ಮೈಸೂರು | ತಾಪಮಾನ ಹೆಚ್ಚಳ; ಪಕ್ಷಿಗಳಿಗೆ ನೀರಡಿಕೆ ನೀಗಿಸುವ ಜಾಗೃತಿ ಜಾಥಾ

Date:

Advertisements

ಬೇಸಿಗೆಯ ತಾಪಮಾನ ಹೆಚ್ಚಳವಾಗುತ್ತಿರುವ ಪರಿಣಾಮ ನೀರಿನ ಸೆಲೆಗಳು ಬತ್ತಲಾರಂಭಿಸಿವೆ. ಹೀಗಾಗಿ ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಮೈಸೂರು ನಗರದ ಕಡಕೋಳದಲ್ಲಿರುವ ಶೇಷಾದ್ರಿಪುರಂ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿಯ ವಿದ್ಯಾರ್ಥಿಗಳು, ಹಾಗೆಯೇ ರೋಟರಿ ಕ್ಲಬ್ ಶ್ರೀರಂಗಪಟ್ಟಣ ಮತ್ತು ಅಚೀವರ್ಸ್ ಅಕಾಡೆಮಿಯಿಂದ ಜಾಗೃತಿ ಜಾಥಾ ಅಭಿಯಾನ ಆಯೋಜನೆ ಮಾಡಿದ್ದರು.

ಈ ಅಭಿಯಾನಕ್ಕೆ ಶ್ರೀರಂಗನಾಯಕಿ ಸಮಾಜದ ಮುಖ್ಯಸ್ಥ ಆಶಲತಾ ಪುಟ್ಟೇಗೌಡ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಎನ್‌ಎಸ್‌ಎಸ್ ಅಧಿಕಾರಿ ಡಾ. ರಾಘವೇಂದ್ರ ಮಾತನಾಡಿ, “ಮನುಷ್ಯನಾದರೆ, ನನಗೆ ಹಸಿವಾಗಿದೆ, ದಾಹವಾಗಿದೆಯೆಂದು ಕೇಳುವುದರ ಮೂಲಕ ತನ್ನ ಹಸಿವೆಯನ್ನು ನೀಗಿಸಿಕೊಳ್ಳುತ್ತಾನೆ. ಆದರೆ ಮೂಕಪ್ರಾಣಿ ಪಕ್ಷಿಗಳು ಅದರಲ್ಲೂ ಪಕ್ಷಿಗಳು ತಮ್ಮ ಹಸಿವನ್ನೇ ಹೇಳಿಕೊಳ್ಳಲಾಗದೆ ಸಂಕಟಪಡುತ್ತಿರುತ್ತವೆ. ಆದ್ದರಿಂದ ದಯಮಾಡಿ ಸಾರ್ವಜನಿಕರು ಸುತ್ತಲಿನ ಪರಿಸರದಲ್ಲಿ ಹಾಗೂ ಮನೆಯ ಮೇಲೆ ನೀರು ಮತ್ತು ಆಹಾರವನ್ನು ಇಟ್ಟು ಪಕ್ಷಿಗಳ ದಾಹವನ್ನು ನೀಗಿಸಬೇಕು” ಎಂದು ಮನವಿ ಮಾಡಿದರು.

Advertisements

ಈ ಸುದ್ದಿ ಓದಿದ್ದೀರಾ? ಗದಗ | ರಂಝಾ‌ನ್ ಮುಸ್ಲಿಮರ ಆಧ್ಯಾತ್ಮಿಕ ಬೆಳವಣಿಗೆಗೆ ಅವಕಾಶ‌ ಒದಗಿಸುತ್ತದೆ: ಲಾಲಹುಸೇನ ಕಂದಗಲ್ಲ

ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ಬೀದಿಬೀದಿಗಳಿಗೆ ತೆರಳಿ ಘೋಷವಾಕ್ಯವನ್ನು ಕೂಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಈ ಅಭಿಯಾನಕ್ಕೆ ಶ್ರೀರಂಗಪಟ್ಟಣ ರೋಟರಿ ಸಂಸ್ಥೆಯ ಅಧ್ಯಕ್ಷ ಮಂಜು ರಾಮ ಪುಟ್ಟೇಗೌಡ, ನಿರ್ದೇಶಕ ನಾಗೇಂದ್ರ, ಶ್ರೀನಿವಾಸ, ಕಾಂತರಾಜ್, ವಿದ್ಯಾರ್ಥಿಗಳಾದ ಹರ್ಷ ಹೃದಯ್, ಶಾಂಭವಿ, ವಿಹಾನ್ ಮುರಳಿ ದಿವಿತ್, ಪರಶುರಾಮ್ ಸೇರಿದಂತೆ ಇತರರು ಈ ಅಭಿಯಾನಕ್ಕೆ ಸಾತ್ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X