ಮೈಸೂರು | ಭಾರತ್ ಬ್ರಾಂಡ್ ಅಕ್ಕಿಗಾಗಿ ನಿವಾಸಿಗಳ ಕಾತರ; ಬಿಜೆಪಿಗರಿಗೂ ಸಿಗದ ಸುಳಿವು

Date:

Advertisements

ಕೇಂದ್ರ ಸರ್ಕಾರದ ಯೋಜನೆಯಾದ ಭಾರತ್ ಬ್ರಾಂಡ್ ಅಕ್ಕಿಯ ವಿತರಣೆಗಾಗಿ ಜನರು ಕಾತರದಿಂದ ಕಾಯುತ್ತಿದ್ದಾರೆ. ಏಕೆಂದರೆ ನಗರ ಮಾರುಕಟ್ಟೆಗಳಲ್ಲಿ ಕಡಿಮೆ ದರ್ಜೆಯ ಅಕ್ಕಿಯ ಬೆಲೆಗಳು ₹50 ಮಿತಿಯನ್ನು ಸಮೀಪಿಸುತ್ತಿವೆ. ಕೇಂದ್ರ ಸರ್ಕಾರದಿಂದ ₹29ಕ್ಕೆ ಮಾರಾಟವಾಗುವ ಭಾರತ್ ಬ್ರಾಂಡ್ ಅಕ್ಕಿ ಪ್ರಸ್ತುತ ಎಲ್ಲೆಡೆ ಲಭ್ಯವಿಲ್ಲ. ಇದರಿಂದ ಮೈಸೂರು ನಗರದ ನಿವಾಸಿಗಳ ಸಂಕಟ ಇನ್ನಷ್ಟು ಹದಗೆಡುತ್ತಿದೆ.

ಮುಕ್ತ ಮಾರುಕಟ್ಟೆಯಲ್ಲಿ, ಬರ ಮತ್ತು ಇತರ ಉತ್ಪಾದನೆಯ ಪೂರೈಕೆ ಸಮಸ್ಯೆಗಳಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ಅಕ್ಕಿಯ ದರವು ಗಗನಕ್ಕೇರುತ್ತಿದೆ. ಈ ಹಿನ್ನೆಲೆಯಲ್ಲಿ ಈ ಸಬ್ಸಿಡಿ ಅಕ್ಕಿಗೆ ಬೇಡಿಕೆ ಹೆಚ್ಚಾಗಿದೆ.

“ಭಾರತ್ ಬ್ರಾಂಡ್ ಅಕ್ಕಿಯ ಮಾರಾಟ ಕೇಂದ್ರಗಳ ವಿವರಗಳು ನಗರ ಮತ್ತು ಜಿಲ್ಲೆಯಲ್ಲಿ ಲಭ್ಯವಿಲ್ಲ. ಪಟ್ಟಭದ್ರ ಹಿತಾಸಕ್ತಿಗಳಿಂದ ಇದರ ದುರುಪಯೋಗ ಆಗಬಹುದು. ಈ ಬ್ರಾಂಡ್ ಅಕ್ಕಿಯನ್ನು ಎಲ್ಲಿ ಮಾರಾಟ ಮಾಡಲಾಗುತ್ತದೆ ಮತ್ತು ಯಾರು ಖರೀದಿಸುತ್ತಿದ್ದಾರೆ ಎಂಬುದರ ಬಗ್ಗೆಯೂ ತಿಳಿದಿಲ್ಲ. ಈ ಅಕ್ಕಿ ಚಿಲ್ಲರೆ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಭಾವಿಸಿ ಬಹುತೇಕರು ಚಿಲ್ಲರೆ ಮಳಿಗೆಗಳಿಗೆ ಮುಗಿಬೀಳುತ್ತಿದ್ದಾರೆ” ಎಂದು ಸ್ಥಳೀಯ ನಿವಾಸಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Advertisements

“ಭಾರತ್ ಬ್ರಾಂಡ್ ಅಕ್ಕಿಯ ಬಗ್ಗೆ ಎಲ್ಲಿಯೂ ಮಾಹಿತಿ ಲಭ್ಯವಿಲ್ಲ. ಅಂಗಡಿಗಳಲ್ಲಿ, ಸರಾಸರಿ ಗುಣಮಟ್ಟದ ಅಕ್ಕಿ ಈಗ ₹60ಕ್ಕಿಂತ ಹೆಚ್ಚಾಗಿದೆ. ಹಾಗಾಗಿ ಈ ಬ್ರಾಂಡ್ ಅಕ್ಕಿ ಮಧ್ಯಮ ವರ್ಗದ ಕುಟುಂಬಗಳಿಗೆ ಅನುಕೂಲವಾಗುತ್ತದೆಂದು ಎಲ್ಲರೂ ನಿರೀಕ್ಷಿಸಿದ್ದರು. ದುರದೃಷ್ಟವಶಾತ್, ಅಕ್ಕಿಯ ಮಾರಾಟ ಕೇಂದ್ರಗಳನ್ನು ಎಲ್ಲಿ ಸ್ಥಾಪಿಸಲಾಗಿದೆ ಎಂಬುದರ ವಿವರಗಳನ್ನು ಯಾರೂ ಹಂಚಿಕೊಳ್ಳುತ್ತಿಲ್ಲ” ಎಂದು ಟಿ ಕೆ ಲೇಔಟ್ ನಿವಾಸಿಯೊಬ್ಬರು ಹೇಳಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಬೇಸಿಗೆಗೂ ಮುನ್ನವೇ ಬಿಸಿಲಿನ ಧಗೆ, ಮಣ್ಣಿನ ಮಡಕೆಗಳತ್ತ ಜನರ ಚಿತ್ತ

“ಈ ಯೋಜನೆಯನ್ನು ಪಟ್ಟಭದ್ರ ಹಿತಾಸಕ್ತಿಗಳು ದುರುಪಯೋಗಪಡಿಸಿಕೊಳ್ಳದಂತೆ ನೋಡಿಕೊಳ್ಳಲು, ಈ ಅಕ್ಕಿಯನ್ನು ಯಾವ ಪ್ರದೇಶಗಳಲ್ಲಿ ವಿತರಿಸಲಾಗುತ್ತಿದೆ. ಎಲ್ಲ ವಿವರಗಳನ್ನು ಸಾರ್ವಜನಿಕರು ಎಲ್ಲಿ ಪಡೆಯುತ್ತಾರೆಂದು ಸರ್ಕಾರಿ ಸಂಸ್ಥೆಗಳು ಖಚಿತಪಡಿಸಿಕೊಳ್ಳಬೇಕು” ಎಂದು ಒತ್ತಾಯಿಸಿದರು.

ಭಾರತ್ ಬ್ರಾಂಡ್ ಅಕ್ಕಿಯ ಬಗ್ಗೆ ಬಿಜೆಪಿ ನಾಯಕರಿಗೂ ಮಾಹಿತಿ ತಿಳಿದಿಲ್ಲ. ಈ ನಡುವೆ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮೂಲಗಳು, “ಈ ಯೋಜನೆಯನ್ನು ಕೇಂದ್ರ ಏಜೆನ್ಸಿಗಳು ಜಾರಿಗೆ ತರುತ್ತಿವೆ. ಆದರೆ, ಅವುಗಳು ಯಾವುದೇ ಪಾತ್ರ ನಿರ್ವಹಿಸುವುದಿಲ್ಲ”ವೆಂದು ಗಮನಸೆಳೆದಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X