ಮೈಸೂರು | ಮಹಿಳೆಯರ ಘನತೆ, ಮಾನವೀಯ ಮೌಲ್ಯ ಉಳಿಸಲು ‘ಯುವ ಜನರ ಸಂಕಲ್ಪ’ ಸಮಾವೇಶ

Date:

Advertisements

ಮಹಿಳೆಯರ ಘನತೆ ಮತ್ತು ಮಾನವೀಯ ಮೌಲ್ಯ ಉಳಿಸಲು ವಲಯ ಮಟ್ಟದ ‘ಯುವಜನರ ಸಂಕಲ್ಪ’ ಸಮಾವೇಶವನ್ನು ಮೈಸೂರು ನಗರದ ಗೋವರ್ಧನ ಸಭಾಂಗಣದಲ್ಲಿ ಎಐಡಿವೈಓ ಸಂಘಟನೆಯಿಂದ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಮೆಡಿಕಲ್ ಸರ್ವೀಸ್ ಸೆಂಟರ್‌ನ ರಾಜ್ಯಾಧ್ಯಕ್ಷೆ ಡಾ ಸುಧಾ ಕಾಮತ್ ಮಾತನಾಡಿ, ಇಂದಿನ ಸಮಾಜದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ, ದೌರ್ಜನ್ಯ ಮತ್ತು ಸಾಂಸ್ಕೃತಿಕ ಅಧಃಪತನವನ್ನು ನೋಡಿದರೆ ನಾವು ನಾಗರಿಕ ಸಮಾಜದದಲ್ಲಿ ಬದುಕುತ್ತಿದ್ದೇವೆ ಎಂಬ ಪ್ರಶ್ನೆಯನ್ನು ಉಂಟು ಮಾಡುತ್ತದೆ. ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಭದ್ರತೆ ಇಲ್ಲ, ಬದಲಾಗಿ ಹೆಣ್ಣು ಮಕ್ಕಳನ್ನು ನಿಯಂತ್ರಣದಲ್ಲಿ ಇಡುತ್ತಾರೆ ಎಂದು ಹೇಳಿದರು.

ಮಹಿಳೆಯರ ಮೇಲೆ ದೌರ್ಜನ್ಯ ಮಾಡುವುದೇ ಪೌರುಷ ಎಂಬುದಾಗಿ ಭಾವಿಸಿರುತ್ತಾರೆ. ಆದರೆ, ನಿಜವಾದ ಪೌರುಷ ಇರುವುದು ಅನ್ಯಾಯದ ವಿರುದ್ಧ ಧ್ವನಿ ಎತ್ತುವುದರಲ್ಲಿ. ನಮ್ಮ ನವೋದಯದ ಚಿಂತಕರು ಮತ್ತು ಸ್ವಾತಂತ್ರ ಹೋರಾಟಗಾರರು ಮಾಡಿದ್ದು ಇದನ್ನೇ. ಈಗಿನ ಸಮಾಜದಲ್ಲಿ ಅಶ್ಲೀಲ ಸಿನಿಮಾ, ಸಾಹಿತ್ಯಗಳು ತಾಂಡವಾಡುತ್ತಿದೆ ಇದಕ್ಕೆ ಕಡಿವಾಣ ಹಾಕಬೇಕು.
ಯುವಜನರು ದಾರಿ ತಪ್ಪುವುದನ್ನು ತಡೆಗಟ್ಟಿ ,ಸಮಾಜದ ಪ್ರಗತಿಯ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

Advertisements

ಮನೋವೈದ್ಯ ಡಾ ಕಿಶೋರ್ ‘ಲೈಂಗಿಕ ಅಪರಾಧಗಳು – ಕಾರಣ‌ ಮತ್ತು ಪರಿಹಾರ ‘ ಎಂಬ ವಿಷಯದ ಕುರಿತು ಸಂವಾದ ನಡೆಸಿ ಮಧ್ಯ , ಮಾದಕ ವ್ಯಸನಗಳು ಮಾನವನ ಚಿಂತನಾ ಶಕ್ತಿಯನ್ನು ಕುಂಠಿತಗೊಳಿಸುತ್ತವೆ. ಅವುಗಳ ಪ್ರಭಾವದಲ್ಲಿರುವ ಮನುಷ್ಯನಲ್ಲಿ ಪಶು ಪ್ರವೃತ್ತಿಗಳು ಮುನ್ನೆಲೆಗೆ ಬರುತ್ತವೆ. ಇದಲ್ಲದೆ ಸೇಡಿನ ಮನೋಭಾವ, ಪುರುಷ ಪ್ರಾಬಲ್ಯವನ್ನು ಪ್ರದರ್ಶಿಸುವ ಹಂಬಲ ಮೊದಲಾದ ಕಾರಣಗಳು ಲೈಂಗಿಕ ಅಪರಾಧಗಳಿಗೆ ಕಾರಣವಾಗುತ್ತಿವೆ‌ ಎಂದು ತಿಳಿ ಹೇಳಿದರು.

