ಮೈಸೂರು | ಮಾಹಿತಿ ಹಕ್ಕು ಅನುಷ್ಠಾನ ಸಭೆ; ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿ

Date:

Advertisements

ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಹಿತಿ ಹಕ್ಕು ಅನುಷ್ಠಾನ ಕುರಿತಾಗಿ ನಡೆದ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

ಕರ್ನಾಟಕ ರಾಜ್ಯ ಮುಖ್ಯ ಮಾಹಿತಿ ಆಯುಕ್ತರಾದ ಎ.ಎಂ.ಪ್ರಸಾದ್ ಹಾಗೂ ಆಯುಕ್ತರಾದ ಡಾ.ಹರೀಶ್ ಕುಮಾರ್ ಸಭೆಯಲ್ಲಿ ಭಾಗವಹಿಸಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆ ಅನುಷ್ಠಾನ ಸಂಬಂಧ ಮಾಹಿತಿ, ನಿರ್ದೇಶನ ನೀಡಿದರು.

ಡಾ. ಹರೀಶ್ ಕುಮಾರ್ ಮಾತನಾಡಿ, “ಭಾರತದ ಸಂವಿಧಾನದ ಕಲಂ 19ರಲ್ಲಿ ಭಾರತದ ಎಲ್ಲಾ ಪ್ರಜೆಗಳಿಗೆ ವಾಕ್ ಮತ್ತು ಅಭಿಪ್ರಾಯ ವ್ಯಕ್ತಪಡಿಸಲು ಅಧಿಕಾರ ನೀಡಿದೆ. ಅದರ ತಾತ್ವಿಕ ತಳಹದಿಯ ಅನುಸಾರವೇ ಮಾಹಿತಿ ಹಕ್ಕು ಕಾಯ್ದೆ ಜಾರಿಗೊಂಡಿದೆ. ಈ ಕಾಯಿದೆಯ ಮುಖಾಂತರ ಜನತೆ ಸರ್ಕಾರದ ವ್ಯವಹಾರಗಳಲ್ಲಿ ಭಾಗವಹಿಸಲು ನೆರವಾಗಿದೆ” ಎಂದು ತಿಳಿಸಿದರು.

Advertisements

“ಮಾಹಿತಿ ಹಕ್ಕು ಕಾಯ್ದೆ ಅತ್ಯಂತ ಸರಳವಾದ ಕಾಯ್ದೆಯಾಗಿದ್ದು, ಅಷ್ಟೇ ಗಂಭೀರ ಸ್ವರೂಪದ ಕಾಯ್ದೆಯಾಗಿದೆ. ಕಾಯಿದೆ ಜಾರಿಗೆ ಬಂದು 20 ವರ್ಷಗಳು ಕಳೆದರೂ ಪರಿಣಾಮಕಾರಿ ಅನುಷ್ಠಾನಕ್ಕೆ ನೌಕರಶಾಹಿ ಕಾರ್ಯಪ್ರವೃತ್ತವಾಗಬೇಕು” ಎಂದು ಸಲಹೆ ನೀಡಿದರು.

ಪ್ರಸ್ತುತ ಆಯೋಗದಲ್ಲಿ 40 ಸಾವಿರ ಎರಡನೇ ಮೇಲ್ಮನವಿ ಮತ್ತು ದೂರು ಪ್ರಕರಣಗಳಿದ್ದು ಮೈಸೂರು ಜಿಲ್ಲೆಗೆ ಸಂಬಂಧಪಟ್ಟಂತೆ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳ ವಿಲೇವಾರಿ ಬಾಕಿಯಿದೆ. ಸಂಬಂಧಪಟ್ಟ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಮತ್ತು ಪ್ರಥಮ ಮೇಲ್ಮನವಿ ಪ್ರಾಧಿಕಾರಿಗಳು ಪ್ರಕರಣಗಳ ಶೀಘ್ರ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳಲು” ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಜಾತಿ ಸಮೀಕ್ಷೆಗೆ ವಿರೋಧಿಸುವವರು ಹಿಂದುಳಿದ ಸಮುದಾಯಗಳ ವಿರೋಧಿಗಳು

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ , ಅಪರ ಜಿಲ್ಲಾಧಿಕಾರಿ ಡಾ. ಶಿವರಾಜು, ಡಿಸಿಪಿ ಬಿಂದುಮಣಿ, ಜಿಲ್ಲಾ ಪಂಚಾಯತ್ ಸಿಇಓ ಯುಕೇಶ್ ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಇಲಾಖಾವಾರು ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X