ಮೈಸೂರು | ಚಾಮುಂಡಿ ಬೆಟ್ಟದಲ್ಲಿ ತ್ಯಾಜ್ಯ ಬಿಸಾಡಿದರೆ ದಂಡ, ಹೊಸ ನಿಯಮ ಜಾರಿ

Date:

ಚಾಮುಂಡಿ ಬೆಟ್ಟವನ್ನು ಕಸ ಹಾಗೂ ಪ್ಲಾಸ್ಟಿಕ್ ಮುಕ್ತ ಮಾಡಲು ಮೈಸೂರು ಅರಣ್ಯ ಸಂರಕ್ಷಣಾಧಿಕಾರಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ದಂಡ ವಿಧಿಸುವುದರ ಜತೆಗೆ ಲೈಸೆನ್ಸ್‌ ರದ್ದು ಮಾಡಲಾಗುವುದು ಎಂದು ಸೂಚನೆ ನೀಡಿದ್ದಾರೆ.

ರಾಜ್ಯ ಅಲ್ಲದೇ ಹೊರ ರಾಜ್ಯ, ದೇಶಗಳಿಂದಲೂ ದೇವರ ದರ್ಶನಕ್ಕಾಗಿ ನಿತ್ಯ ಸಾವಿರಾರು ಭಕ್ತರು ಬೆಟ್ಟಕ್ಕೆ ಬರುತ್ತಿದ್ದಾರೆ. ಅವರು ತಿನ್ನುವ ತಿಂಡಿ ಪೊಟ್ಟಣ, ಬಿಸ್ಕತ್ ಕವರ್‌ಗಳು, ನೀರು, ಜ್ಯೂಸ್ ಬಾಟಲಿಗಳು ರಸ್ತೆಯ ಇಕ್ಕೆಲಗಳಲ್ಲಿ ಬಿದ್ದು, ಪರಿಸರಕ್ಕೆ ಹಾನಿಯುಂಟು ಮಾಡುತ್ತಿವೆ. ಇದರಿಂದ ಎಚ್ಚೆತ್ತುಕೊಂಡಿರುವ ಮೈಸೂರು ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸೆಪ್ಟೆಂಬರ್ 01ರಿಂದ ಹೊಸ ಆದೇಶ ಜಾರಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಅಣ್ಣ-ತಂಗಿಯರ ಬಾಂಧವ್ಯ ಬೆಸೆಯುವ ಬಂಧವೇ ರಕ್ಷಾ ಬಂಧನ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ಲಾಸ್ಟಿಕ್ ಬಿಸಾಕಿದರೆ 500 ರೂ. ದಂಡ. ಮೊದಲ ಬಾರಿಗೆ ತ್ಯಾಜ್ಯ ಬಿಸಾಡಿದರೆ ₹2,500 ದಂಡ, ಎರಡನೇ ಬಾರಿಗೆ ₹5,000 ದಂಡ ಮೂರನೇ ಬಾರಿಗೆ ₹10,000 ದಂಡ ಹಾಗೂ ಲೈಸೆನ್ಸ್ ರದ್ದು ಮಾಡಲಾಗುವುದೆಂದು ಎಂದು ಚಾಮುಂಡಿ ಬೆಟ್ಟದ ಅಂಗಡಿಯವರಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ವಿದ್ಯುತ್ ಸಂಪರ್ಕಕ್ಕೆ ವಿಧಿಸಿರುವ ಶುಲ್ಕವನ್ನು ಕೂಡಲೇ ಕೈ ಬಿಡಬೇಕು: ಬಡಗಲಪುರ ನಾಗೇಂದ್ರ

ಕೃಷಿ ಪಂಪ್‌ಸೆಟ್‌ಗಳ ಅಕ್ರಮ ಸಂಪರ್ಕವನ್ನು ಸಕ್ರಮಗೊಳಿಸಿಕೊಳ್ಳಲು ಮತ್ತು ಹೊಸ ವಿದ್ಯುತ್ ಸಂಪರ್ಕ...

ಮೈಸೂರು | ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ; ಜಿಲ್ಲೆಯು 17ನೇ ಸ್ಥಾನಕ್ಕೆ ಕುಸಿತ

ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ಕಳೆದ ಬಾರಿ 13ನೇ ಸ್ಥಾನದಲ್ಲಿದ್ದ ಮೈಸೂರು...

ಮೈಸೂರು | ಸಂವಿಧಾನ ಕಾಪಾಡಿಕೊಳ್ಳಲು ʼದೇಶ ಉಳಿಸಿ ಸಂಕಲ್ಪ ಯಾತ್ರೆʼ

ಮೈಸೂರಿನಲ್ಲಿ ಪ್ರಗತಿಪರ ಸಂಘಟನೆಗಳು ʼದೇಶ ಉಳಿಸಿ ಸಂಕಲ್ಪ ಯಾತ್ರೆʼಯ ಭಾಗವಾಗಿ ಸಮಾವೇಶ...

ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಬರ ಪರಿಹಾರ ಕೊಟ್ಟು ನಂತರ ವೋಟು ಕೇಳಲಿ; ರೈತಸಂಘ

ಸ್ವತಂತ್ರ ಭಾರತದ ಇತಿಹಾಸದಲ್ಲಿ ಎಂದೂ ಕರ್ನಾಟಕ ರಾಜ್ಯಕ್ಕೆ ಮತ್ತು ರಾಜ್ಯದ ರೈತರಿಗೆ...