ಮೈಸೂರು | ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಮತ್ತು ಶುಲ್ಕ ಸಮಸ್ಯೆ ಪರಿಹರಿಸಲು ಆಗ್ರಹ

Date:

Advertisements

ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಸ್ನಾತಕೋತ್ತರ ವಿಭಾಗದಲ್ಲಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರ ವಿದ್ಯಾರ್ಥಿ ವೇತನ ಸಮಸ್ಯೆ ಮತ್ತು ಶುಲ್ಕಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಎಐಡಿಎಸ್‌ಒ ಮುಖಂಡರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಮೈಸೂರಿನಲ್ಲಿ ಪ್ರತಿಭಟನೆ ನಡೆಸಿ ಪ್ರತಿಭಟನಾಕಾರರು ಕಾಲೇಜಿನ ಪ್ರಾಂಶುಪಾಲರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಎಸ್‌ಸಿ , ಎಸ್‌ಟಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಶುಲ್ಕದ ಬಗ್ಗೆ ಯಾವುದೇ ಸಂಪೂರ್ಣ ಮಾಹಿತಿ ಇಲ್ಲ. ವಿದ್ಯಾರ್ಥಿಗಳು ಕಾಲೇಜಿಗೆ ಸೇರಬೇಕಾದರೆ 600 ರೂ.ಗಳನ್ನು ತೆಗೆದುಕೊಂಡು ದಾಖಲಾತಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಸಂಪೂರ್ಣ ವಿದ್ಯಾರ್ಥಿ ವೇತನ ಬಂದಿಲ್ಲ. ಪ್ರಥಮ ಮತ್ತು ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕ್ರಮವಾಗಿ 2000, 4000 ರೂ. ಮಾತ್ರವೇ ನೀಡಲಾಗಿದೆ. ಅಲ್ಲದೆ, ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ 11,000 ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ 19,498 ದಿಢೀರನೆ ಕಾಲೇಜಿಗೆ ಶುಲ್ಕವನ್ನು ಕಟ್ಟಬೇಕೆಂದು ಒತ್ತಾಯಿಸಲಾಗಿದೆ. ಈ ಕ್ರಮ ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ದ್ವಿತೀಯ ವರ್ಷದ ಪದವಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ಒಂದನೇ ಸೆಮಿಸ್ಟರ್ ಮತ್ತು ಎರಡನೇ ಸೆಮಿಸ್ಟರ್ ಹಾಗೂ ಮೂರನೇ ಸೆಮಿಸ್ಟರ್ ಓದುವಾಗ ಯಾವುದೇ ರೀತಿ ಪರೀಕ್ಷಾ ಶುಲ್ಕವನ್ನು ಕಟ್ಟಿಸಿಕೊಂಡಿಲ್ಲ. ಆದರೆ, ಈಗ ಏಕಾಏಕಿ ಮೂರು ಸೆಮಿಸ್ಟರ್‌ಗಳ ಪರೀಕ್ಷಾ ಶುಲ್ಕವನ್ನು ಕಟ್ಟಬೇಕೆಂದು ಒತ್ತಾಯಿಸಲಾಗಿದೆ. ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಯುಯುಸಿಎಂಎಸ್‌ ಪೋರ್ಟಲ್‌ನಲ್ಲಿ ಪರೀಕ್ಷಾ ಶುಲ್ಕವನ್ನು ಕಟ್ಟುವಂತೆ ತೋರಿಸುತ್ತಿಲ್ಲ. ಇದು ವಿದ್ಯಾರ್ಥಿಗಳಲ್ಲಿ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ” ಎಂದು ಕಿಡಿಕಾರಿದ್ದಾರೆ.

Advertisements

ಪ್ರತಿಭಟನೆಯಲ್ಲಿ ಚಂದ್ರಕಲಾ, ನಿತಿನ್, ಸ್ವಾತಿ ಹಾಗೂ ಮಹಾರಾಣಿ ಸ್ನಾತಕೋತ್ತರ ಕಲಾ ವಿಭಾಗದ ನೂರಾರು ವಿದ್ಯಾರ್ಥಿಗಳು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X