ಮೈಸೂರು | ಸಾರ್ವಜನಿಕರ ಕುಂದು ಕೊರತೆ ವಿಚಾರಿಸಿ, ಕೂಡಲೇ ಪರಿಹರಿಸಬೇಕು: ಲೋಕಾಯುಕ್ತ

Date:

Advertisements

ಅಧಿಕಾರಿಗಳು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಕಾರಣವಿಲ್ಲದೆ ವಿಳಂಬ ಮಾಡುವುದಾಗಲಿ, ಕಚೇರಿಯಿಂದ ಕಚೇರಿಗೆ ಅಲೆಸುವುದಾಗಲಿ ಮಾಡದೆ ಪ್ರಾಮಾಣಿಕವಾಗಿ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ಎಚ್ಚರಿಸಿದರು.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆ ಹಾಗೂ ದೂರು ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಸಾರ್ವಜನಿಕರು ಏನಾದರೂ ನಮಗೆ ದೂರು ನೀಡಿದರೆ ನಿಮಗೆ ಖಂಡಿತ ತೊಂದರೆಯಾಗುತ್ತದೆ. ಅದಕ್ಕೆ ಅವಕಾಶ ಮಾಡಿಕೊಡಬೇಡಿ “ಎಂದು ಸಾರ್ವಜನಿಕರ ಪರವಾಗಿ ಅಧಿಕಾರಿಗಳಿಗೆ ಚಾಟಿ ಬೀಸಿದರು.

Advertisements

ಸಾರ್ವಜನಿಕರು ನೀಡಿದ ದೂರುಗಳನ್ನು ಸ್ವೀಕರಿಸಿ ಅವರ ಅಹವಾಲುಗಳನ್ನು ಕೇಳಿ ತಿಳಿದುಕೊಂಡು ಸ್ಥಳದಲ್ಲೇ ಇದ್ದ ಅಧಿಕಾರಿಗಳ ಮುಖಾಂತರ ಸಮಸ್ಯೆಗಳನ್ನು ಬಗೆಹರಿಸಲು ಸೂಚನೆ ನೀಡಿದರು.

“ಜಮೀನುಗಳಿಗೆ ತೆರಳುವ ಸರ್ಕಾರಿ ಓಣಿ ಒತ್ತುವರಿ, ನಿವೇಶನಗಳ ಒತ್ತುವರಿ, ಆಶ್ರಯ ಮನೆಗಳಿಗೆ ಬಿಲ್ ಆಗದೇ ಇರುವುದು, ನಗರ ಸಭೆಯಲ್ಲಿ ಕಡತನಾಪತ್ತೆ ಹಾಗೂ ಖಾತೆ ಮಾಡಿಕೊಡುವುದರಲ್ಲಿ ಅಕ್ರಮ ಎಸಗಿರುವ ಬಗ್ಗೆ ಸೇರಿದಂತೆ ಹಲವು ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ವಿಚಾರಣೆ ನಡೆಸಿ ಅವುಗಳನ್ನು ಕೂಡಲೇ ಸರಿಪಡಿಸಬೇಕು” ಎಂದು ತಾಕೀತು ಮಾಡಿದರು.

ಇದೇ ಸಂದರ್ಭ ಇಲಾಖಾವಾರು ಸರ್ಕಾರದ ಜನಪ್ರಿಯ ಯೋಜನೆಗಳಲ್ಲೊಂದಾದ ಸಕಾಲದಲ್ಲಿ ವಿಲೇವಾರಿ ಆಗದಿರುವ ಅರ್ಜಿಗಳ ಬಗ್ಗೆ ಪ್ರಶ್ನಿಸಿ ಅವುಗಳನ್ನು ಕೂಡಲೇ ಇತ್ಯರ್ಥ ಪಡಿಸುವಂತೆಯೂ ಅಧಿಕಾರಿಗಳಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಒಂದೇ ವರ್ಷದಲ್ಲಿ 800 ಅಸ್ವಾಭಾವಿಕ ಮರಣ ಪ್ರಕರಣಗಳು ದಾಖಲು; ಪೊಲೀಸ್ ಉಪನಿರೀಕ್ಷಕ ರಾಘವೇಂದ್ರ

“ಸರ್ಕಾರಿ ಕಚೇರಿ ಹಾಗೂ ಅಧಿಕಾರಿಗಳಿಂದ ಯಾವುದೇ ತೊಂದರೆ ಹಾಗೂ ವಿಳಂಬವಾಗಲಿ ನಮಗೆ ದೂರು ನೀಡಿ” ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸನೂರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ಜೆರಾಲ್ಡ್, ಲೋಕಾಯುಕ್ತ ಪೊಲೀಸ್ ನಿರೀಕ್ಷಕರುಗಳಾದ ಉಮೇಶ್, ಲೋಕೇಶ್, ರೂಪಶ್ರೀ, ರವಿಕುಮಾರ್ ಸಿಬ್ಬಂದಿಗಳಾದ ಗುರುಪ್ರಸಾದ್, ಮೋಹನ್ ಕುಮಾರ್, ಕಾಂತರಾಜು, ನೇತ್ರಾವತಿ ,ಶೇಖರ್, ಪರಶುರಾಮ್, ದಿನೇಶ್ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X