ಮೈಸೂರು | ಆರ್.ಎನ್ ಕುಲಕರ್ಣಿ ಹತ್ಯೆ ಪ್ರಕರಣ; ಪ್ರಮುಖ ಆರೋಪಿಯ ಜಾಮೀನು ಅರ್ಜಿ ವಜಾ

Date:

  • 2,300 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದ ಪೊಲೀಸರು
  • ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಡೆದ ವಿವಾದಗಳೇ  ಹತ್ಯೆಗೆ ಕಾರಣ

ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಗುಪ್ತಚರ ದಳದ ನಿವೃತ್ತ ಅಧಿಕಾರಿ ಆರ್.ಎನ್ ಕುಲಕರ್ಣಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮನು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಗರದ ನ್ಯಾಯಾಲಯ ವಜಾಗೊಳಿಸಿದೆ.

ಪ್ರಕರಣದ ತನಿಖೆ ನಡೆಸಿದ್ದ ಮೈಸೂರು ನಗರ ಪೊಲೀಸರು ಈ ತಿಂಗಳ ಆರಂಭದಲ್ಲಿ 2,300 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಇದರಲ್ಲಿ ಫೋಟೋಗಳು, ಸಿಸಿಟಿವಿ ದೃಶ್ಯಾವಳಿಗಳು ಮತ್ತು ಹೇಳಿಕೆಗಳನ್ನು ಒಳಪಡಿಸಿದ್ದಾರೆ.

“ಪ್ರಸ್ತುತದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಮುಖ ಆರೋಪಿ ಜಾಮೀನು ಕೋರಿದ್ದಾರೆ. ವಾದ-ಪ್ರತಿವಾದ ಆಲಿಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅರ್ಜಿ ವಜಾಗೊಳಿಸಿದೆ” ಎಂದು ಕುಲಕರ್ಣಿ ಪರ ವಕೀಲ ನರೇಂದ್ರ ಗೌಡ ತಿಳಿಸಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ 2022ರ ನವೆಂಬರ್ 4ರಂದು ಸಂಜೆ ವಾಕಿಂಗ್ ಮಾಡುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕುಲಕರ್ಣಿ ಸಾವನ್ನಪ್ಪಿದ್ದರು.

ಘಟನೆ ನಡೆದ ಮೂರು ದಿನಗಳಲ್ಲಿ ಕೊಲೆ ಆರೋಪದ ಮೇಲೆ ನಗರ ಪೊಲೀಸರು ಮನು ಮತ್ತು ಆತನ ಸ್ನೇಹಿತ ವರುಣನನ್ನು ಬಂಧಿಸಿದ್ದರು.

ಪಶ್ಚಿಮ ಮೈಸೂರಿನ ಟಿ ಕೆ ಲೇಔಟ್‌ನಲ್ಲಿರುವ ಕುಲಕರ್ಣಿ ಅವರ ನಿವಾಸದ ಹಿಂಭಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಾನೂನಾತ್ಮಕ ವಿವಾದಗಳು ನಡೆದಿದ್ದವು. ಎನ್ ಆರ್ ಉಪವಿಭಾಗದ ಮಾಜಿ ಎಸಿಪಿ ಶಿವಶಂಕರ್ ನೇತೃತ್ವದಲ್ಲಿ ಈ ಕುರಿತು ತನಿಖೆ ನಡೆಸಿದ ಪೊಲೀಸರು, “ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಡೆದ ವಿವಾದಗಳೇ  ಹತ್ಯೆಗೆ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಕಾರ್ಖಾನೆಗಳ ಸಹವಾಸ ಸಾಕೆಂದು ಆಲೆಮನೆ ಮೊರೆ ಹೋಗುತ್ತಿರುವ ರೈತರು

ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಲೇ...

ಧಾರವಾಡ | ಮಹದಾಯಿ ಯೋಜನೆ; ಸದನದಲ್ಲಿ ಚರ್ಚೆಯಾಗದಿದ್ದಲ್ಲಿ ಸುವರ್ಣ ಸೌಧಕ್ಕೆ ಮುತ್ತಿಗೆಯ ಎಚ್ಚರಿಕೆ

ಕಳಸಾ ಬಂಡೂರಿ ನಾಲಾ ಮಹದಾಯಿಗಾಗಿ ಉತ್ತರ ಕರ್ನಾಟಕದ ರೈತರು ಸಾಕಷ್ಟು ಹೋರಾಟ...

ಬೆ.ಗ್ರಾಮಾಂತರ | ಮೋಡ ಕವಿದ ವಾತಾವರಣ; ರೇಷ್ಮೆಹುಳುಗಳಿಗೆ ಹಾಲು ತೊಂಡೆ ರೋಗದ ಭೀತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನಾದ್ಯಂತ ಮೂರು ದಿನಗಳಿಂದ ಮೋಡ ಮುಸುಕಿದ...

ಭವಾನಿ ರೇವಣ್ಣ ವರ್ತನೆ ಮಾಜಿ ಪ್ರಧಾನಿ ಕುಟುಂಬಕ್ಕೆ ಶೋಭೆ ತರುವಂತದಲ್ಲ: ಬಿ.ಟಿ.ನಾಗಣ್ಣ

ಅಪಘಾತಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ...