ಮೈಸೂರು | ಮಹಿಳೆಯರ ಸಬಲೀಕರಣಕ್ಕೆ ಸಂಜೀವಿನಿ ಕಾರ್ಯಕ್ರಮ

Date:

Advertisements

ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲರಾಗಲು ಸಂಜೀವಿನಿಯಾಗಿರುವ ಸುತ್ತು ನಿಧಿ, ಸಮುದಾಯ ಬಂಡವಾಳ ನಿಧಿ ಹಾಗೂ ಸರ್ಕಾರದ ಆರ್ಥಿಕ ನೆರವು ಕಾರ್ಯಕ್ರಮಗಳು ಅತ್ಯಂತ ಪ್ರಮುಖ ಪಾತ್ರ ವಹಿಸಿವೆ ಎಂದು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತೆ ಡಾ ಅರುಂಧತಿ ಚಂದ್ರಶೇಖರ್ ತಿಳಿಸಿದರು.

ಮೈಸೂರು ನಗರದಲ್ಲಿ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಕೌಶಲ್ಯಾಭಿವೃದ್ದಿ, ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಅವರ ಸಹಯೋಗದೊಂದಿಗೆ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ “ದೀಪ ಸಂಜೀವಿನಿ” ಕಾರ್ಯಕ್ರಮ‌ ಉದ್ಘಾಟಿಸಿ ಮಾತನಾಡಿದರು.

“ಮೈಸೂರು ಜಿಲ್ಲೆಯಲ್ಲಿ ಒಟ್ಟು 16,407 ಸ್ವ-ಸಹಾಯ ಸ್ತ್ರೀ ಶಕ್ತಿ ಸಂಘಗಳಿದ್ದು, ಸುಮಾರು 2,02,696 ಸದಸ್ಯರಿರುತ್ತಾರೆ. ಸ್ವ-ಸಹಾಯ ಸಂಘದ ಮಹಿಳೆಯರು ಈವರೆಗೆ ಸುಮಾರು 239 ಕೋಟಿ ಆರ್ಥಿಕ ಚಟುವಟಿಕೆಗಳನ್ನು ಮಾಡಿರುವುದು ತುಂಬಾ ಸಂತೋಷ ತರುವಂತಹದ್ದಾಗಿದೆ” ಎಂದರು.

Advertisements

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ ಮಾತನಾಡಿ, “ಜಿಲ್ಲೆಯಲ್ಲಿ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಮೂಲಕ ಕರಕುಶಲ ಕಲೆ ಬಳಸಿ ದೀಪಗಳನ್ನು ತಯಾರು ಮಾಡಿ ಮಾರಾಟ ಮಾಡಲಾಗುತ್ತಿದೆ. ದೀಪಾವಳಿ ಹಬ್ಬದಲ್ಲಿ ಪಟಾಕಿ ಹಚ್ಚಿ ಆಚರಿಸುವ ಬದಲು ದೀಪ ಹಚ್ಚಿ ಆಚರಿಸಬೇಕು. ಪಟಾಕಿಗಳು ಪರಿಸರಕ್ಕೆ ಹಾನಿಕಾರಕ ಹಾಗೂ ಶಬ್ದ ಮಾಲಿನ್ಯ ಉಂಟು ಮಾಡುತ್ತದೆ. ಇದರ ಬದಲು ದೀಪವನ್ನು ಹಚ್ಚಿ ಆಚರಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ದಲಿತ ದೌರ್ಜನ್ಯ ತಡೆಗೆ ವಿಶೇಷ ಪೊಲೀಸ್ ಠಾಣೆ ತೆರೆಯುವಂತೆ ದಸಂಸ ಆಗ್ರಹ

“ಸ್ವ ಸಹಾಯ ಸಂಘಗಳ ಮೂಲಕ ಗ್ರಾಮಿಣ ಭಾಗದಲ್ಲಿ ಕಸ ಸಂಗ್ರಹಣೆ, ಮಾಡಿ ಗೊಬ್ಬರ ಮಾಡಿ ಪುನರ್ ಬಳಕೆ ಮಾಡುವುದರಿಂದ ಸಂಘಗಳು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗುತ್ತದೆ” ಎಂದು ಸಲಹೆ ನೀಡಿದರು.

“ದೀಪಾವಳಿ ಹಬ್ಬದ ಅಂಗವಾಗಿ ಇಂದಿನಿಂದ ಒಂದು ವಾರಗಳ ಕಾಲ ದೀಪ ಸಂಜೀವಿನಿ ಕಾರ್ಯಕ್ರಮ ಆಯೋಜಿಸಿ, ಸ್ವ-ಸಹಾಯ ಸಂಘದ ಸದಸ್ಯರ ಆರ್ಥಿಕ ಚಟುವಟಿಕೆಗೆ ಒತ್ತು ನೀಡಿ ಸಾರ್ವಜನಿಕರಿಗೆ ಅರಿವು ಉಂಟು ಮಾಡಿರುವುದು ತುಂಬಾ ಸಂತೋಷವಾಗಿದೆ” ಎಂದು ಹರ್ಷ ವ್ಯಕ್ತಪಡಿಸಿದರು.

ಸದರಿ ಮಳಿಗೆಗಳನ್ನು ಕೆ ಎಂ ಗಾಯತ್ರಿ, ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ ಹಾಗೂ ಕಾರ್ಮಿಕ ಇಲಾಖೆಯ ಆಯುಕ್ತರು ವೀಕ್ಷಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X