ಮೈಸೂರು | ಡಾ. ವಿಜಯ ದಬ್ಬೆ ಸ್ಮರಣಾರ್ಥ ರಾಜ್ಯಮಟ್ಟದ ಕವನ ಮತ್ತು ಲಲಿತ ಪ್ರಬಂಧ ಸ್ಪರ್ಧೆ

Date:

Advertisements

ಮೈಸೂರಿನ ಸಮತಾ ಅಧ್ಯಯನ ಕೇಂದ್ರವು ಡಾ. ವಿಜಯ ದಬ್ಬೆ ಅವರ ಸ್ಮರಣಾರ್ಥ 20ರಿಂದ 35 ವಯೋಮಾನದ ವಿದ್ಯಾರ್ಥಿ ಮತ್ತು ಯುವಜನರಿಗೆ ರಾಜ್ಯಮಟ್ಟದ ಕವನ ಮತ್ತು ಲಲಿತ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.

ಕೇಂದ್ರವು ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ, ರಾಜ್ಯಮಟ್ಟದ ಕವನ ಮತ್ತು ಲಲಿತ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ. ಕವನ ಸ್ಪರ್ಧಿಸಬಯಸುವವರು ಎರಡು ಕವನಗಳನ್ನು ಕಳಿಸಬೇಕು. ಲಲಿತ ಪ್ರಬಂಧ ಸ್ಪರ್ಧೆಗೆ ಒಂದು ಪ್ರಬಂಧವನ್ನು ಕಳಿಸಬೇಕು ಎಂದು ಕೇಂದ್ರದ ಅಧ್ಯಕ್ಷೆ ಸಬಿಹಾ ಭೂಮಿಗೌಡ ತಿಳಿಸಿದ್ದಾರೆ.

ಅಭ್ಯರ್ಥಿಗಳು ಕಳುಹಿಸುವ ಕವನ ಹಾಗೂ ಪ್ರಬಂಧಗಳು ಈ ಮೊದಲು ಎಲ್ಲಿಯೂ ಪ್ರಸಾರ ಅಥವಾ ಪ್ರಕಟ ಆಗಿರಬಾರದು. ಪ್ರಬಂಧಕ್ಕೆ ಗರಿಷ್ಟ ಪದ ಮಿತಿ 2000 ಪದಗಳು. ವಯಸ್ಸಿನ ಖಚಿತತೆಗೆ ಎಸ್ಎಸ್ಎಲ್‌ಸಿ ಅಂಕಪಟ್ಟಿ ಅಥವಾ ಆಧಾರ್ ಕಾರ್ಡ್ ಲಗತಿಸಬೇಕು. ಕವನ ಪ್ರಬಂಧಗಳನ್ನು ಹಾಳೆಯ ಒಂದು ಮಗ್ಗಲಲ್ಲಿ ಸ್ಪಷ್ಟವಾಗಿ ಬರೆದು ಅಥವಾ ವಾಟ್ಸಪ್ ಮಾಡಿ. ಪ್ರತ್ಯೇಕ ಹಾಳಿಯಲ್ಲಿ ಹೆಸರು, ವಿಳಾಸ, ಫೋನ್ ಸಂಖ್ಯೆ, ಇಮೇಲ್ ವಿವರ ನಮೂದಿಸಿ ಜ. 29, 2024ರ ಒಳಗೆ, ಶ್ರೀಮತಿ ವಿಜಯ ರಾವ್. ಮನೆ ನಂಬರ್ 861, 14ನೇ ಮೇನ್ ವಿಜಯನಗರ ಮೊದಲನೇ ಹಂತ, ಮೈಸೂರು. ಪಿನ್ 570017 ಈ ವಿಳಾಸಕ್ಕೆ ಕಳುಹಿಸಬೇಕು.

Advertisements

ಎರಡು ಸ್ಪರ್ಧೆಗಳಿಗೆ ಒಂದೇ ಮೊತ್ತದ ಪ್ರಥಮ 5,000 ರೂ, ದ್ವಿತೀಯ 3000 ರೂ, ತೃತೀಯ ರೂಪಾಯಿ 2000 ರೂ, ಪ್ರತ್ಯೇಕ ಬಹುಮಾನವಿರುತ್ತದೆ. ವಿಜೇತರು ಮತ್ತು ತೀರ್ಪುಗಾರರ ಮೆಚ್ಚುಗೆ ಪಡೆಯುವ ತಲಾ ಹತ್ತು ಸ್ಪರ್ಧಿಗಳಿಗೆ ಮೇ ತಿಂಗಳ ಕೊನೆಯ ವಾರದಲ್ಲಿ ಒಂದಿನ ಸಾಹಿತ್ಯ ಕಮ್ಮಟ ಆಯೋಜಿಸಲಾಗುವುದು ಎಂದು ಸಮತಾ ಅಧ್ಯಯನ ಕೇಂದ್ರವು ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X