ಮೈಸೂರು | ಅಕ್ರಮ ಪ್ರಶ್ನಿಸಿದ ರೈತ; ಬೂಟಿನಲ್ಲಿ ಹೊಡೆಯಲು ಮುಂದಾದ ತಂಬಾಕು ಮಂಡಳಿ ಅಧಿಕಾರಿ

Date:

Advertisements

ತಂಬಾಕು ಹರಾಜು ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ಪ್ರಶ್ನೆ ಮಾಡಿದ್ದಕ್ಕೆ ರೈತನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಚಿಲ್ಕುಂದದಲ್ಲಿ ನಡೆದಿದೆ.

ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದ ಕೃಷ್ಣಕುಮಾರ್ ಅವರು ತಂಬಾಕು ಹರಾಜು ಮಾರುಕಟ್ಟೆಯ ಸೂಪರಿಂಟೆಂಡೆಂಟ್ ಬ್ರಿಜ್ ಭೂಷಣ್ ಅವರಿಗೆ ಕರೆ ಮಾಡಿ, “ನಮ್ಮ ಕುಟುಂಬಕ್ಕೆ ಸೇರಿದ ಬ್ಯಾರನ್ ಅನ್‌ಫಿ‌ಟ್‌ ಇದ್ದು, ಅದನ್ನು ಮೂರು ವರ್ಷಗಳಿಂದ ಹೇಗೆ ರಿನೀವಲ್ ಮಾಡುತ್ತಿದ್ದೀರಿ. ಕ್ಷೇತ್ರ ಸಹಾಯಕ ಪ್ರಮೋದ್ ಸರಿಯಾಗಿ ಪರಿಶೀಲನೆ ಮಾಡದೆ ಹಣ ಪಡೆದು ಪ್ರತಿ ವರ್ಷ ರಿನೀವಲ್ ಮಾಡುತ್ತಿದ್ದಾರೆ. ಈ ಕುರಿತು ನಿಮ್ಮ ಗಮನಕ್ಕೆ ಇಲ್ಲವೇ” ಎಂದು ಪ್ರಶ್ನಿಸಿದ್ದಾರೆ.

ರೈತನ ಪ್ರಶ್ನೆಗೆ ಕುಪಿತಗೊಂಡ ಬ್ರಿಜ್ ಭೂಷಣ್, ಶನಿವಾರ ಬೆಳಿಗ್ಗೆ ಕೊತ್ತೆಗಾಲದ ಕೃಷ್ಣಕುಮಾರ್ ಮನೆ ಬಳಿ ಕ್ಷೇತ್ರ ಸಹಾಯಕ ಪ್ರಮೋದ್ ಎಂಬುವವರನ್ನು ಕಳುಹಿಸಿ ರೈತನನ್ನು ಅಡ್ಡಗಟ್ಟಿಸಿದ್ದು, ಬ್ರಿಜ್‌ ಭೂಷಣ್‌ ಸೇರಿದಂತೆ ಫೀಲ್ಡ್ ಅಸಿಸ್ಟೆಂಟ್ ಸಮೇತರಾಗಿ ಬಂದು ಅವಾಚ್ಯವಾಗಿ ನಿಂದಿಸಿದ್ದಾರೆ. ಅಲ್ಲದೆ, ಅದನ್ನು ಕೇಳಲು ನೀನು ಯಾರು? ನಿನ್ನನ್ನು ಸುಮ್ಮನೆ ಬಿಡುವುದಿಲ್ಲವೆಂದು ಧಮ್ಕಿ ಹಾಕಿ ಕಾಲಿನ ಬೂಟು ಕಳಚಿಕೊಂಡು ಹೊಡೆಯಲು ಮುಂದಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ಮಹರ್ಷಿ ವಾಲ್ಮೀಕಿ ಎಲ್ಲರಿಗೂ ಆದರಣೀಯ ಪುರುಷ: ಎಚ್ ಸಿ ಮಹದೇವಪ್ಪ

ಬ್ರಿಜ್ ಭೂಷಣ್ ಒಬ್ಬ ಅಧಿಕಾರಿಯಾಗಿ ಕರ್ತವ್ಯಲೋಪ ಎಸಗಿದ್ದಾರೆ; ತಪ್ಪನ್ನು ಪ್ರಶ್ನಿಸಿದ ರೈತನ ಮೇಲೆ ಹಲ್ಲೆಗೆ ಮುಂದಾಗಿರುವುದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X