ಮೈಸೂರು | ಬಡವರಿಗೆ ಸಹಾಯ ಮಾಡಿ, ಸಮಾಜಕ್ಕೆ ಕೊಡುಗೆ ನೀಡಿ; ಕೆ ಆರ್ ಸತ್ಯ ನಾರಾಯಣ್

Date:

Advertisements

ಮೈಸೂರಿನ ವಿಶ್ವೇಶ್ವರ ನಗರದಲ್ಲಿರುವ ಕೆ ವಿ ಆರ್ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಹಾಗೂ ಕೆಎಂಪಿಕೆ ಟ್ರಸ್ಟ್ ನ 18ನೇ ವಾರ್ಷಿಕೋತ್ಸವದ ಅಂಗವಾಗಿ, ಸಂಘಟನೆ ಹಾಗೂ ಧಾರ್ಮಿಕ ಸೇವೆಯಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷ ಹಾಗೂ ಕಲ್ಯಾಣ ಮಂಟಪ ಮಾಲೀಕರ ಸಂಘದ ಅಧ್ಯಕ್ಷ ಕೆ ಆರ್ ಸತ್ಯನಾರಾಯಣ್ ಅವರಿಗೆ ‘ಚಾಣಕ್ಯ ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಕೆ ಆರ್ ಸತ್ಯನಾರಾಯಣ್ ಉಳ್ಳವರು, ಸಮಾಜದಲ್ಲಿ ಸದೃಢರಾಗಿರುವವರು ಸ್ವ ಇಚ್ಛೆಯಿಂದ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಬಡವರಿಗೆ ಸಹಾಯ, ನೆರವಿನ ಸೇವೆ ಮಾಡುವುದರೊಂದಿಗೆ ಸಮಾಜಕ್ಕೆ ತಮ್ಮ ಕೊಡುಗೆ ನೀಡಬೇಕು. ಎಲ್ಲವನ್ನೂ ಕೊಟ್ಟಿರುವ ಸಮಾಜಕ್ಕೆ ನಮ್ಮಿಂದ ಸಮಾಜಕ್ಕಾಗಿ ಸೇವೆ ಸಲ್ಲಿಸುವ ಅಗತ್ಯವಿದೆ ಎಂದರು.

ಸರ್ವ ಧರ್ಮೀಯರ ಸಮಾಜ ನಮ್ಮನ್ನ ಬೆಳೆಸಿದ ಮೇಲೆ ಸಮಾಜದ ಋಣ ನಮ್ಮ ಮೇಲಿರುತ್ತದೆ. ಹಾಗಾಗಿ ಬಡವರಿಗೆ, ನೊಂದವರಿಗೆ ನೆರವಾಗಿ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ, ನೆಮ್ಮದಿಯ ಬದುಕನ್ನು ಕಟ್ಟಿಕೊಳ್ಳಲು ಬೆಳೆಸಬೇಕಿದೆ ಎಂದರು.

Advertisements

ಇದನ್ನು ಓದಿದ್ದೀರಾ? ಯಾದಗಿರಿ | ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬಡಿದ ಸಿಡಿಲು: ನಾಲ್ವರ ಸಾವು

ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ರಾಕೇಶ್ ಭಟ್,ಎಂ ಆರ್ ಬಾಲಕೃಷ್ಣ, ನಾಗರಾಜ್, ಕಡಕೋಳ ಜಗದೀಶ್, ಹೊಯ್ಸಳ ಕರ್ನಾಟಕ ಸಂಘದ ನಿರ್ದೇಶಕ ಜಯಸಿಂಹ, ವಿಜಯ್ ಕುಮಾರ್, ಚಕ್ರಪಾಣಿ, ಲತಾ ಬಾಲಕೃಷ್ಣ, ನಾಗಶ್ರೀ ಸುಚಿಂದ್ರ, ವಿಜಯ ಮಂಜುನಾಥ್, ಗುರುರಾಜ್, ಹಾಗೂ ಇನ್ನಿತರರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X