ಮೈಸೂರು | ಮೈಗ್ರೇನ್‌, ಅಪೌಷ್ಟಿಕತೆಯಿಂದ ಬಳಲುತ್ತಿರುವ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಳ

Date:

Advertisements

ಮೈಸೂರು ನಗರದ 15 ಬಾಲಕಿಯರ ವಸತಿ ನಿಲಯಗಳಲ್ಲಿ ಕಳೆದ ಎಂಟು ತಿಂಗಳಿಂದ ನಡೆಸಿದ ಆರೋಗ್ಯ ಶಿಬಿರಗಳಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿನಿಯರು ಮೈಗ್ರೇನ್, ಪಾಲಿಸಿಸ್ಟಿಕ್ ಅಂಡಾಶಯದ ಕಾಯಿಲೆ (ಪಿಸಿಒಡಿ) ಮತ್ತು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಸ್ಥೂಲಕಾಯತೆ(ಬೊಜ್ಜು)ಯು ಮತ್ತೊಂದು ಸಮಸ್ಯೆಯಾಗಿದೆ ಎಂದು ತಿಳಿದುಬಂದಿದೆ.

ವಿಷ್ಣುಮೂರ್ತಿ ರೇಖಾಮೂರ್ತಿ ಟ್ರಸ್ಟ್ ವತಿಯಿಂದ ಆರೋಗ್ಯ ಇಲಾಖೆಯೊಂದಿಗೆ ಸೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೈಸೂರು ಜಿಲ್ಲೆಯಲ್ಲಿ ನಡೆಸಿದ ಸಮೀಕ್ಷೆಯಿಂದ ಈ ಅಂಶ ಬೆಳಕಿಗೆ ಬಂದಿದೆ.

“ಹಲವು ಸರ್ಕಾರಿ ಸಂಸ್ಥೆಗಳು ನಡೆಸುತ್ತಿರುವ ಪ್ರತಿ ಹಾಸ್ಟೆಲ್‌ನಲ್ಲಿ ಸರಾಸರಿ 150 ವಿದ್ಯಾರ್ಥಿನಿಯರನ್ನು ಪರೀಕ್ಷಿಸಲಾಗಿದೆ. ಆರೋಗ್ಯ ಶಿಬಿರದಲ್ಲಿ ಮೆಟ್ರಿಕ್ ಪೂರ್ವ ಮತ್ತು ಸ್ನಾತಕೋತ್ತರ, ಪದವಿ, ಸ್ನಾತಕೋತ್ತರ ಪದವಿಯ ನಡುವೆ ವಿವಿಧ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರನ್ನು ಪರೀಕ್ಷಿಸಲಾಯಿತು. ನಮ್ಮ ಸಂಶೋಧನೆಗಳ ಪ್ರಕಾರ, ವಿವಿಧ ವಯಸ್ಸಿನ ಶೇ. 15ರಷ್ಟು ಹುಡುಗಿಯರು ಪಾಲಿಸಿಸ್ಟಿಕ್ ಅಂಡಾಶಯದ ಕಾಯಿಲೆಯಿಂದ ಬಳಲುತ್ತಿದ್ದರೆ, ಶೇ.10ರಷ್ಟು ಮೈಗ್ರೇನ್‌ನಿಂದ ಬಳಲುತ್ತಿದ್ದಾರೆ. ಶೇ.25ರಿಂದ ಶೇ.30ರಷ್ಟು ಮಂದಿ ಅಪೌಷ್ಟಿಕತೆಯಿಂದ ಬಳಲುತ್ತಿದ್ದರೆ, ಶೇ.15ರಷ್ಟು ಮಂದಿ ಬೊಜ್ಜಿನಿಂದ ಬಳಲುತ್ತಿದ್ದಾರೆ” ಎಂದು ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷ ಡಾ ಶುಶ್ರುತಾ ಗೌಡ ಎಚ್ ವಿ ತಿಳಿಸಿದ್ದಾರೆ.

