ಮೈಸೂರು | ನಾಡಪ್ರಭು ಕೆಂಪೇಗೌಡ ಜಯಂತಿ; ಜೀವಾಧಾರ ರಕ್ತನಿಧಿ ಕೇಂದ್ರದಿಂದ ಹೋಳಿಗೆ ವಿತರಣೆ

Date:

Advertisements

ಕೆಂಪೇಗೌಡರು ಒಕ್ಕಲಿಗ ಸಮುದಾಯದ ಪ್ರಭುಗಳಾಗಿದ್ದರೂ ಕೂಡಾ ಒಂದೇ ಸಮುದಾಯಕ್ಕೆ ಸೀಮೀತವಾದವರಲ್ಲ ಎಂಬುದಕ್ಕೆ ಅವರು ಕಟ್ಟಿದ ಬೆಂಗಳೂರು ನಗರವೇ ಸಾಕ್ಷಿ. ಪ್ರತಿಯೊಂದು ಸಮುದಾಯದ ಜನರಿಗೂ ಒಂದೊಂದು ಕೇರಿಯನ್ನು ಸಮುದಾಯದ ಹೆಸರಿನಲ್ಲೇ ಕಟ್ಟಿಕೊಟಿದ್ದಾರೆ ಎಂದು ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ ಹೇಳಿದರು.

ಮೈಸೂರಿನ ಜೀವಾಧಾರ ರಕ್ತನಿಧಿ ಕೇಂದ್ರ ಹಾಗೂ ಕೆಎಂಪಿಕೆ ಟ್ರಸ್ಟ್ ವತಿಯಿಂದ ಅರಮನೆಯ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ನಾಡಪ್ರಭು ಕೆಂಪೇಗೌಡ ಅವರ 515ನೇ ಜಯಂತಿ ಅಂಗವಾಗಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಕೆಂಪೇಗೌಡ ಜಯಂತಿಯ ಮೆರವಣಿಗೆಯಲ್ಲಿ 2,000 ಹೋಳಿಗೆಯನ್ನು ವಿತರಿಸಿ ಮಾತನಾಡಿದರು.

“ಕೆಂಪೇಗೌಡ ಅವರು ನಡೆಸಿದ ರಾಜಾಡಳಿತವೂ ಇತರ ರಾಜರಿಗೆ ಮಾದರಿಯಾಗಿದ್ದನ್ನು ಇತಿಹಾಸದ ಪುಟದಲ್ಲಿ ಕಾಣಬಹುದು. ಇಂತಹ ಮಹಾನ್ ನಾಯಕರು ನೆಲೆಸಿದ ನಾಡಿನಲ್ಲಿ ಬದುಕುತ್ತಿರುವ ನಾವುಗಳೇ ಪುಣ್ಯವಂತರು” ಎಂದು ಸ್ಮರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ತುಮಕೂರು | ಅಹೋರಾತ್ರಿ ಧರಣಿಗೆ ಮಣಿದ ಜಿಲ್ಲಾಡಳಿತ; ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿಗೆ ಸಂದ ಜಯ

ಶಾಸಕ ಜಿ ಟಿ ದೇವೇಗೌಡ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮರಿಗೌಡ, ಬಿಜೆಪಿ ನಗರ ಅಧ್ಯಕ್ಷ ಎಲ್ ನಾಗೇಂದ್ರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಜಯಕುಮಾರ್, ಮುಡಾ ಮಾಜಿ ಅಧ್ಯಕ್ಷ ಯಶಸ್ವಿ ಸೋಮಶೇಖರ್, ಹೇಮಂತ್ ಕುಮಾರ್ ಗೌಡ, ಜೀವಾಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್, ಇಂದಿರಾ ಗಾಂಧಿ ಬ್ಲಾಕ್ ಅಧ್ಯಕ್ಷ ಮಂಚೇಗೌಡನ ಕೊಪ್ಪಲು ರವಿ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಒಕ್ಕಲಿಗರ ಸಂಘದ ಕಾರ್ಯದರ್ಶಿ ಚೇತನ್ ಗೌಡ, ಆನಂದ್, ಸೂರಜ್, ಸದಾಶಿವ್, ಗಿರೀಶ್ ಗೌಡ , ಒಕ್ಕಲಿಗ ಸಂಘದ ನಿರ್ದೇಶಕರುಗಳು, ಮುಖಂಡರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X