ಸಾಮಾಜಿಕ ಮಾಧ್ಯಮಗಳು ಸಮಸ್ಯೆಯನ್ನು ಉಲ್ಬಣಗೊಳಿಸಿ ದೌರ್ಜನ್ಯಕ್ಕೊಳಗಾದವರು ಮಾನಸಿಕವಾಗಿ ಕುಗ್ಗುವಂತೆ ಮಾಡುತ್ತಿದ್ದು, ಶೈಕ್ಷಣಿಕ, ಕೌಟುಂಬಿಕ, ಸಾಮಾಜಿಕ, ಆರ್ಥಿಕ ಬಿಕ್ಕಟ್ಟುಗಳಿಗೆ ಒಳಗಾಗುತ್ತಾರೆ. ಹಾಗಾಗಿ, ಲೈಂಗಿಕ ದೌರ್ಜನ್ಯಗಳ ಕುರಿತು ಮಾತನಾಡುವ, ಅವುಗಳನ್ನು ತಡೆಗಟ್ಟಲು ಬೇಕಾದ ಕಾನೂನು ಹಾಗೂ ಸಾಮಾಜಿಕ ಬದಲಾವಣೆಗೆ ಹೋರಾಡುವ ಪ್ರಯತ್ನ ಎಲ್ಲರಿಂದ ನಡೆಯುವುದು ಅಗತ್ಯ ಎಂದರು.

‘ಯುವಜನರ ಮನಸ್ಸಿನ ತಲ್ಲಣಗಳು’ ವಿಚಾರ ಗೋಷ್ಠಿಯ ಭಾಗವಾಗಿ ಎಐಡಿವೈಓ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಡಾ ಜಿ ಶಶಿಕುಮಾರ್ ಮಾತನಾಡಿ, “ಸ್ವಾತಂತ್ರ್ಯ ಸಂಗ್ರಾಮದಲ್ಲಿ ನೇತಾಜಿ, ಭಗತ್ ಸಿಂಗ್‌ರಂತಹ ಹಲವಾರು ಯುವಕರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ, ಅವರಿಂದ ಸ್ಪೂರ್ತಿ ಪಡೆದು ಈಗಿನ ಯುವಕರು ಸಾಮಾಜಿಕ ಪರಿಸ್ಥಿತಿಗಳ ಬಗ್ಗೆ ಯೋಚಿಸಬೇಕು. ಸಮಾಜದ ಬಗ್ಗೆ ಚಿಂತನೆ ಮಾಡದಿದ್ದರೆ ನೈತಿಕವಾಗಿ, ಸಾಂಸ್ಕೃತಿಕವಾಗಿ ಬಲಗೊಳ್ಳಲು ಸಾಧ್ಯವಿಲ್ಲ. ಸಮಾಜದಲ್ಲಿ ವಿಕೃತತೆ ಹೆಚ್ಚಾಗಿ ಸೂಕ್ಷ್ಮ ಸಂವೇದನೆ ಎಂಬುದೇ ಕಡಿಮೆಯಾಗುತ್ತಿದೆ. ಹಾಗಾಗಿ ಧನಾತ್ಮಕ ವಿಚಾರಗಳು ಹೆಚ್ಚಾಗಿ ಪ್ರಚಾರವಾಗಬೇಕು”ಎಂದರು.

ಸಾಹಿತಿ ಶರತ್ ಚಂದ್ರ ಚಟರ್ಜಿ ಅವರ “ಮಾನವನ ಸಾವು ದುಃಖಕರ, ಆದರೆ ಮಾನವೀಯ ಮೌಲ್ಯಗಳ ಸಾವು ಅತ್ಯಂತ ದುಃಖಕರ” ಹಾಗಾಗಿ ಹೊಸ ಆದರ್ಶ ಮತ್ತು ಉದಾತ್ತ ಮೌಲ್ಯಕ್ಕಾಗಿ ತುಡಿತ ಇರುವ ಯುವಜನರು ಸಾಮಾಜಿಕ ಕೆಲಸಗಳಲ್ಲಿ ಭಾಗಿಯಾಗುವ ಮೂಲಕ ಹೊಸ ಸಾಂಸ್ಕೃತಿಕ ಆಂದೋಲನಕ್ಕೆ ಕೈ ಜೋಡಿಸಬೇಕೆಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಫೆ.14ರಂದು ಉಚಿತ ಸಾಮೂಹಿಕ ಅಕ್ಷರಭ್ಯಾಸ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಎಐಡಿವೈಓ ರಾಜ್ಯ ಕಾರ್ಯದರ್ಶಿ ಸಿದ್ಧಲಿಂಗ ಬಾಗೇವಾಡಿ, ಜಿಲ್ಲಾಧ್ಯಕ್ಷ ಸುನಿಲ್ ಟಿ ಆರ್, ಜಿಲ್ಲಾ ಕಾರ್ಯದರ್ಶಿ ಸುಮಾ, ಜಿಲ್ಲಾ ಜಂಟಿ ಕಾರ್ಯದರ್ಶಿ ನೀತು, ಪದಾಧಿಕಾರಿ ಸಿಂಚನ ಹಾಗೂ ಮೈಸೂರು, ಚಾಮರಾಜನಗರ ಸೇರಿದಂತೆ ಸುತ್ತಮುತ್ತಲಿನ ತಾಲೂಕುಗಳಿಂದಲೂ ನೂರಾರು ಯುವಜನರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X