ಮೈಸೂರು | ಅರಮನೆ ಪ್ರವೇಶ ಶುಲ್ಕ ಹೆಚ್ಚಳ; ವಿದೇಶಿ ಪ್ರವಾಸಿಗರು ಹಿಂಜರಿಯುವ ಭೀತಿ

Date:

Advertisements

ಮೈಸೂರು ನಗರದ ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆ ಪ್ರವೇಶ ಶುಲ್ಕ ಹೆಚ್ಚಳವಾಗಿದ್ದು, ಅರಮನೆ ನೋಡಲು ಬರುವ ವಿದೇಶಿ ಪ್ರವಾಸಿಗರು ಇನ್ಮುಂದೆ ಭಾರೀ ಮೊತ್ತದ ಪ್ರವೇಶ ಶುಲ್ಕ ಪಾವತಿಸಬೇಕಾಗುತ್ತದೆ.

ಅರಮನೆ ಪ್ರವೇಶಕ್ಕೆ ₹100 ಇದ್ದ ಶುಲ್ಕವನ್ನು ಅರಮನೆ ಆಡಳಿತ ಮಂಡಳಿ ಏಕಾಏಕಿ ಬರೋಬ್ಬರಿ ₹1,000ಕ್ಕೆ ಏರಿಕೆ ಮಾಡಿದೆ.
ಇದರಿಂದ ವಿದೇಶಿ ಪ್ರವಾಸಿಗರಿಗೆ ತೊಂದರೆಯಾಗಲಿದ್ದು, ಅರಮನೆ ವೀಕ್ಷಣೆಗೆ ವಿದೇಶಿ ಪ್ರವಾಸಿಗರು ಹಿಂದೇಟು ಹಾಕುವ ಸಂಭವವಿದೆ.

ಶುಕ್ರವಾರದಿಂದಲೇ ಜಾರಿಗೆ ಬರುವಂತೆ ಪ್ರವೇಶ ಶುಲ್ಕ ಹೆಚ್ಚಿಸಿದ್ದು, ಇದರಿಂದ ಪ್ರವಾಸೋದ್ಯಮದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟುಮಾಡುವ ಸಾಧ್ಯತೆಗಳಿದ್ದು, ಅರಮನೆ ಮಂಡಳಿಯ ತೀರ್ಮಾನಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

Advertisements

ದುಬಾರಿ ಶುಲ್ಕದ ಪರಿಣಾಮವಾಗಿ ವಿದೇಶಿಗರ ಸಂಖ್ಯೆ ಇಳಿಮುಖವಾದರೆ ಅದರ ನೇರ ಹೊಡೆತ ಟ್ರಾವೆಲ್ಸ್, ಟೂರಿಸಂ, ಹೋಟೆಲ್ ಉದ್ದಿಮೆ ಎಲ್ಲದರ ಮೇಲೂ ಪರಿಣಾಮ ಬೀರಲಿದ್ದು, ಇದನ್ನೇ ನಂಬಿಕೊಂಡಿರುವವರಿಗೆ ತೊಂದರೆಯಾಗಲಿದೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪನವರ ಜನ್ಮದಿನಾಚರಣೆ

ಅರಮನೆ ಆಡಳಿತ ಮಂಡಳಿ ವಿದೇಶಿ ಪ್ರವಾಸಿಗರಿಗೆ ಪ್ರವೇಶ ಶುಲ್ಕ ಏರಿಸುವ ನಿರ್ಧಾರದ ಬಗ್ಗೆ ಯಾರೊಡನೆಯೂ ಚರ್ಚೆ ಮಾಡದೆ ತೀರ್ಮಾನ ಮಾಡಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಮತ್ತೊಮ್ಮೆ ಪರಿಶೀಲನೆ ನಡೆಸಬೇಕೆನ್ನುವ ಆಗ್ರಹ ಕೇಳಿಬರುತ್ತಿದೆ.

ಕೊರೊನಾ ಸಮಯದಲ್ಲಿ ಪ್ರವಾಸೋದ್ಯಮ ಕುಸಿದಿದ್ದು, ಈಗತಾನೇ ಚೇತರಿಕೆ ಕಂಡಿದೆ. ಇದೀಗ ವಿದೇಶಿ ಪ್ರವಾಸಿಗರ ಪ್ರವೇಶ ಶುಲ್ಕ ಏರಿಕೆಯಾಗಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಮೈಸೂರು ಅರಮನೆ ಅತ್ಯದ್ಭುತ ಅರಮನೆಗಳಲ್ಲಿ ಒಂದು..ಒಮ್ಮೆ ಅರಮನೆ ಒಳಗೆ ಹೋದರೆ ಎಷ್ಟು ಹೊತ್ತು ಬೇಕಾದರೂ ನೋಡಿ ಆನಂದಿಸಬಹುದು..ವಿದೇಶಿಗರಿಗೆ ರೂ.1000/ ಅಷ್ಟೇನೂ ದೊಡ್ಡ ಮೊತ್ತವಲ್ಲ..ಪ್ಯಾರಿಸ್ ನ ಐಫೆಲ್ ಗೋಪುರದ ಒಳಗೆ ನೋಡಲು ಏನೂ ಇಲ್ಲ.. ಆದರೆ ಅದರೊಳಗೆ ಹೋಗಲು 15 ಯುರೋ ಟಿಕೆಟ್ ಪಡೆಯಬೇಕು..ಅಂದರೆ ಅಂದಾಜು ರೂ.1350/ ..ಪರದೇಶಕ್ಕೆ ಹೋದಾಗ ನಮಗೂ ಹೀಗೆ ಜಾಸ್ತಿ ಹಣ ಪೀಕುತ್ತಾರೆ..ನಮ್ಮದು ಅವರಷ್ಟು costly ಅಲ್ಲ ಬಿಡಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X