ಮೈಸೂರು‌ | ಕೂರ್ಗಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ ಅವ್ಯವಹಾರ; ಕಾಡಾ ಕಚೇರಿಗೆ ದೂರು

Date:

Advertisements

ಮೈಸೂರು ಗ್ರಾಮಾಂತರ ಕೂರ್ಗಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ ಸಂಘದ ನಿರ್ದೇಶಕರೇ ಅವ್ಯವಹಾರ ನಡೆಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ ಗ್ರಾಮಸ್ಥರು ಕಾಡಾ ಕಚೇರಿಯ ಸಹಕಾರ ಇಲಾಖೆಗೆ ದೂರು ನೀಡಿದ್ದಾರೆ.

“ಹಾಲು ಉತ್ಪಾದಕರ ಸಂಘದಲ್ಲಿ ಕೂರ್ಗಳ್ಳಿ ಮಹದೇವ್ ಎಂಬುವರು ಹತ್ತು ವರ್ಷಗಳಿಂದ ನಿರ್ದೇಶಕರಾಗಿದ್ದು, ಹಾಲು ಉತ್ಪಾದನೆ ಮಾಡದ ತಮ್ಮದೇ ಕುಟುಂಬದ ಸದಸ್ಯರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಅಧಿಕಾರದ ಹಿಡಿತ ಸಾಧಿಸುತ್ತ ಬಂದಿದ್ದಾರೆ. ಅದಲ್ಲದೆ ಹತ್ತು ವರ್ಷಗಳಿಂದ ಸಹಕಾರ ಸಂಘಕ್ಕೆ ಚುನಾವಣೆಯನ್ನೇ ನಡೆಸದಂತೆ ನೋಡಿಕೊಂಡಿದ್ದಾರೆ” ಎಂದು ಆರೋಪಿಸಲಾಗಿದೆ.

“ನಿಜವಾದ ಹಾಲು ಉತ್ಪಾದಕರನ್ನು ಮತದಾರರ ಪಟ್ಟಿಯಿಂದ ಹೊರಗಿಟ್ಟು ಚುನಾವಣೆ ನಡೆಸಲು ಹುನ್ನಾರ ಮಾಡಿದ್ದು,
ಸುಮಾರು 180ಕ್ಕೂ ಹೆಚ್ಚು ಸದಸ್ಯರನ್ನು ಉದ್ದೇಶ ಪೂರ್ವಕವಾಗಿ ಮತದಾರರ ಪಟ್ಟಿಯಿಂದ ಕೈಬಿಟ್ಟು ಅನ್ಯಾಯ ಮಾಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.‌

Advertisements
ಕೂರ್ಗಳ್ಳಿ

“ಕಳೆದ ಹತ್ತು ವರ್ಷಗಳಿಂದ ಹಾಲು ಉತ್ಪಾದಕರ ಸಂಘದಲ್ಲಿ ಅಭಿವೃದ್ಧಿಯ ಕೆಲಸಗಳಾಗಿಲ್ಲ. ರೈತರಿಗೆ ಅನ್ಯಾಯವಾಗುತ್ತಿದೆ. ವಾಮ ಮಾರ್ಗದಲ್ಲಿ ಅಧಿಕಾರದ ಹಿಡಿತ ಸಾಧಿಸಿದ್ದಾರೆ. ಮತದಾರರ ಪಟ್ಟಿಯಲ್ಲಿರುವ ಲೋಪ ಸರಿಪಡಿಸಿ, ಮಹದೇವ್ ವಿರುದ್ಧ ತನಿಖೆ ಆದೇಶ ಮಾಡಿದ ನಂತರವೇ ನ್ಯಾಯಸಮ್ಮತ ಚುನಾವಣೆ ನಡೆಸಬೇಕು” ಎಂದು ರವಿಕುಮಾರ್ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ದಲಿತ ಅಪ್ರಾಪ್ತೆಯರ ಅತ್ಯಾಚಾರ, ಕುಟುಂಬಗಳಿಗೆ ಬಹಿಷ್ಕಾರ; ಸವರ್ಣೀಯರ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸ್‌ ಇಲಾಖೆ

ಗ್ರಾಮದ ರೈತ ಮುಖಂಡ ಕೆ ಎಚ್ ರಾಜೇಂದ್ರ, ಕೃಷ್ಣ ಎಸ್, ಮಲ್ಲಿಕಾರ್ಜುನ, ಎಂ ವಾಸು, ಲಿಂಗೇಗೌಡ, ರವಿಕುಮಾರ್, ರಾಮು, ಮರಿಗೌಡ, ಲೋಕೇಶ್ ಸೇರಿದಂತೆ ಅನೇಕ ರೈತ ಮುಖಂಡರು, ಮಹಿಳೆಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X