80ನೇ ಸ್ವಾತಂತ್ರ್ಯೋತ್ಸವ: ಮೈಸೂರಿನ ಸಿ.ವಿ. ರಸ್ತೆಯಲ್ಲಿ ಬೃಹತ್ ಸ್ವಚ್ಛತಾ ಕಾರ್ಯಾಚರಣೆ; 83 ಟನ್ ತ್ಯಾಜ್ಯ ತೆರವು

Date:

80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆ ಹಮ್ಮಿಕೊಂಡಿರುವ ‘ಸ್ವಾತಂತ್ರ್ಯೋತ್ಸವ ಸ್ವಚ್ಛತಾ ಅಭಿಯಾನ–2026: 80 ತ್ಯಾಜ್ಯಮುಕ್ತ ತಾಣಗಳು’ ಕಾರ್ಯಕ್ರಮದ ಭಾಗವಾಗಿ ಬುಧವಾರ ಬೆಳಿಗ್ಗೆ ನಗರದ ಚಿಕ್ಕ ವೀರಣ್ಣ ರಸ್ತೆ (ಸಿ.ವಿ. ರಸ್ತೆ) ಪ್ರದೇಶದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಾಚರಣೆ ನಡೆಸಲಾಯಿತು.

- Advertisement -

ಕಾರ್ಯಾಚರಣೆಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ದೀರ್ಘಕಾಲದಿಂದ ಅನಧಿಕೃತವಾಗಿ ಸಂಗ್ರಹಿಸಲಾಗಿದ್ದ ಮಿಶ್ರ ತ್ಯಾಜ್ಯ, ಹಳೆಯ ವಸ್ತುಗಳು, ಲೋಹದ ಅವಶೇಷಗಳು, ಪ್ಲಾಸ್ಟಿಕ್, ಕಟ್ಟಡ ಅವಶೇಷಗಳು ಸೇರಿದಂತೆ ವಿವಿಧ ರೀತಿಯ ತ್ಯಾಜ್ಯವನ್ನು ತೆರವುಗೊಳಿಸಲಾಯಿತು. ಈ ವೇಳೆ ಒಟ್ಟು ಸುಮಾರು 83 ಟನ್ ತ್ಯಾಜ್ಯವನ್ನು ಸಂಗ್ರಹಿಸಿ ವಿಲೇವಾರಿ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸ್ವಚ್ಛತಾ ಕಾರ್ಯಕ್ಕಾಗಿ 5 ಬ್ಯಾಕ್‌ಹೋ ಲೋಡರ್‌ಗಳು, 10 ಟಿಪ್ಪರ್ ವಾಹನಗಳು ಬಳಸಿಕೊಳ್ಳಲಾಯಿತು. ಸಾರ್ವಜನಿಕ ಸ್ಥಳಗಳು ಹಾಗೂ ರಸ್ತೆ ಬದಿಯಲ್ಲಿದ್ದ ಅನಧಿಕೃತ ಒತ್ತುವರಿಗಳನ್ನು ತೆರವುಗೊಳಿಸಿ, ಸುಗಮ ಸಂಚಾರ ಮತ್ತು ಸ್ವಚ್ಛ ಪರಿಸರ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಪ್ರದೇಶದಲ್ಲಿರುವ ಅಂಗಡಿ ಮಾಲೀಕರು, ಗುಜರಿ ವ್ಯಾಪಾರಿಗಳು, ಲೋಹದ ಕೆಲಸದ ಮಳಿಗೆಗಳು ಹಾಗೂ ಇತರೆ ವಾಣಿಜ್ಯ ಸಂಸ್ಥೆಗಳ ಪ್ರತಿನಿಧಿಗಳಿಗೆ ತ್ಯಾಜ್ಯವನ್ನು ರಸ್ತೆ ಬದಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಸುರಿಯದಂತೆ ಅಧಿಕಾರಿಗಳು ಸೂಚನೆ ನೀಡಿದರು. ವ್ಯಾಪಾರ ಚಟುವಟಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯವನ್ನು ಪ್ರತ್ಯೇಕಿಸಿ, ಮಹಾನಗರ ಪಾಲಿಕೆ ಸೂಚಿಸಿರುವ ವೈಜ್ಞಾನಿಕ ವಿಧಾನದಲ್ಲಿ ವಿಲೇವಾರಿ ಮಾಡುವಂತೆ ಜಾಗೃತಿ ಮೂಡಿಸಲಾಯಿತು.

ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ತ್ಯಾಜ್ಯ ಸುರಿಯುವುದು ಅಥವಾ ಅತಿಕ್ರಮಣ ನಡೆಸುವುದು ಕಂಡುಬಂದಲ್ಲಿ ನಿಯಮಾನುಸಾರ ದಂಡ ವಿಧಿಸುವುದರೊಂದಿಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ಮಾನವೀಯತೆಗೂ SIRಗೂ ಸಂಬಂಧವೇನು? ಪ್ರಜಾಪ್ರಭುತ್ವದ ಹಕ್ಕು, ದಾಖಲೆಗಳ ಗೊಂದಲ-ಉತ್ತರ ಸಿಗದ ಪ್ರಶ್ನೆಗಳು

ಸ್ವಚ್ಛಗೊಳಿಸಲಾದ ಪ್ರದೇಶದಲ್ಲಿ ಮತ್ತೆ ತ್ಯಾಜ್ಯ ಸುರಿಯದಂತೆ ನಿರಂತರ ನಿಗಾ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಸ್ಥಳೀಯ ನಿವಾಸಿಗಳು ಹಾಗೂ ವ್ಯಾಪಾರಸ್ಥರು ಪ್ರದೇಶದ ಸ್ವಚ್ಛತೆ ಕಾಪಾಡಲು ಮಹಾನಗರ ಪಾಲಿಕೆಯೊಂದಿಗೆ ಕೈಜೋಡಿಸುವಂತೆ ಮನವಿ ಮಾಡಲಾಯಿತು.

ವಿಶೇಷ ಸುದ್ದಿ ಓದಿದ್ದೀರಾ?ಚಾಮರಾಜನಗರ ಜಿಲ್ಲೆಯ ‘SIR’ ಪ್ರಕ್ರಿಯೆ ಅಂಕಿಅಂಶಗಳ ಸಾಧನೆಯೋ, ಪ್ರಜಾಪ್ರಭುತ್ವದ ಪರೀಕ್ಷೆಯೋ?

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತೆ ಸವಿತಾ ಎಂ.ಕೆ., ಹೆಚ್ಚುವರಿ ಆಯುಕ್ತೆ ವೀಣಾ, ಪಾಲಿಕೆ ಅಧೀಕ್ಷಕ ಅಭಿಯಂತರ ಸಿಂಧು, ಮುಖ್ಯ ಲೆಕ್ಕಾಧಿಕಾರಿ ಶ್ವೇತಾ, ಕಾರ್ಯಪಾಲಕ ಅಭಿಯಂತರರಾದ ಮೃತ್ಯುಂಜಯ (ಪರಿಸರ), ಶ್ರೀನಿವಾಸ್ (ಸಿವಿಲ್), ಮೋಹನ್ (ಯುಜಿಡಿ) ಹಾಗೂ ದೀಪಕ್ (ವಿದ್ಯುತ್), ವಲಯ ಸಹಾಯಕ ಆಯುಕ್ತೆ ರತ್ನಾಂಬಿಕಾ ಸೇರಿದಂತೆ ಪಾಲಿಕೆಯ ವಿವಿಧ ವಿಭಾಗಗಳ ಅಧಿಕಾರಿಗಳು, ಸಿಬ್ಬಂದಿ, ಆರೋಗ್ಯ ನಿರೀಕ್ಷಕರು, ಮೇಲ್ವಿಚಾರಕರು, ಪೌರಕಾರ್ಮಿಕರು, ಸ್ಥಳೀಯ ನಿವಾಸಿಗಳು ಹಾಗೂ ಸಿ.ವಿ. ರಸ್ತೆ ನಿವಾಸಿಗಳ ಸಂಘದ ಪದಾಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...