ಮೈಸೂರು | ಅಧಿಕಾರಿಗಳ ಅಮಾನತು; ಅನಾಥವಾದ ಕೃಷಿ ಇಲಾಖೆ

Date:

Advertisements

ರಾಜ್ಯದ ಕೃಷಿ ಸಚಿವರ ವಿರುದ್ಧ ಮಂಡ್ಯ ಜಿಲ್ಲೆಯ ಸಹಾಯಕ ಕೃಷಿ ಅಧಿಕಾರಿಗಳ ಹೆಸರಿನಲ್ಲಿ ಕೆ.ಆರ್‌ ನಗರ ತಾಲೂಕಿನ ಇಬ್ಬರು ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಅವರನ್ನು ಬಂಧಿಸಿ, ಅಮಾನತು ಮಾಡಲಾಗಿತ್ತು. ಆ ಅಧಿಕಾರಿಗಳು ಜಾಮೀನಿನ ಮೇಲೆ ಹೊರಬಂದಿದ್ದಾರೆ. ಆದರೆ, ಕೆ.ಆರ್‌ ನಗರ ಕೃಷಿ ಇಲಾಖೆಗೆ ಬೇರಾವುದೇ ಅಧಿಕಾರಿಗಳ ನೇಮಕವಾಗದೆ, ಇಲಾಖೆ ಖಾಲಿ ಉಳಿದಿದೆ.

ಕೆ.ಆರ್‌ ನಗರ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್ ಮತ್ತು ಸುದರ್ಶನ್ ಅವರು ಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳ ಹೆಸರಿನಲ್ಲಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಅವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದರು. ಪ್ರಕರಣ ನಡೆದು 3ರಿಂದ 4 ತಿಂಗಳುಗಳಾಗಿವೆ. ಆದರೆ, ಕೆ.ಆರ್ ನಗರ ಮತ್ತು ಸಾಲಿಗ್ರಾಮ ಅವಳಿ ತಾಲೂಕುಗಳ ಕೃಷಿ ಇಲಾಖೆಯಲ್ಲಿ ಯಾವುದೇ ಅಧಿಕಾರಿಗಳು ಇಲ್ಲದೆ ಕಚೇರಿ ಅನಾಥವಾಗಿದೆ.

ಈ ದೂರಿನ ಹಿಂದೆ ರಾಜಕೀಯ ದುರುದ್ದೇಶವಿದೆಯೇ? ಅಥವಾ ರಾಜಕೀಯ ದ್ವೇಷ ಸಾಧನೆಗಾಗಿ ಅಧಿಕಾರಿಗಳ ಮೂಲಕ ಪತ್ರ ಬರೆಸಿದ್ದಾರೆಯೇ ಅಥವಾ ಕೃಷಿ ಇಲಾಖೆಯಲ್ಲಿರುವ ಅಧಿಕಾರಿಗಳ ನಡುವಿನ ವೈಷಮ್ಯ ಇದಕ್ಕೆ ಪ್ರೇರಣೆಯಾಗಿರಬಹುದೇ? ಎಂಬ ವಿಚಾರಗಳು ಬಹಿರಂಗವಾಗಬೇಕಿದೆ. ಆದರೆ, ಅಧಿಕಾರಿಗಳ ಹೆಸರಿನಲ್ಲಿ ಪತ್ರ ಬರೆಸಿದವರು ಯಾರು ಎನ್ನುವುದು ಈವರೆಗೆ ರಹಸ್ಯವಾಗಿಯೇ ಉಳಿದಿದೆ.

Advertisements

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | 19 ವರ್ಷಗಳೇ ಕಳೆದರೂ ಬಡಾವಣೆಗಿಲ್ಲ ಮೂಲ ಸೌಕರ್ಯ

ಮೈಸೂರಿನಿಂದ ಆಗೊಮ್ಮೆ ಈಗೊಮ್ಮೆ ಬಂದು ಹೋಗುವ ಕೃಷಿ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ತಾಲೂಕಿನಲ್ಲಿ ಇಬ್ಬರು ಅಧಿಕಾರಿಗಳು ಅಮಾನತುಗೊಂಡ ನಂತರ ರೈತರ ಕೆಲಸ ಕಾರ್ಯಗಳಿಗೆ ಹಿನ್ನಡೆಯಾಗಿದ್ದು, ಸರ್ಕಾರ ಕೂಡಲೇ ಖಾಯಂ ಅಧಿಕಾರಿಗಳ ನೇಮಕಕ್ಕೆ ಮುಂದಾಗಬೇಕು” ಎಂದು ಈ ಭಾಗದ ರೈತರು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X