ಮೈಸೂರು | ಯುವ ದಸರಾ; ಸ್ಥಳ ಪರಿಶೀಲಿಸಿದ ಸಚಿವ ಮಹದೇವಪ್ಪ

Date:

Advertisements

ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ದಸರಾ ಮಹೋತ್ಸವದ ಅಂಗವಾಗಿ ಉತ್ತನಹಳ್ಳಿ ಸಮೀಪದಲ್ಲಿ ಸೆ.23 ರಿಂದ ಜರುಗಲಿರುವ ಯುವದಸರಾ ಕಾರ್ಯಕ್ರಮದ ಸ್ಥಳವನ್ನು ಪರಿಶೀಲನೆ ಮಾಡಿದರು.

ಕಾರ್ಯಕ್ರಮದ ಆಯೋಜನೆಯ ರೂಪುರೇಷೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಕಳೆದ ಬಾರಿಯಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ಆಯೋಜಿಸಬೇಕು. ಅತೀ ಹೆಚ್ಚು ಜನರು ಸೇರುವ ಯುವ ದಸರಾದಲ್ಲಿ ಯಾವುದೇ ಅನಾನುಕೂಲವಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು ಎಂದು ಸೂಚಿಸಿದರು. ಮೈಸೂರು ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಯುವದಸರಾ ಕಾರ್ಯಕ್ರಮ ವೀಕ್ಷಣೆಗೆಂದು ಆಗಮಿಸುವ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯವನ್ನು ಕಲ್ಪಿಸಬೇಕು ಎಂದು ತಿಳಿಸಿದರು.

ಯುವ ದಸರಾಗೆ ಸಹಸ್ರಾರು ಸಂಖ್ಯೆಯಲ್ಲಿ ಯುವಸಮೂಹ ಆಗಮಿಸಿ ಸಂಭ್ರಮಿಸುತ್ತಾರೆ. ಬಹುಮುಖ್ಯವಾಗಿ ಮಹಿಳೆಯರಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು. ರಾತ್ರಿ ವೇಳೆ ಕಾರ್ಯಕ್ರಮ ನಡೆಯುವುದರಿಂದ ಎಲ್ಲಾ ಬಗೆಯ ಸೂಕ್ತ ಕ್ರಮ ಅನುಸರಿಸಬೇಕು. ಬೀದಿದೀಪದ ವ್ಯವಸ್ಥೆ, ವಾಹನ ನಿಲುಗಡೆಗೆ ಪಾರ್ಕಿಂಗ್ ಸ್ಥಳ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಿ ಮಾರ್ಗದರ್ಶನ ಮಾಡಬೇಕು ಎಂದರು‌.

ಈ ವಿಶೇಷ ಸುದ್ದಿ ಓದಿದ್ದೀರಾ? ಜಾನಪದ ತವರೂರು ಚಾಮರಾಜನಗರದಲ್ಲಿಲ್ಲ ಈ ಬಾರಿಯ ದಸರಾ; ಕಲಾವಿದರ ಮರೆತ ಸರ್ಕಾರ

ಸ್ಥಳ ಪರಿಶೀಲನೆ ವೇಳೆ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ, ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆ.ಆರ್. ರಕ್ಷಿತ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X