ಮೈಸೂರು | ಯುವ ಸಮೂಹ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು: ಸಚಿವ ಮಹದೇವಪ್ಪ

Date:

Advertisements

ಇಂದಿನ ಯುವ ಸಮೂಹವು ಓದುವ ಹವ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು. ಪ್ರತಿಯೊಂದು ವಿಚಾರದಲ್ಲೂ ಆಳವಾದ ಅಧ್ಯಯನ ಕೈಗೊಳ್ಳಬೇಕು ಎಂದು ಸಚಿವ ಡಾ. ಎಚ್‌ ಸಿ ಮಹದೇವಪ್ಪ ಹೇಳಿದರು.

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರೊ ಎನ್ ಲಕ್ಷ್ಮಿ ಅವರ ಅಭಿನಂದನಾ ಸಮಾರಂಭ, ‘ಅರಿವಿನ ಸಿರಿ’ ಅಭಿನಂದನಾ ಗ್ರಂಥ ಹಾಗೂ ನಾಲ್ಕು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸಾಮಾಜಿಕ ಜಾಲತಾಣದ ಮೂಲಕ ಪರಿಪೂರ್ಣವಾದ ಸಮಾಜ ನಿರ್ಮಿಸಲು ಸಾಧ್ಯವಿಲ್ಲ. ಓದುವ ಹವ್ಯಾಸದಿಂದ ಮಾತ್ರ ಭೌದ್ಧಿಕವಾಗಿ ಬಲಾಢ್ಯರಾಗಲು ಸಾಧ್ಯ. ದೇಶದಲ್ಲಿರುವ ಅವೈಜ್ಞಾನಿಕತೆಯನ್ನು ತೊಲಗಿಸಲು ಶಿಕ್ಷಣ ಬಹಳ ಮುಖ್ಯ. ವೈಜ್ಞಾನಿಕತೆ ಹಾಗೂ ವೈಚಾರಿಕತೆಯಿಂದ ಕೂಡಿದ ಶಿಕ್ಷಣವು ಮೂಢನಂಬಿಕೆ, ಅನಾಗರಿಕತೆ ಹಾಗೂ ಶೋಷಣೆಯನ್ನು ತೊಡೆದು ಹಾಕುತ್ತದೆ” ಎಂದರು.

WhatsApp Image 2025 02 04 at 11.18.14 AM

“ಮಹಿಳೆಯರ ಸಮಾನತೆಗಾಗಿ ಬಾಬಾ ಸಾಹೇಬರು ಜಾರಿಗೆ ತಂದ ಹಿಂದೂ ಕೋಡ್ ಬಿಲ್ ಕುರಿತು ಯಾವುದೇ ಕಾರ್ಯಾಗಾರದಲ್ಲಿ ಚರ್ಚೆಗಳು ನಡೆಯುತ್ತಿಲ್ಲ. ಈ ಬಗ್ಗೆ ಗಮನಹರಿಸಬೇಕಾದ ಮಹಿಳೆಯರು ಮೌಢ್ಯ, ಕಂದಾಚಾರಕ್ಕೆ ಸಿಲುಕಿದ್ದಾರೆ. ಪ್ರಸ್ತುತ ಸಂದರ್ಭದಲ್ಲಿ ಹೆಣ್ಣುಮಕ್ಕಳು ವಿದ್ಯಾವಂತರಾಗಿದ್ದರೂ ಕೂಡ ಹೆಚ್ಚು ಮೌಢ್ಯದ ಕಡೆ ವಾಲುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

Advertisements

ಈ ಸುದ್ದಿ ಓದಿದದ್ದೀರಾ?:ಮೈಸೂರು | ಕ್ರಿಯೇಟಿವ್ ಎಕಾನಮಿಯೇ ಭಾರತದ ಭವಿಷ್ಯ: ಕೇಂದ್ರ ಸಚಿವ ಮುರುಗನ್

ಕಾರ್ಯಕ್ರಮದಲ್ಲಿ ಉರಿಲಿಂಗಿ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಡಾ ಯತೀಂದ್ರ ಸಿದ್ದರಾಮಯ್ಯ, ಕೆಎಸ್‌ಒಯು ಕುಲಪತಿ ಶರಣಪ್ಪ ವಿ ಹಲಸೆ, ವಿಶ್ರಾಂತ ಕುಲಪತಿ ಪ್ರೊ ಕೆ ಎಸ್ ರಂಗಪ್ಪ, ರಾಮೇಗೌಡ, ಪ್ರೊ ನಾಗಣ್ಣ, ಬಂಜಗೆರೆ ಜಯಪ್ರಕಾಶ್, ಚಿಂತಕ ಪ್ರೊ ಭಗವಾನ್, ಚಂದ್ರಶೇಖರ್, ಕುಲಸಚಿವ ಪ್ರವೀಣ್ ಮೊದಲಾದವರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X