ಮೈಸೂರು | ಹುಡುಕಬೇಡಿ ಎಂದು ಪತ್ರ ಬರೆದಿಟ್ಟು ಅಬ್ಬಿ ಫಾಲ್ಸ್‌ಗೆ ಬಂದಾಕೆ ಬೆಂಗಳೂರಿನಲ್ಲಿ ಪತ್ತೆ

Date:

Advertisements

ಮೈಸೂರು ಜಿಲ್ಲೆ ಬೆಟ್ಟದಪುರದ ಬಾರಸೆ ಗ್ರಾಮದ ಮಹಿಳೆ ನಾಪತ್ತೆಯಾಗಿದ್ದ ಪ್ರಕರಣ ಇದೀಗ ನಾಟಕೀಯ ತಿರುವು ಪಡೆದುಕೊಂಡಿದೆ. ಈಕೆ ಮಡಿಕೇರಿ ಅಬ್ಬಿ ಫಾಲ್ಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ಹುಸಿಯಾಗಿದ್ದು, ಆ ಮಹಿಳೆ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಸರಸ್ವತಿ (33) ಎಂಬ ಮಹಿಳೆ ಸೆಪ್ಟೆಂಬರ್ 7ರಂದು ನಾಪತ್ತೆಯಾಗಿರುವುದಾಗಿ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು ಈಕೆಯ ಪತ್ತೆ ಕಾರ್ಯಕ್ಕೆ ಮುಂದಾದ ಸಂದರ್ಭದಲ್ಲಿ ಅಬ್ಬಿ ಫಾಲ್ಸ್‌​ ಬಳಿ ಮಹಿಳೆಯ ಚಪ್ಪಲಿ, ಬಟ್ಟೆ, ಪರ್ಸ್ ಪತ್ತೆಯಾಗಿದ್ದವು. ಆಕೆ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿ ಎನ್​ಡಿಆರ್​ಎಫ್​, ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಆದರೆ ಪ್ರಯೋಜನವಾಗಿರಲಿಲ್ಲ. ಈ ನಡುವೆ ಬೆಟ್ಟದಪುರದಲ್ಲಿರುವ ತನ್ನ ಸಹೋದರನಿಗೆ ಕರೆ ಮಾಡಿರುವ ಸರಸ್ವತಿ ತಾನು ಬೆಂಗಳೂರಿನಲ್ಲಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ನಾಪತ್ತೆಯಾಗುವ ಮುನ್ನ ಬರೆದಿಟ್ಟಿದ್ದ ಪತ್ರದಲ್ಲಿ ಏನಿದೆ?

Advertisements

ಈಕೆ ನಾಪತ್ತೆಯಾಗುವ ಮುನ್ನ ಮನೆಯಲ್ಲಿ ಬರೆದಿಟ್ಟು ಬಂದಿರುವ ಪತ್ರದಲ್ಲಿ ಈಕೆ ತಾನು ಅನುಭವಿಸಿದ ಕಷ್ಟಗಳನ್ನು ಹೇಳಿಕೊಂಡಿದ್ದಾರೆ.

“ನನ್ನ ಈ ನಿರ್ಧಾರಕ್ಕೆ ಯಾರೂ ಕಾರಣರಲ್ಲ. ಮದುವೆಯಾಗಿ 12ರಿಂದ 13 ವರ್ಷದವರೆಗೆ ಎಷ್ಟೇ ಕಷ್ಟ ಆದರೂ ಸಹಿಸಿಕೊಂಡು ಬಂದೆ. ಆದರೆ ನಮ್ಮ ಮನೆಯಲ್ಲಿ ನನ್ನ ಇಷ್ಟ ಕಷ್ಟ ಏನೂ ನಡೆಯಲಿಲ್ಲ. ಹೊರಗಡೆ ಹೋಗಬೇಕೆಂದರೆ ದುಡ್ಡು ಕೊಡುತ್ತಿರಲಿಲ್ಲ. ನನಗೆ ಅದು ಬೇಕು ಇದು ಬೇಕು ಎಂದು ಯಾವತ್ತೂ ಕೇಳುತ್ತಿರಲಿಲ್ಲ. ಗಂಡ ಒಂದು ದಿನವೂ ಎಲ್ಲೂ ಕರೆದುಕೊಂಡು ಹೋಗಲಿಲ್ಲ. ಬರೀ ದನ ಕರು ಇದರಲ್ಲೇ ಕಾಲ ಕಳೆಯುವುದಾಯಿತು. ನಾನು ಕೆಲಸಕ್ಕೆ ಹೋಗುತ್ತೇನೆಂದರೂ ಕಳುಹಿಸಲಿಲ್ಲ. ಯಾರನ್ನು ಮಾತನಾಡಿಸಿದರೂ ಗಂಡನಿಗೆ ಅನುಮಾನ. ಇತ್ತೀಚೆಗೆ ನನಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹಾಗಾಗಿ ನಾನು ಎಲ್ಲೇ ಹೋದರು, ಏನೇ ಮಾಡಿಕೊಂಡರು, ಸತ್ತರೂ ಕೂಡ ಯಾರೂ ಜವಾಬ್ದಾರರಲ್ಲ. ನನ್ನನ್ನು ಹುಡುಕಬೇಡಿ, ನನ್ನ ಮಕ್ಕಳನ್ನು ಚೆನ್ನಾಗಿ ನೋಡ್ಕೊಳಿ” ಎಂದು ಆ ಪತ್ರದಲ್ಲಿ ಬರೆದಿದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಾಲಬಾಧೆಯಿಂದ ಮನನೊಂದ ರೈತ ಆತ್ಮಹತ್ಯೆ

ಜೀವ ಕಳೆದುಕೊಳ್ಳುವುದಾಗಿ ಪರೋಕ್ಷವಾಗಿ ಕುರುಹು ನೀಡಿ ನಾಪತ್ತೆಯಾಗಿದ್ದ ಈಕೆ ಪೊಲೀಸ್ ಇಲಾಖೆ ಮತ್ತು ಮನೆಯವರನ್ನು ಪೀಕಲಾಟಕ್ಕೆ ತಳ್ಳಿದ್ದು, ಇದೀಗ ಬೆಂಗಳೂರಿನಲ್ಲಿ ಇರುವುದಾಗಿ ಅವರೇ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

ತರೀಕೆರೆ l ಸರ್ಕಾರಿ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಆರೋಪ; ದಸಂಸ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಕ್ರಮವಾಗಿ ಮಳಿಗೆ...

Download Eedina App Android / iOS

X