ಮೈಸೂರು | ಮೃಗಾಲಯ, ಕಾರಂಜಿ ಕೆರೆ ನಿಶ್ಯಬ್ಧ ವಲಯ: ನಗರ ಪೊಲೀಸ್ ಆಯುಕ್ತ

Date:

Advertisements

ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆಯ ಸುತ್ತಮುತ್ತಲಿನ ರಸ್ತೆಗಳನ್ನು ನಿಶ್ಯಬ್ದ ವಲಯಗಳೆಂದು ಘೋಷಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ.

ನಗರದ ಚಾಮರಾಜೇಂದ್ರ ಮೃಗಾಲಯವು ವನ್ಯ ಪ್ರಾಣಿಗಳ, ಪಕ್ಷಿ ಸಂಕುಲಗಳ ಹಾಗೂ ದೇಶ, ವಿದೇಶಗಳ ಅಪರೂಪದ ಜೀವ ಸಂಕುಲಗಳ ಆವಾಸ ಸ್ಥಾನವಾಗಿರುತ್ತದೆ. ಋತುಮಾನಕ್ಕೆ ತಕ್ಕಂತೆ ವಲಸೆ ಪಕ್ಷಿಗಳು ಕಾರಂಜಿ ಕೆರೆಯಲ್ಲಿ ಬಂದು ನೆಲೆಸುವ ನೆಚ್ಚಿನ ತಾಣವಾಗಿರುತ್ತದೆ. ಈ ಪ್ರದೇಶಗಳು ಯಾವಾಗಲೂ ಸೂಕ್ಷ್ಮತೆಯಿಂದ ಕೂಡಿದ್ದು, ವನ್ಯಜೀವ ಸಂಕುಲಗಳು ವಾಸಿಸಲು ನಿಶ್ಯಬ್ಧತೆಯಿಂದ ಕೂಡಿದ ಪ್ರಶಾಂತತೆಯ ವಾತಾವರಣ ಸೃಷ್ಟಿಸುವ ಅವಶ್ಯಕತೆ ಇದೆಯೆಂದು ಮೃಗಾಲಯದ ಕಾರ್ಯ ನಿರ್ವಾಹಕ ನಿರ್ದೇಶಕರು ಮನವಿ ಮಾಡಿರುವ ಹಿನ್ನೆಲೆಯಲ್ಲಿ ನಗರ ಪೊಲೀಸ್‌ ಆಯುಕ್ತ ರಮೇಶ್ ಬಾನೋತ್ ಈ ಆದೇಶ ಹೊರಡಿಸಿದ್ದಾರೆ.

ಎಂ ಎಲ್ ಸೋಮಸುಂದರ ವೃತ್ತದಿಂದ ಲಿಂಗಣ್ಣ ವೃತ್ತದವರೆಗೆ (ಶಾಲಿವಾಹನ ರಸ್ತೆ), ಎಸ್ ಲಿಂಗಣ್ಣ ವೃತ್ತದಿಂದ ಸರ್ಕಸ್ ಗ್ರೌಂಡ್ ಜಂಕ್ಷನ್ (ಲೋಕರಂಜನ್ ರಸ್ತೆ), ಸರ್ಕಸ್ ಗ್ರೌಂಡ್ ಜಂಕ್ಷನ್‌ನಿಂದ ಮಹಾರಾಣಾ ಪ್ರತಾಪ್ ಸಿಂಹಜಿ ಜಂಕ್ಷನ್ (ಟ್ಯಾಂಕ್ ಬಂಡ್ ರಸ್ತೆ), ಮಹಾರಾಣಾ ಪ್ರತಾಪ್ ಸಿಂಹಜಿ ವೃತ್ತದಿಂದ ಎಂ ಎಲ್ ಸೋಮಸುಂದರಂ ವೃತ್ತದ(ಎಂಜಿ ರಸ್ತೆ)ವರೆಗಿನ ಜಂಕ್ಷನ್‌ಗಳು ಮತ್ತು ರಸ್ತೆಗಳಲ್ಲಿ ಪಟಾಕಿ ಸಿಡಿಸುವುದು, ಧ್ವನಿವರ್ಧಕಗಳ ಬಳಕೆ ಮತ್ತು ವಾಹನಗಳ ಹಾರ್ನ್ ಶಬ್ಧ ಮಾಡುವುದನ್ನು ನಿಷೇಧಿಸಿದ್ದು, ಗುರುವಾರದಿಂದ ಜಾರಿಗೆ ಬರುವಂತೆ ಆದೇಶಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಕೊಪ್ಪಳ | 3,469 ವಿದ್ಯಾರ್ಥಿಗಳಿಗೆ ಎರಡೇ ಶೌಚಾಲಯ; ಪ್ರತೀ ನಿತ್ಯ ಪರದಾಟ

“ನಿಯಮಗಳನ್ನು ಉಲ್ಲಂಘಿಸುವ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ನಗರ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X