ಮೈಸೂರು | ಸತ್ಯ, ಸರಳತೆ, ಸೌಹಾರ್ದತೆ, ಸಹಿಷ್ಣುತೆ ವರ್ತಮಾನದ ಭಾರತಕ್ಕೆ ಅಗತ್ಯ : ಕೆ ಟಿ ವೀರಪ್ಪ

Date:

Advertisements

ಮೈಸೂರು ವಿಶ್ವವಿದ್ಯಾನಿಲಯ, ಗಾಂಧಿ ಅಧ್ಯಯನ ಕೇಂದ್ರದ ಗಾಂಧಿ ಭವನದಲ್ಲಿ ಸರಳವಾಗಿ ನಡೆದ ಗಾಂಧಿ ಜಯಂತಿಯಲ್ಲಿ ಹಿರಿಯ ಗಾಂಧೀವಾದಿ ಕೆ.ಟಿ.ವೀರಪ್ಪ ಮಾತನಾಡಿ ‘ಸತ್ಯ, ಸರಳತೆ, ಸೌಹಾರ್ದತೆ, ಸಹಿಷ್ಣುತೆ ವರ್ತಮಾನದ ಭಾರತಕ್ಕೆ’ ಅಗತ್ಯ ಎಂದರು.

“ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಯುದ್ಧ, ಭ್ರಷ್ಟಾಚಾರ, ಅನೈತಿಕ ರಾಜಕಾರಣ, ನಿರುದ್ಯೋಗ, ಅಣ್ವಸ್ತ್ರ ಪ್ರಯೋಗ, ಹೀಗೆ ಮಾನವಕುಲ ಸಂಕಷ್ಟಕ್ಕೆ ಸಿಲುಕಿದೆ. ಈಗ ಗಾಂಧಿಜೀ ಅವರ ಶಾಂತಿ, ಅಹಿಂಸೆ, ವಿಶ್ವಭಾತೃತ್ವ, ಪರಮತ ಸಹಿಷ್ಣುತೆ ವಿಚಾರಗಳು ಸಮಕಾಲೀನ ಜಗತ್ತಿಗೆ ಅತ್ಯಗತ್ಯ” ಎಂದು ತಿಳಿಸಿದರು.

ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕರಾದ ಪ್ರೊ.ಎಸ್ ನರೇಂದ್ರ ಕುಮಾರ್ ಮಾತನಾಡಿ “ಗಾಂಧಿ ಕನಸಿನ ಭಾರತ ಮತ್ತು ಭಾರತ ಸಂವಿಧಾನದ ಪ್ರಸ್ತಾವನೆ ಎರಡೂ ಒಂದೇ ಆಗಿದೆ. ಭಾರತದ ಸಂವಿಧಾನದಲ್ಲಿ ಗಾಂಧಿಜೀಯ ಆಶಯ ಅಡಗಿದೆ. ಹಾಗಾಗಿ, ನಮ್ಮ ಸಂವಿಧಾನ ಗಾಂಧಿಜೀ ಅವರ ಧ್ಯೇಯೋದ್ದೇಶಗಳನ್ನು ಸಾಕಾರಗೊಳಿಸುವ ಮಾರ್ಗ ಆಗಿದೆ” ಎಂದರು.

Advertisements

ನಾಡಹಬ್ಬ ದಸರಾ ಕಾರಣದಿಂದಾಗಿ ನಡೆಯಬೇಕಿದ್ದ ಗಾಂಧಿ ಜಯಂತಿ ಕಾರ್ಯಕ್ರಮದ ವಿಶೇಷ ಉಪನ್ಯಾಸವನ್ನು ದಿನಾಂಕ-13-10-2025 ರಂದು ಮೈಸೂರು ವಿಶ್ವವಿದ್ಯಾನಿಲಯದ ಗಾಂಧಿ ಅಧ್ಯಯನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಎಲ್ಲರೂ ತಪ್ಪದೇ ಭಾಗವಹಿಸಬೇಕಾಗಿ ಕೋರಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ; ಪೊಲೀಸರಿಂದ ‘ಬಿ’ ರಿಪೋರ್ಟ್ ಸಲ್ಲಿಕೆ

ಕಾಯ೯ಕ್ರಮದಲ್ಲಿ ಉಪನ್ಯಾಸಕರಾದ ಡಾ. ಟಿ.ಮಂಜು, ಡಾ.ಉಮೇಶ್, ಡಾ.ರಮೇಶ್ ಡಾ.ರಾಮರಾಜು, ಡಾ.ಪ್ರತಾಪ್, ಸಂಶೋಧನಾ ವಿದ್ಯಾರ್ಥಿಗಳಾದ ಸುಪ್ರೀತ್, ಪರಶುರಾಮ, ನಾಗರಾಜು, ಬೋಧಕೇತರ ಸಿಬ್ಬಂದಿ ಮತ್ತು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅಪ್ರಾಪ್ತೆಯರ ಅಪಹರಣಕ್ಕೆ ಯತ್ನ ಆರೋಪ – ಸಾರ್ವಜನಿಕರಿಂದ ವ್ಯಕ್ತಿಗೆ ಥಳಿತ

ಅಪ್ರಾಪ್ತೆ ಹೆಣ್ಣುಮಕ್ಕಳನ್ನು ಅಪಹರಿಸಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರೇ ಹಿಡಿದು ಥಳಿಸಿ ಬಳಿಕ...

ಗುಬ್ಬಿ | ಎಂ ಎಚ್.ಪಟ್ಟಣ ಗ್ರಾಪಂ ನಲ್ಲಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿ ಎಂ. ಎಚ್.ಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ...

ವಿಜಯನಗರ | ಭಾರತ ಸ್ವಾವಲಂಬಿಯಾಗಲು ಗೃಹ ಕೈಗಾರಿಕೆಗಳು ಮುಂಚೂಣಿಗೆ ಬರಬೇಕು: ಡಾ. ವೀರೇಶ ಬಡಿಗೇರ

ವರ್ಣ, ವರ್ಗ, ಲಿಂಗರಹಿತ ಸಮಾಜ ಸ್ಥಾಪನೆಯು ಗಾಂಧಿಯ ಕನಸಾಗಿತ್ತು. ಸ್ವದೇಶಿ ಚಳವಳಿ,...

ತುಮಕೂರು ದಸರಾ ಜಂಬೂಸವಾರಿ : ಸಾಂಸ್ಕೃತಿಕ ವೈಭವ

 ತುಮಕೂರು ದಸರಾ ಉತ್ಸವದ ಅಂಗವಾಗಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...

Download Eedina App Android / iOS

X