ಮೈಸೂರು | ವಿಶ್ವ ಪೋಲಿಯೋ ದಿನ

Date:

Advertisements

ಪೋಲಿಯೋ ಮಹತ್ವದ ಕುರಿತು ಪೋಷಕರಲ್ಲಿ ಅರಿವು ಮೂಡಿಸಬೇಕು. ಕಾಲಕ್ಕೆ ತಕ್ಕಂತೆ ಮಕ್ಕಳಿಗೆ ಪೋಲಿಯೋ ಲಸಿಕೆ ಕೊಡಿಸುವ ಮೂಲಕ ಸಂಪೂರ್ಣ ಪೋಲಿಯೋ ನಿರ್ಮೂಲನೆಗೆ ಶ್ರಮಿಸಬೇಕಿದೆ ಎಂದು ರೋಟರಿ ಕ್ಲಬ್ ಆಫ್ ಹೆರಿಟೇಜ್ ಮೈಸೂರು ಅಧ್ಯಕ್ಷ ಆರ್ ರಾಜೇಶ್ ಸಲಹೆ ನೀಡಿದರು.

ವಿಶ್ವ ಪೋಲಿಯೋ ದಿನದ ಅಂಗವಾಗಿ ಮೈಸೂರಿನ ರೋಟರಿ ಕ್ಲಬ್ ಆಫ್ ಹೆರಿಟೇಜ್ ವತಿಯಿಂದ ಚೆಲುವಾಂಬ ಆಸ್ಪತ್ರೆಯಲ್ಲಿ ನಡೆದ ಲಸಿಕೆಯ ಮಹತ್ವದ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಲಸಿಕೆ ಹಾಕಿ ಮಾತನಾಡಿದರು.

“ಐದು ವರ್ಷದೊಳಗಿನ ಮಕ್ಕಳಿಗೆ ಸಮಯಕ್ಕೆ ಸರಿಯಾಗಿ ಪೋಲಿಯೋ ಲಸಿಕೆ ಕೊಡಿಸುವುದು ಪೋಷಕರ ಮಹತ್ತರ ಜವಾಬ್ದಾರಿಯಾಗಿದೆ. ಏಕೆಂದರೆ ಲಸಿಕೆ ನೀಡದೇ ಹೋದಲ್ಲಿ ಮಕ್ಕಳು ಅಂಗವೈಕಲ್ಯತೆಗೆ ತುತ್ತಾಗುತ್ತಾರೆ. ಆದ್ದರಿಂದ ತಪ್ಪದೇ ಲಸಿಕೆ ಕೊಡಸಬೇಕು. ಈವರೆಗೂ ಪೋಲಿಯೋ ನಿರ್ಮೂಲನೆಗೆ ಜಗತ್ತಿನಾದ್ಯಂತ ಆರ್ಥಿಕವಾಗಿಯೂ ಹಾಗೂ ಅರಿವು ಮೂಡಿಸುವ ನಿಟ್ಟಿನಲ್ಲಿ ರೋಟರಿ ಸಂಸ್ಥೆ ಸಾಕಷ್ಟು ಶ್ರಮ ವಹಿಸಿದೆ” ಎಂದು ಹೇಳಿದರು.

Advertisements

ಇದೇ ವೇಳೆ ಆಸ್ಪತ್ರೆಗೆ ದಾಖಲಾಗಿರುವ ಸುಮಾರು 50ಕ್ಕೂ ಅಧಿಕ ನವಜಾತ ಶಿಶುಗಳಿಗೆ ಅಗತ್ಯವಿರುವ ಸ್ವೆಟರ್, ಟೊಪ್ಪಿ, ಕಾಲು ಚೀಲ ವಿತರಿಸಿದರು.

ಚೆಲುವಾಂಬ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ ರಾಜೇಂದ್ರ ಕುಮಾರ್ ಮಾತನಾಡಿ, “ಪೋಲಿಯೋ ಲಸಿಕೆ ಕುರಿತು ಸಾಕಷ್ಟು ಅರಿವು ಮೂಡಿಸಿ, ಮನೆ-ಮನೆಗೆ ತೆರಳಿ ಲಸಿಕೆ ಕೊಡಿಸುವ ಕಾರ್ಯಕ್ಕೆ ಮುಂದಾದರೂ ಕೂಡಾ ಇನ್ನೂ ಸಾಕಷ್ಟು ಮಕ್ಕಳು ಲಸಿಕೆ ವಂಚಿತರಾಗಿ ಅಂಗವೈಕಲ್ಯತೆಗೆ ತುತ್ತಾಗುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ದಸರಾ ಪ್ರಾಧಿಕಾರ ರಚನೆಗೆ ಮಾಜಿ ಮೇಯರ್ ಸಂದೇಶ್ ಸ್ವಾಮಿ ಆಗ್ರಹ

“ಪೋಷಕರು ಎಚ್ಚೆತ್ತುಕೊಂಡು ಇನ್ಮುಂದಾದರೂ ಮಕ್ಕಳಿಗೆ ಸಮಯಕ್ಕೆ ಸರಿಯಾಗಿ ಲಸಿಕೆ ಕೊಡಿಸುವ ಮುಖೇನ ಮಕ್ಕಳ ಆರೋಗ್ಯ ಕಾಪಾಡಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ರೋಟರಿ ಕ್ಲಬ್ ಆಫ್ ಹೆರಿಟೇಜ್ ಸಂಸ್ಥಾಪಕ ಅಧ್ಯಕ್ಷ ರೊ ಮಂಜುನಾಥ್ ಕೆ, ಕ್ಲಬ್‌ನ ಹಿರಿಯ ಸದಸ್ಯ ರೊ ನಾರಾಯಣ್ ನಾಯಕ್, ರೊ ರಾಘವೇಂದ್ರ ಆಚಾರ್ ಮತ್ತು ಚಂದನ್, ಜೀವನಿಧಿ ಟ್ರಸ್ಟ್‌ನ ಆಯೇಷಾ, ಆಸ್ಪತ್ರೆಯ ಕಚೇರಿಯ ಅಧೀಕ್ಷಕ ದೇವರಾಜು, ಶುಶ್ರೂಷಕರು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X