ಮೈಸೂರು | ಮತದಾರರ ಗಮನ ಸೆಳೆಯಲು ಪಾರಂಪರಿಕ ಮತಗಟ್ಟೆ ಸ್ಥಾಪಿಸಿದ ಅಧಿಕಾರಿಗಳು

Date:

  • ಪಾರಂಪರಿಕ ಮತಗಟ್ಟೆಗಳು ಮತದಾರರನ್ನು ಪ್ರೇರೇಪಿಸುವಂತಿವೆ
  • ಡೊಳ್ಳುಕುಣಿತ ಸಾಂಸ್ಕೃತಿಕ ತಂಡ ಹೋಲುವ ಮತಗಟ್ಟೆ

ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾನಕ್ಕಾಗಿ ಪ್ರತ್ಯೇಕ ಬೂತ್‌ಗಳನ್ನು ರಚಿಸುವುದರ ಜೊತೆಗೆ ವಿಷಯಾಧಾರಿತ ಪಾರಂಪರಿಕ ಮತಗಟ್ಟಗಳನ್ನು ಸಿದ್ಧಪಡಿಸಿದ್ದು, ಮತದಾರರ ಗಮನ ಸೆಳೆಯುವಲ್ಲಿ ಅಧಿಕಾರಿಗಳು ಇನ್ನೂ ಒಂದು ಹೆಜ್ಜೆ ಮುಂದೆ ಹೋಗುತ್ತಿದ್ದಾರೆ.

ಚಾಮರಾಜ ವಿಧಾನಸಭಾ ಕ್ಷೇತ್ರದ ಪಶ್ಚಿಮ ಮೈಸೂರಿನ ಬೂತನ್ನು ಪಾರಂಪರಿಕ ಬೂತ್ ಆಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಮತದಾನ ಕೇಂದ್ರವನ್ನು ಪಾರಂಪರಿಕ ಕಟ್ಟಡದಂತೆ ಚಿತ್ರಿಸಲಾಗುತ್ತಿದೆ. ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ತಮ್ಮ ಮತದಾನ ಮಾಡುವಂತೆ ಉತ್ತೇಜಿಸುವುದುದಕ್ಕಾಗಿ ಸರ್ಕಾರಿ ಶಾಲೆಗಳಿಗೆ ಪಾರಂಪರಿಕ ನೋಟವನ್ನು ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

“ಮತದಾನದ ಶೇಕಡಾವಾರು ಪ್ರಮಾಣವು ರಾಜ್ಯ ಸರಾಸರಿಗಿಂತ ಕಡಿಮೆ ಇರುವ ಹಲವಾರು ಮತಗಟ್ಟೆಗಳಿವೆ. ಈ ಬಾರಿ ಅಂತಹ  ಮತಗಟ್ಟೆಗಳನ್ನು ಹೆಚ್ಚಿಸಲು ಅಧಿಕಾರಿಗಳು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಾರೆ” ಎಂದು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯತ್ರಿ ಅವರು ಮತದಾರರನ್ನು ಪ್ರೇರೇಪಿಸಲು ಹೊಸ ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಅಕ್ಕಮಹಾದೇವಿಯ ಸಂಘರ್ಷದ ಬದುಕು ಸಮಾಜಕ್ಕೆ ಮಾದರಿ: ಶಾಸಕ ಈಶ್ವರ ಖಂಡ್ರೆ

ಮೈಸೂರು ಮಹಾನಗರ ಪಾಲಿಕೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎ.ಎಸ್.ರಂಜಿತ್ ಕುಮಾರ್ ಮಾತನಾಡಿ, “ಈ ಬಾರಿಯ ಚುನಾವಣೆಯಲ್ಲಿ ವಿಷಯಾಧಾರಿತ ಬೂತ್‌ಗಳು ಗಮನ ಸೆಳೆಯಲಿದ್ದು, ವಿ.ವಿ.ಮೊಹಲ್ಲಾದಲ್ಲಿರುವ ಶಾಲೆಯನ್ನು ಪಾರಂಪರಿಕ ಬೂತ್ ಆಗಿ ಸಿದ್ಧಗೊಳಿಸಲಾಗುತ್ತಿದೆ. ಉತ್ತರ ಮೈಸೂರಿನಲ್ಲಿ ಡೊಳ್ಳುಕುಣಿತ ಎಂಬ ಸಾಂಸ್ಕೃತಿಕ ತಂಡವನ್ನು ಹೋಲುವ ಮತ್ತೊಂದು ಶಾಲೆ ತಲೆ ಎತ್ತಲಿದೆ” ಎಂದು ತಿಳಿಸಿದರು.

“ಮತದಾರರಿಗೆ ಶೌಚಾಲಯ, ಕುಡಿಯುವ ನೀರು ಮತ್ತು ನೆರಳನ್ನು ಒದಗಿಸಲಾಗುವುದು. ಮತದಾರರನ್ನು ಮತದಾನ ಕೇಂದ್ರಗಳಲ್ಲಿ ಹೆಚ್ಚು ಸಮಯ ಕಾಯುವಂತೆ ಮಾಡದಿರುವುದು ನಮ್ಮ ಉದ್ದೇಶವಾಗಿದೆ” ಎಂದು ಅಧಿಕಾರಿ ಖಚಿತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...