ಮೈಸೂರು | ಮೃಗಾಲಯದ ನವಜಾತ ಸಿಂಹದ ಮರಿಗಳಿಗೆ ಅರಣ್ಯ ಸಚಿವರಿಂದ ನಾಮಕರಣ

Date:

Advertisements

ಮೈಸೂರು ಮೃಗಾಲಯದಲ್ಲಿ ಜನಿಸಿದ ಮೂರು ಸಿಂಹದ ಮರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ನಾಮಕರಣ ಮಾಡಲಿದ್ದಾರೆ. ಮೈಸೂರು ಮೃಗಾಲಯದಲ್ಲಿ ಪ್ರಸ್ತುತ ಐದು ವಯಸ್ಕ ಸಿಂಹಗಳಿವೆ. ಇದರಲ್ಲಿ ಎರಡು ಹೆಣ್ಣು, ಮೂರು ಗಂಡು ಸಿಂಹದ ಮರಿಗಳು ಸೇರಿವೆ. ಈ ಐದು ವಯಸ್ಕ ಸಿಂಹಗಳಲ್ಲಿ, ಎರಡು ಆಫ್ರಿಕನ್ ಸಿಂಹಗಳು, ಎರಡು ಏಷ್ಯಾಟಿಕ್ ಮತ್ತು ಒಂದು ಆಫ್ರೋ-ಏಷ್ಯಾಟಿಕ್ ಸಿಂಹದಮರಿ.

2021ರ ಡಿಸೆಂಬರ್‌ನಲ್ಲಿ ಛತ್ತೀಸ್‌ ಗಢದ ರಾಯ್‌ಪುರದ ನಂದನ್‌ ವನ್ ಜಂಗಲ್ ಸಫಾರಿಯಿಂದ ಪಡೆದ ಐದು ವರ್ಷದ ಸಿಂಹಿಣಿ ನಿರ್ಭಯಾ ಮತ್ತು 2019ರಲ್ಲಿ ಗುಜರಾತ್‌ನ ಸಕ್ಕರ್‌ಬಾಗ್ ಮೃಗಾಲಯದಿಂದ ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಪಡೆದ 6 ವರ್ಷದ ಸಿಂಹ(ರಾಜು) ಜೋಡಿಯಾಗಿದ್ದಾರೆ. ಜನಿಸಿದ ಮೂರು ಮರಿಗಳಲ್ಲಿ, ಎರಡು ಗಂಡು ಮತ್ತು ಒಂದು ಹೆಣ್ಣು. ಈ ಮರಿಗಳಿಗೆ ಒಂದು ವರ್ಷ ವಯಸ್ಸಾಗಿದೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ರಾಜ್ ಕುಮಾರ್ ಉದ್ಯಾನಕ್ಕೆ ಹೊಸ ಮೆರುಗು

Advertisements

ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ ವಿ ರಂಗರಾವ್, ಬೆಂಗಳೂರಿನ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ್ ಪುಷ್ಕರ್, ಮೈಸೂರು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಿ ಮಹೇಶ್ ಕುಮಾರ್ ಭಾಗವಹಿಸಲಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ಕೋಲಾರ | 9 ತಿಂಗಳಿನಿಂದ ವೇತನ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ಕಾರ್ಮಿಕರು

ಕೋಲಾರ ನಗರಸಭೆಯಲ್ಲಿ ಕೆಲಸ ಮಾಡುವ 74 ಮಂದಿ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ...

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

Download Eedina App Android / iOS

X