ಮೈಸೂರು | ಕಬಿನಿ ಕುಡಿಯುವ ನೀರು ಯೋಜನೆ; ಕಾಮಗಾರಿ ವೀಕ್ಷಿಸಿದ ಸಚಿವ ಹೆಚ್‌ ಸಿ ಮಹದೇವಪ್ಪ

Date:

Advertisements

ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ನೇತೃತ್ವದಲ್ಲಿ ನಂಜನಗೂಡು ಬಳಿಯ ಬಿದರಗೋಡಿನಲ್ಲಿರುವ ಕಬಿನಿ ಕುಡಿಯುವ ನೀರು ಯೋಜನೆ ಕಾಮಗಾರಿ ವೀಕ್ಷಣೆ ನಡೆಸಲಾಯಿತು.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ ಟಿ ದೇವೆಗೌಡ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯುಬ್ ಖಾನ್, ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ್ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಶೈಕ್ ತನ್ವಿರ್ ಆಸಿಫ್ ಹಾಗೂ ಅಧಿಕಾರಿಗಳು ಸಚಿವರಿಗೆ ಸಾಥ್‌ ನೀಡಿದ್ದರು.

ಮೈಸೂರು ನಗರಕ್ಕೆ 2008ನೇ ಸಾಲಿನಲ್ಲಿ ಕಬಿನಿ ನದಿ ಮೂಲದಿಂದ ಜಲ ಮಂಡಳಿ ವತಿಯಿಂದ ಕುಡಿಯುವ ನೀರನ್ನು ವೃದ್ಧಿಸುವ ಯೋಜನೆ ರೂಪಿಸಿ, ವಿಸ್ತೃತ ಯೋಜನಾ ವರದಿ ತಯಾರಿಸಲಾಗಿತ್ತು. ಸದರಿ ಯೋಜನಾ ವರದಿಯಂತೆ ಕಬಿನಿ ನೀರು ಸರಬರಾಜು ಯೋಜನೆಯನ್ನು 3 ಹಂತದಲ್ಲಿ ಒಟ್ಟು 184 ಎಂಎಲ್‌ಡಿ ಸಾಮರ್ಥ್ಯಕ್ಕೆ ಅಭಿವೃದ್ಧಿ ಪಡಿಸಲಾಗಿದೆ.

Advertisements

ಅದರಂತೆ ಮೈಸೂರು ಮಹಾನಗರ ಪಾಲಿಕೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಹಭಾಗಿತ್ವದಲ್ಲಿ ಸದರಿ ಯೋಜನೆಯ ಸಾಮರ್ಥ್ಯವನ್ನು ಉನ್ನತೀಕರಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿರುತ್ತದೆ.

ಈ ಯೋಜನೆಯಡಿಯಲ್ಲಿ ಕೆಂಬಾಳ್ ಜಲಶುದ್ದೀಕರಣ ಘಟಕದಲ್ಲಿ ಹೊಸದಾಗಿ 60 ಎಂಎಲ್‌ಡಿ ಸಾಮರ್ಥ್ಯದ ಫ್ಲಾಕ್ಯೂಲೇಟರ್ ಮತ್ತು ಟ್ಯೂಬ್ ಸೆಟ್ಟರ್ ಘಟಕವನ್ನು ಮತ್ತು ರ್ಯಾಪಿಡ್ ಸ್ಯಾಂಡ್ ಫಿಲ್ಟ್ರೇಷನ್ ಘಟಕಗಳನ್ನು ನಿರ್ಮಿಸುವ, ದೂರ ಸಬ್‌ ಸ್ಟೇಷನ್‌ನಿಂದ ಕೆಂಬಾಳ್ ಯಂತ್ರಗಾರದವರೆಗೆ 11 ಕೆವಿ ಎಕ್ಸ್‌ಪ್ರೆಸ್ ಭೂಗತ ಕೇಬಲ್ ಅಳವಡಿಸುವ, ಕೆಂಬಾಳ್ ಯಂತ್ರಾಗಾರದಲ್ಲಿ ಮತ್ತು ಪಿಂಜರಾಪೋಲ್ ಐಬಿಪಿಎಸ್ ನಲ್ಲಿ ಹೊಸದಾಗಿ 2500 ಹೆಚ್ ಪಿ ಮತ್ತು 1750 ಹೆಚ್ ಪಿ ಸಾಮರ್ಥ್ಯದ ಪಂಪಿಂಗ್ ಯಂತ್ರೋಪಕರಣಗಳಿಗೆ ವಿದ್ಯುತ್ ಉಪಕರಣಗಳನ್ನು ಅಳವಡಿಸಲಾಗುತ್ತಿದೆ.

ಜಲಶುದ್ದೀಕರಣ ಘಟಕಗಳನ್ನು ನಿರ್ಮಿಸುವ ಕಾಮಗಾರಿ ಮಾರ್ಚ್ 2021ರಲ್ಲಿ ಪ್ರಾರಂಭಿಸಲಾಗಿದ್ದು, ಪಂಪಿಂಗ್ ಮತ್ತು ವಿದ್ಯುತ್ ಉಪಕರಣ ಅಳವಡಿಸುವ ಕಾಮಗಾರಿಯನ್ನು ಏಪ್ರಿಲ್ 2023ರಲ್ಲಿ ಪ್ರಾರಂಭಿಸಲಾಗಿದೆ. ಶೇ. 90% ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಯಂತ್ರಾಗಾರದ ಒಳಗಡೆ ವಿದ್ಯುತ್ ಉಪಕರಣಗಳನ್ನು ಅಳವಡಿಸುವ ಕಾಮಗಾರಿಗಳು ಬಾಕಿಯಿರುತ್ತವೆ.

ಈ ಕಾಮಗಾರಿಯು ಪೂರ್ಣಗೊಂಡ ನಂತರ ಶುದ್ದೀಕರಣ ಘಟಕಗಳ ಸಾಮರ್ಥ್ಯ 120 ಎಂಎಲ್‌ಡಿ ಮತ್ತು ಪಂಪಿಂಗ್ ಸಾಮರ್ಥ್ಯವು 100 ಎಂಎಲ್‌ಡಿಗೆ ಹೆಚ್ಚಳವಾಗುತ್ತದೆ ಮತ್ತು ಇದರಿಂದ ಮೈಸೂರು ನಗರಕ್ಕೆ ಸಾರ್ವಜನಿಕ ಬಳಕೆಗೆ ಹೆಚ್ಚುವರಿಯಾಗಿ 40 ಎಂಎಲ್‌ಡಿ ನೀರು ಲಭ್ಯವಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ: ಆತ್ಮಹತ್ಯೆ ಶಂಕೆ

ಹೆಚ್ಚುವರಿ ನೀರನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಗಳಿಗೆ 13 ಎಂಎಲ್‌ಡಿ ಮತ್ತು ಉಳಿಕೆ ನೀರನ್ನು ಮೈಸೂರು ಮಹಾನಗರ ಪಾಲಿಕೆಯ ವಾರ್ಡ್‌ಗಳಿಗೆ ಸರಬರಾಜು ಮಾಡಲು ಉದ್ದೇಶಿಸಲಾಗಿದೆ. ಈ ಎಲ್ಲಾ ಯೋಜನೆ ಉಪ ಯೋಜನೆಗಳು ಶೀಘ್ರ ಕಾಮಗಾರಿ ಪೂರ್ಣಗೊಳಿಸಿದರೆ ನಗರದ ಸಾರ್ವಜನಿಕರಿಗೆ ನೀರಿನ ಸಮಸ್ಯೆ ಇರುವುದಿಲ್ಲ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X