ಮೈಸೂರು | ತನ್ನ ಪ್ರೇಯಸಿಗೆ ಸಂದೇಶ ಕಳುಹಿಸಿದ ಕಾರಣಕ್ಕೆ ಗೆಳೆಯನಿಗೆ ಮಾರಕಾಸ್ತ್ರದಿಂದ ಇರಿತ

Date:

ತನ್ನ ಪ್ರಿಯತಮೆಗೆ ಸಂದೇಶ ಕಳುಹಿಸಿದನೆಂದು ಯುವಕನೊಬ್ಬ ತನ್ನ ರೂಮ್‌ಮೇಟ್‌ಗೆ ಮಾರಕಾಸ್ತ್ರದಿಂದ ಇರಿದಿರುವ ಘಟನೆ ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ.

ಆರೋಪಿ ಶ್ರೇಯಸ್ ಹಾಗೂ ಶಿವಕುಮಾರ್ ಇಬ್ಬರೂ ಸ್ನೇಹಿತರಾಗಿದ್ದು, ಜನತಾನಗರದಲ್ಲಿ ಒಂದೇ ರೂಮಿನಲ್ಲಿ ವಾಸವಾಗಿದ್ದರು. ಸ್ನೇಹಿತ ಹಾಗೂ ರೂಮ್‌ಮೇಟ್ ಆಗಿರುವ ಶಿವಕುಮಾರ್ ಶ್ರೇಯಸ್ ಪ್ರೀತಿಸುತ್ತಿದ್ದ ಯುವತಿಯನ್ನು ಕಾಂಟಾಕ್ಟ್ ಮಾಡಿದ್ದು, ಮೆಸೇಜ್ ಮಾಡುತ್ತಿದ್ದನು. ಅಲ್ಲದೇ ತನ್ನ ಸ್ನೇಹಿತನ ಪ್ರಿಯತಮೆ ಜತೆ ನಿರಂತರ ಸಂಪರ್ಕದಲ್ಲಿದ್ದನು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿಚಾರ ಶ್ರೇಯಸ್‌ ಗಮನಕ್ಕೆ ಬಂದಿದ್ದು, ಇಬ್ಬರ ನಡುವೆ ವಾಗ್ವಾದಗಳು ನಡೆದಿವೆ. ಜತೆಗೆ ತನ್ನ ಪ್ರೇಯಸಿಗೆ ಮೆಸೇಜ್ ಮಾಡಬೇಡ ಎಂದು ಶ್ರೇಯಸ್ ಎಚ್ಚರಿಕೆ ನೀಡಿದ್ದನು. ಆದರೂ ಶಿವಕುಮಾರ್ ಆಗಾಗ ಯುವತಿಗೆ ಮೆಸೇಜ್ ಮಾಡುತ್ತಿದ್ದನು. ಈ ವಿಚಾರವಾಗಿ ನಂಜನಗೂಡು ರಿಂಗ್ ರಸ್ತೆ ಬಳಿ ಇಬ್ಬರ ನಡುವೆ ದೊಡ್ಡ ಗಲಾಟೆ ನಡೆದಿದ್ದು, ಜಗಳ ತಾರಕಕ್ಕೇರಿದ್ದು, ಶ್ರೇಯಸ್, ಶಿವಕುಮಾರ್‌ಗೆ ಮಾರಕಾಸ್ತ್ರದಿಂದ ಇರಿದಿದ್ದಾನೆ.

ಶಿವಕುಮಾರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಕಾಂಗ್ರೆಸ್‌ ಮುಖಂಡರ ಮನೆ ಮನೆ ಪ್ರಚಾರ; ಕಾರ್ಡ್‌ ಹಂಚಿ ಮತಯಾಚನೆ

ಶಿವಮೊಗ್ಗನಗರದ ಗೋಪಾಲಗೌಡ ಬಡಾವಣೆಯಲ್ಲಿ ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು ಮನೆಮನೆಗೆ ತೆರಳಿ...

ತುಮಕೂರು | ನಟಿ ಶೃತಿ ತಮ್ಮ ಹೇಳಿಕೆ ವಾಪಸ್ ಪಡೆಯಬೇಕೆಂದು ಆಗ್ರಹ

ಬಿಜೆಪಿ ಪಕ್ಷದ ಪ್ರಚಾರಕಿ ನಟಿ ಶ್ರುತಿ ಅವರ ಫ್ರಿ ಬಸ್ ಕುರಿತ...

ಕಲಬುರಗಿ | ಅಭಿವೃದ್ಧಿ ಪರವಾಗಿರುವ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ, ಮತದಾರರಲ್ಲಿ ಸಿಎಂ ಮನವಿ

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಖರ್ಗೆಯವರಿಗೆ...

ಚಿಕ್ಕಬಳ್ಳಾಪುರ | ಏಕಕಾಲದಲ್ಲಿ ಒಂದೇ ಕುಟುಂಬದ 85 ಮಂದಿ ಮತದಾನ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನದ ಪ್ರಕ್ರಿಯೆ ಬಿರುಸಿನಿಂದ...