Advertisements

“ಈ ಸಂಶೋಧನೆಗಳನ್ನು ಎಚ್ಚರಿಕೆಯಿಂದ ವಿಶ್ಲೇಷಿಸುವ ಅಗತ್ಯವಿದೆ. ವಿದ್ಯಾರ್ಥಿಗಳಲ್ಲಿ ಈ ಆರೋಗ್ಯ ಸಮಸ್ಯೆಗಳು ಏಕೆ ಉದ್ಭವಿಸುತ್ತಿವೆ ಎಂಬುದನ್ನು ಕಂಡುಹಿಡಿಯುವ ತುರ್ತು ಅವಶ್ಯಕತೆಯಿದೆ. ವಿದ್ಯಾರ್ಥಿಗಳಿಗೆ ಹೋಲಿಸಿದರೆ, ಸುಮಾರು ಎರಡು ಪಟ್ಟು ವಿದ್ಯಾರ್ಥಿನಿಯರು ಮೈಗ್ರೇನ್‌ನಿಂದ ಬಳಲುತ್ತಿದ್ದಾರೆ. ಅಂತೆಯೇ, ಹೆಚ್ಚು ಹೆಚ್ಚು ಹುಡುಗಿಯರು ಪಾಲಿಸಿಸ್ಟಿಕ್ ಅಂಡಾಶಯ(ಪಿಸಿಒಡಿ)ದ ಕಾಯಿಲೆಯಿಂದ ಏಕೆ ಬಳಲುತ್ತಿದ್ದಾರೆ ಎಂಬುದನ್ನು ಕಂಡುಹಿಡಿಯಲು ಅಧ್ಯಯನದ ಅಗತ್ಯವಿದೆ” ಎಂದು ಹೇಳಿದರು.

“ಅಪೌಷ್ಟಿಕತೆಯನ್ನು ನಿವಾರಿಸಲು ಹಾಸ್ಟೆಲ್ ಮೆನುವನ್ನು ಪರಿಶೀಲಿಸುವುದು, ಆಹಾರದಲ್ಲಿ ಹೆಚ್ಚಿನ ಪೌಷ್ಟಿಕಾಂಶದ ಅಂಶಗಳನ್ನು ಸೇರಿಸುವುದು ಅಗತ್ಯವಾಗಿದೆ. ಅಂತೆಯೇ, ಜಂಕ್‌ಫುಡ್ ತಿನ್ನದಂತೆ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಅವಶ್ಯಕತೆಯಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಟೊಮೆಟೊ ಬೆಲೆಯಲ್ಲಿ ಭಾರೀ ಕುಸಿತ; ರೈತರು ಕಂಗಾಲು

ಮೈಸೂರು ವಿಶ್ವವಿದ್ಯಾನಿಲಯದ ಸಾಮಾಜಿಕ ಬಹಿಷ್ಕಾರ ಮತ್ತು ಅಂತರ್ಗತ ನೀತಿ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಹಾಗೂ ಉಪನಿರ್ದೇಶಕ ಡಿ ಸಿ ನಂಜುಂಡ ಮಾತನಾಡಿ, “ಸರ್ಕಾರಿ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ ಆಹಾರದ ಗುಣಮಟ್ಟ ಮತ್ತು ಪ್ರಮಾಣ, ಕೆಲವು ವಿದ್ಯಾರ್ಥಿನಿಯರಲ್ಲಿ ಆಹಾರಕ್ಕೆ ಸಂಬಂಧಿಸಿದ ನಿಷೇಧಗಳು, ಹಾಸ್ಟೆಲ್‌ಗಳಲ್ಲಿ ಅನುಸರಿಸುವ ಮೆನುವಿನ ಕಳಪೆ ಮೇಲ್ವಿಚಾರಣೆಯು ಕಾಲೇಜು ವಿದ್ಯಾರ್ಥಿನಿಯರಲ್ಲಿ ಅಪೌಷ್ಟಿಕತೆಗೆ ಪ್ರಮುಖ ಕಾರಣಗಳಾಗಿವೆ. ಹೊರಗಿನ ಅಧ್ಯಯನಗಳೂ ಕೂಡ ಇದೇ ರೀತಿಯ ಫಲಿತಾಂಶಗಳನ್ನು ಬಹಿರಂಗಪಡಿಸಿವೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. 🙏🙏 ನಾನು, ಒಬ್ಬ ಸಂಪ್ರದಾಯಿಸ್ತ ನಾಟಿವೈದ್ಯ, ಅದರೊಂದಿಗೆ ಜನಪದ ವೈದ್ಯನು ಹೌದು. ಯಾವುದೇ ತರಹದ (migrane ) ಮೈಗ್ರನ್
    2 ( ಎರಡೇ ) ದಿವಸದಲ್ಲಿ ಕಡಿಮೆ ಮಾಡುತ್ತೇನೆ ಉಚಿವಾಗಿ.
    ನನ್ನ mob no 9686727240 ಯಾವಾಗ ಬೇಕಾದ್ರು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X