ಮೈಸೂರು | ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶಕ್ಕೆ ನಿರ್ಧಾರ

Date:

Advertisements

ನವೆಂಬರ್ ತಿಂಗಳಿನಲ್ಲಿ ‘ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶ’ ನಡೆಸಲು ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು, ಅಹಿಂದ ಮತ್ತು ಶೋಷಿತ ವರ್ಗಗಳ ನಾಯಕರು, ಕಾಂಗ್ರೆಸ್ ಪಕ್ಷದ ಮುಖಂಡರು ಸೇರಿ ಸಭೆ ತೀರ್ಮಾನಿವೆ.

ಮೈಸೂರು ನಗರದ ಯಾದವ ಸಮುದಾಯದ ಭವನದಲ್ಲಿ ಮೈಸೂರು, ಕೊಡಗು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳ ಸಂಘಟನೆಗಳು ಸಭೆಯಲ್ಲಿ ಚರ್ಚಿಸಿ, ನಾಲ್ಕು ದಶಕಗಳ ಕಾಲ ಪ್ರಾಮಾಣಿಕ ರಾಜಕಾರಣ ಮಾಡಿಕೊಂಡು ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆಗೆ ಇಳಿದಿರುವ ಬಿಜೆಪಿ-ಜೆಡಿಎಸ್ ಪಕ್ಷಗಳ ಕಾರ್ಯಚಟುವಟಿಕೆ ಖಂಡಿಸಿ ನವೆಂಬರ್ ತಿಂಗಳಿನಲ್ಲಿ ಮೈಸೂರು ನಗರದ ಮಹಾರಾಜ ಕಾಲೇಜು ಮೈದಾದದಲ್ಲಿ `ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶ’ ನಡೆಸಲು ನಿರ್ಧಾರ ಕೈಗೊಂಡವು.

ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ ಸುಬ್ರಹ್ಮಣ್ಯ ಮಾತನಾಡಿ, “ಪ್ರಾಮಾಣಿಕತೆಗೆ ಹೆಸರುವಾಸಿಯಾಗಿರುವ ಸಿದ್ದರಾಮಯ್ಯನವರ ವಿರುದ್ಧ ವಿಪಕ್ಷಗಳು ಷಡ್ಯಂತ್ರ ನಡೆಸಿ ಮುಡಾ ಹಗರಣದ ನೆಪದಲ್ಲಿ ಮಸಿ ಬಳಿಯಲು ಯತ್ನಿಸುತ್ತಿವೆ. ಈ ನಾಡಿನ ಶೋಷಿತರು, ಅಲ್ಪಸಂಖ್ಯಾತ, ಹಿಂದುಳಿದ, ದಲಿತ ಹಾಗೂ ಎಲ್ಲ ವರ್ಗಗಳ ಬಡವರ ಪರ ನಿಲುವು ತಳೆಯುತ್ತಿರುವುದನ್ನು ಸಹಿಸದ ವಿಪಕ್ಷಗಳ ಪಿತೂರಿಗೆ ನಾಡಿನ ಜನತೆ ಮನ್ನಣೆ ನೀಡಬಾರದು. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ʼಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶ’ ನಡೆಸಲು ನಿರ್ಧರಿಸಿದ್ದೇವೆ. ನಾಡಿನ ಪ್ರಜ್ಞಾವಂತ ಜನತೆ ಬೆಂಬಲ ನೀಡಬೇಕು” ಎಂದರು.

Advertisements

ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಮಾತನಾಡಿ, “ಕೇರಳದ ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿಯವರು ನಾಮಪತ್ರ ಸಲ್ಲಿಸುವ ವೇಳೆ ಸಿದ್ದರಾಮಯ್ಯಗೆ ಸಿಕ್ಕ ಬಹುಪಾರಕ್ ನಾಡಿನ ಆತ್ಮಸಾಕ್ಷಿಯಂತೆ ಕಂಡಿತು. ಇಂತಹ ನಾಯಕನನ್ನು ಅರಿಯುವಲ್ಲಿ ನಾಡಿನ ಜನತೆ ಎಡವಿದ್ದಾರೆ. ಆದರೂ ಶೋಷಿತರು, ಅಹಿಂದ ವರ್ಗ ಸಿದ್ದರಾಮಯ್ಯನವರನ್ನು ಸಮರ್ಥಿಸಿಕೊಳ್ಳಲು ಹಿಂದೆ ಬಿದ್ದಿರುವುದು ದುರಾದೃಷ್ಟಕರ” ಎಂದು ಬೇಸರ ವ್ಯಕ್ತಪಡಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ ಬಿ ಜೆ ವಿಜಯಕುಮಾರ್ ಮಾತನಾಡಿ, “ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶಕ್ಕೆ ಕಾಂಗ್ರೆಸ್ ಪಕ್ಷದ ಬೆಂಬಲದ ಬಗ್ಗೆ ಪಕ್ಷದ ಮಟ್ಟದಲ್ಲಿ ಚರ್ಚಿಸಿ ಲಕ್ಷ ಲಕ್ಷ ಜನರು ಸಮಾವೇಶದಲ್ಲಿ ಭಾಗಿಯಾಗಿಸಲು ಕ್ರಮ ವಹಿಸುತ್ತೇವೆ. ಎರಡನೇ ಸಿದ್ದರಾಮೋತ್ಸವದಂತೆ ಈ ಸಮಾವೇಶ ನಡೆಸಬೇಕಿದೆ” ಎಂದು ಕರೆ ನೀಡಿದರು.

