ಮೈಸೂರು | ‘ಸುಸ್ಥಿರ ಘನತ್ಯಾಜ್ಯ ನಿರ್ವಹಣಾ ಘಟಕ’ ಉದ್ಘಾಟನೆ

Date:

Advertisements

ಮೈಸೂರು ತಾಲೂಕಿನ ನಾಗವಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಹಸಿರು ದಳ ಮತ್ತು ಆಶ್ರಯ ಹಸ್ತ ಟ್ರಸ್ಟ್ ಸಹಯೋಗದೊಂದಿಗೆ ನೂತನವಾಗಿ ನಿರ್ಮಿಸಿರುವ ʼಸುಸ್ಥಿರ ಘನತ್ಯಾಜ್ಯ ನಿರ್ವಹಣಾ ಘಟಕʼವನ್ನು ಜೆಡಿಎಸ್‌ ಶಾಸಕ ಜಿ ಟಿ ದೇವೇಗೌಡ ಉದ್ಘಾಟಿಸಿದರು.

ಜಿ ಟಿ ದೇವೇಗೌಡ ಮಾತನಾಡಿ, “ಗ್ರಾಮದ ಸ್ವಚ್ಛತೆ ಕಡೆಗೆ ಗಮನ ಕೊಡಬೇಕು. ಎಲ್ಲೆಂದರಲ್ಲಿ ಕಸ ಎಸೆಯುವುದು, ಸುರಿಯುವುದು ತಪ್ಪು. ಆದ್ದರಿಂದ ರೋಗರುಜಿನಗಳು ಹರಡುತ್ತವೆ. ಗ್ರಾಮದ ಸ್ವಚ್ಛತೆ ಹದಗೆಡುತ್ತದೆ. ಹಾಗಾಗಿ ಗ್ರಾಮಸ್ಥರು ಸುಸ್ಥಿರ ಘನತ್ಯಾಜ್ಯ ಘಟಕದ ಉಪಯೋಗ ಪಡೆದುಕೊಳ್ಳಬೇಕು” ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯತ್ ಸಿಇಒ ಕೆ ಎಂ ಗಾಯತ್ರಿ ಮಾತನಾಡಿ, “ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತ್ಯಾಜ್ಯ ನಿರ್ವಹಣಾ ಘಟಕ ತೆರೆಯಲಾಗಿದೆ. ಆದಷ್ಟು ಕಸ ವಿಂಗಡಿಸಿ ವಿಲೇವಾರಿ ಮಾಡಲು ಸಹಕರಿಸಬೇಕು. ಗ್ರಾಮ ಪಂಚಾಯಿತಿ ಕಸ ಸಂಗ್ರಹ ಕೂಡ ಆಯಾ ಸಮಯಕ್ಕೆ ನಿಯೋಜನೆ ಮಾಡಿ, ಸಂಗ್ರಹಿಸಿದ ಕಸವನ್ನು ತ್ಯಾಜ್ಯ ಘಟಕದ ನೆರವಿನಿಂದ ವಿಲೇವಾರಿ ಮಾಡಬೇಕು. ಗ್ರಾಮ ಪಂಚಾಯಿತಿಗಳೂ ಕೂಡಾ ಸ್ವಚ್ಛತೆಯ ಕಡೆಗೆ ಗಮನಕೊಟ್ಟು ಎಲ್ಲಿಯೂ ಕಸ ಸಂಗ್ರಹವಾಗದಂತೆ ನೋಡಿಕೊಳ್ಳಬೇಕು” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಸುಧಾರಣಾ ಕ್ರಮ ಕೈಗೊಳ್ಳಿ; ಜಿಲ್ಲಾಧಿಕಾರಿ ಶಿಲ್ಪಾನಾಗ್

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಿ ಕೃಷ್ಣ, ನಾಗವಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಮಾಕ್ಷಮ್ಮ, ಮಾಜಿ ಅಧ್ಯಕ್ಷ ನರೇಂದ್ರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ ಡಿ ಮಾಯಪ್ಪ, ಆಶ್ರಯ ಹಸ್ತ ಟ್ರಸ್ಟ್‌ನ ಎನ್ ಕೆ ಶರ್ಮ, ಹಸಿರು ದಳ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕಿ ನಳಿನಿ ಶೇಖರ್, ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ, ಎಸ್ಎಚ್ ಜಿ ಸದಸ್ಯರು ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X