಿದ್ದು, ತಾಯಿಯೇ ಮೊದಲ ಗುರು. ಮಗುವಿಗೆ ಅಕ್ಷರಭ್ಯಾಸ ಎನ್ನುವುದು ಜ್ಞಾನ ದೇಗುಲದ ಪ್ರಮುಖ ಘಟ್ಟ. ಅಕ್ಷರಾಭ್ಯಾಸದಲ್ಲಿ ಹೆಚ್ಚು ಮಕ್ಕಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು” ಎಂದು ಕರೆ ನೀಡಿದರು.
ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಮಾತನಾಡಿ, “ಉಚಿತ ಸಾಮೂಹಿಕ ಅಕ್ಷರಾಭ್ಯಾಸ ಹಾಗೂ ಸರಸ್ವತಿ ಪೂಜೆ ಫೆ.14ರ ಬುಧವಾರ ಬೆಳಿಗ್ಗೆ 8ರಿಂದ 10-30ರವರೆಗೂ ನಡೆಯಲಿದೆ. ಎಲ್ಲ ಜನಾಂಗದವರೂ ಸದುಪಯೋಗಪಡಿಸಿಕೊಳ್ಳಬೇಕು” ಎಂದು ಕೋರಿದರು.
ಈ ಸುದ್ದಿ ಓದಿದ್ದೀರಾ? ಹಾವೇರಿ | ಗೃಹ ಲಕ್ಷ್ಮೀ ಹಣ ಸರಕಾರಿ ಶಾಲೆಯ ಅಭಿವೃದ್ಧಿಗಾಗಿ ದೇಣಿಗೆ ನೀಡಿದ ಆಶಾ ಕಾರ್ಯಕರ್ತೆ
ಅಕ್ಷರಾಭ್ಯಾಸನವನ್ನು ಮಾಡಲಿಚ್ಚಿಸುವ ಮಕ್ಕಳ ಪೋಷಕರು ದೂರವಾಣಿ 9880752727 ಅಥವಾ 7829067769 ಮೊಬೈಲ್ ಸಂಖ್ಯೆಗೆ ನೋಂದಾಯಿಸಿಕೊಳ್ಳಬಹುದು. ಫೆಬ್ರವರಿ 13 ನೋಂದಣಿಗೆ ಕಡೆಯದಿನವಾಗಿದೆ.
ಅಕ್ಷರಾಭ್ಯಾಸ ಮಾಡಿಸುವವರ ಗಮನಕ್ಕೆ: “ಸ್ಲೇಟ್-ಬಳಪ ಇತ್ಯಾದಿ ಅಗತ್ಯ ಸಲಕರಣೆಗಳನ್ನು ನಮ್ಮ ಟ್ರಸ್ಟ್ನಿಂದಲೇ ಉಚಿತವಾಗಿ ನೀಡಲಾಗುವುದು. ಪ್ರತ್ಯೇಕವಾಗಿ ತರುವ ಅಗತ್ಯವಿರುವುದಿಲ್ಲ” ಎಂದು ತಿಳಿಸಿದರು.
ಮಹರ್ಷಿ ಪಬ್ಲಿಕ್ ಶಾಲೆಯ ಸಿಇಓ ತೇಜಸ್ ಶಂಕರ್, ಬಿಜೆಪಿ ಮುಖಂಡ ಆರ್ ಪರಮೇಶ್ ಗೌಡ ಸೇರಿದಂತೆ ಇತರರು ಇದ್ದರು.