ಇದೇ ವೇಳೆ ಕರ್ನಾಟಕ ವಕೀಲರ ಜಾಗೃತ ವೇದಿಕೆ ಪ್ರಕಟಿಸಿರುವ `ಮುಡಾ ಪ್ರಕರಣ ಸತ್ಯಾಸತ್ಯತೆ’ ಕಿರು ಹೊತ್ತಿಗೆ ಬಿಡುಗಡೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ಮರಕುಂಬಿ ಪ್ರಕರಣ | ಊರಿಗೆ ಊರೇ ನೀರವ ಮೌನ; ಮಾತನಾಡಲೂ ಹೆದರುತ್ತಿರುವ ಗ್ರಾಮಸ್ಥರು

ಎಸ್ ಮಾದೇಗೌಡ ಮಾತನಾಡಿ, “ನಾವು ಈ ಮೊದಲು ಸಿದ್ದರಾಮಯ್ಯನವರ ವಿರುದ್ಧ ರಾಜಕಾರಣ ಮಾಡಿಕೊಂಡು ಬಂದಿದ್ದೆವು. ಈಗ ಅವರ ವ್ಯಕ್ತಿತ್ವ ನೋಡಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದೇವೆ. ಅವರ ವಿರುದ್ಧ ನಡೆಯುತ್ತಿರುವ ಪಿತೂರಿಯನ್ನು ಹಣಿಯಬೇಕಿದೆ. ಯಾವುದೇ ಒಂದು ಜಾತಿಯಿಂದ ರಾಜಕಾರಣ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಸರ್ವಜನಾಂಗದ ನಾಯಕ” ಎಂದರು.

ಸಭೆಯಲ್ಲಿ ಜಿಪಂ ಮಾಜಿ ಸದಸ್ಯ ಬಸವಣ್ಣ, ಸುಧಾ ಮಹದೇವಯ್ಯ, ಮಾದೇಗೌಡ, ದ್ಯಾವಪ್ಪನಾಯಕ, ರಾಜೇಶ್ವರಿ, ಜಿ ವಿ ಸೀತಾರಾಮ್, ವಿ ರಾಮಸ್ವಾಮಿ, ಡಿ ನಾಗಭೂಷಣ್, ಸುರೇಶ್, ಶಿವಪ್ಪ, ಆನಂದ್, ಸುನಿಲ್, ಬಸವರಾಜ್, ರಾಜು, ರಾಜೇಶ್, ಮಾದೇವ್, ಪುನೀತ್, ಶಿವಕುಮಾರ್, ಲೋಕೇಶ್, ಸಿ ಆರ್ ರಾಮೇಗೌಡ, ಪುಟ್ಟನಾಯಕ, ಅಶೋಕ್, ಬಸಪ್ಪ, ವಕೀಲ ಪುಟ್ಟ ಸಿದ್ದೇಗೌಡ, ವಿಜಯಕುಮಾರ್, ಪುಟ್ಟಮಲ್ಲಯ್ಯ, ಉದಯ್ ಕುಮಾರ್, ಬಸವಣ್ಣ, ಮಧು, ಮಹದೇವ, ಕಮಲ, ಶಾಂತಾ, ರಾಜೀವ್, ಪುಟ್ನಂಜ, ರವಿ, ಹೇಮಲತಾ, ಭಾಗ್ಯಮ್ಮ, ಕುಮಾರ್, ಮಾದೇಗೌಡ, ಮಂಜು, ಪುಟ್ಟಯ್ಯ ಸೇರಿದಂತೆ ಹಲವು ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X