ಮೈಸೂರು | ರೈತರ ಪಹಣಿಯಲ್ಲಿ ವಕ್ಫ್ ಹೆಸರು; ರೈತ ಸಂಘದಿಂದ ವಿರೋಧ

Date:

Advertisements

ಮೈಸೂರು ಜಿಲ್ಲೆ ಟಿ ನರಸೀಪುರ ತಾಲೂಕು ಕಚೇರಿ ಮುಂದೆ ರೈತರ ಪಹಣಿಯಲ್ಲಿ ವಕ್ಫ್ ಹೆಸರು ಇರುವುದು,ಸೇರ್ಪಡೆ ಮಾಡುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಕರೋಟಿ ಕುಮಾರ ಸ್ವಾಮಿ ನೇತೃತ್ವದಲ್ಲಿ ಧರಣಿ ನಡೆಸಿದರು.

ಇತ್ತೀಚೆಗೆ ರಾಜ್ಯಾದ್ಯಂತ ರೈತರ ಭೂಮಿ ಕಬಳಿಕೆ ಆಗುತ್ತಿದೆ. ಪಹಣಿಯಲ್ಲಿ ವಕ್ಫ್ ಹೆಸರು ಬರುತ್ತಿರುವುದರಿಂದ ರೈತರ ಆತಂಕಕ್ಕೀಡಾಗಿದ್ದಾರೆ. ರೈತರ ಪಹಣಿಯ ಕಲಂ 11 ರಲ್ಲಿ ತಿದ್ದುಪಡಿ ಮಾಡಿ ವಕ್ಫ್ ಹೆಸರು ಸೇರ್ಪಡೆ ಮಾಡುತ್ತಿದ್ದಾರೆ. ಸರ್ಕಾರಿ ತೋಪು, ಸ್ಮಶಾನ,ದೇವಾಲಯ ಸೇರಿದಂತೆ ಇತರೆ ಆಸ್ತಿಗಳನ್ನು ಸಹ ವಕ್ಫ್ ಬೋರ್ಡ್ ಆಸ್ತಿಯೆಂದು ತಿದ್ದುಪಡಿ ಮಾಡಲಾಗಿದೆ. ರೈತರು ತಲೆತಲಾಂತರಗಳಿಂದ ಪಿತ್ರಾರ್ಜಿತವಾಗಿ ಬೇಸಾಯ ಮಾಡಿಕೊಂಡು ಜೀವನ ಕಟ್ಟಿಕೊಂಡಿರುವ ಆಸ್ತಿ ಕಳೆದುಕೊಳ್ಳುವ ಬೀತಿ ಎದುರಾಗಿದ್ದು ಇದರಿಂದ ರೈತ ಸಮುದಾಯ ಆತಂಕದಲ್ಲಿದೆ ಎಂದು ತಿಳಿಸಿದರು.

WhatsApp Image 2024 11 14 at 8.58.05 AM

ತಾಲೂಕು ಆಡಳಿತ, ಜಿಲ್ಲಾಡಳಿತ,ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ರಾಜ್ಯಾದ್ಯಂತ ರೈತರು ಎದುರಿಸುತ್ತಿರುವ ಭೀತಿಯನ್ನು ಹೋಗಲಾಡಿಸಿ ಪಿತ್ರಾರ್ಜಿತ ಕೃಷಿ ಭೂಮಿಗಳನ್ನು ಉಳಿಸಿಕೊಡಬೇಕು ಎಂದು ಆಗ್ರಹಿಸಿದರು.

Advertisements

ಯಾವುದೇ ಕಾರಣಕ್ಕೂ ರೈತರ ಭೂಮಿಯ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಸೇರಿಸುವ ,ತಿದ್ದುಪಡಿ ಮಾಡುವ ಕೆಲಸ ಆಗಬಾರದು.ಕಾನೂನು ರೀತಿಯಲ್ಲಿ ರೈತರ ಭೂಮಿ ಉಳಿಸಿಕೂಡಬೇಕು ಎಂದು ರೈತ ಸಂಘದ ಮುಖಂಡರು ತಹಶೀಲ್ದಾರ್ ಅವರಲ್ಲಿ ಮನವಿ ಪತ್ರ ಸಲ್ಲಿಸಿದರು.

ಇದನ್ನು ಓದಿದ್ದೀರಾ? ಬೆಳಗಾವಿ ಡಿಸಿಸಿ ಬ್ಯಾಂಕ್ ಮೇಲಿನ ಸುದೀರ್ಘ ವರ್ಷಗಳ ಹಿಡಿತ ಕಳೆದುಕೊಂಡ ಕತ್ತಿ ಕುಟುಂಬ

ಧರಣಿಯಲ್ಲಿ ಎಸ್ ಶಾಂತಮೂರ್ತಿ, ಎಂ ಮಹೇಶ್ ಕುಮಾರ್, ಈ ರಾಜು,ಕೆ ಬಿ ಮಹಾದೇವ ಸ್ವಾಮಿ, ಮಹಾದೇವ ಪ್ರಸಾದ್, ಸಿದ್ದರಾಜು, ಶಿವಣ್ಣ ಸೇರಿದಂತೆ ಕಾರ್ಯಕರ್ತರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X