ಮೈಸೂರು ತಾಲೂಕಿನ ಚಿಕ್ಕಕಾನ್ಯ ಬಳಿ ಹುಲಿ ಪ್ರತ್ಯಕ್ಷವಾಗುತ್ತಿದ್ದಂತೆ ಶಾಸಕ ಜಿ ಟಿ ದೇವೇಗೌಡ ಸ್ಥಳಕ್ಕೆ ಭೇಟಿ ನೀಡಿದ್ದು, ಸೂಕ್ತ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ತಾಲೂಕಿನ ಜಯಪುರ ಹೋಬಳಿ ಸಿಂಧುವಳ್ಳಿ, ಬ್ಯಾತಹಳ್ಳಿ, ಚಿಕ್ಕಕಾನ್ಯ, ದೊಡ್ಡಕಾನ್ಯ ಗ್ರಾಮಗಳ ಮಧ್ಯದಲ್ಲಿ ಹುಲಿ ಕಾಣಿಸಿಕೊಂಡಿದ್ದು ಗ್ರಾಮಸ್ಥರು ರಾತ್ರಿ ವೇಳೆಯಲ್ಲಿ ಅನಾವಶ್ಯಕವಾಗಿ ಓಡಾಡದಂತೆ ಮನವಿ ಮಾಡಿದರು.
ಅನಾವಶ್ಯಕ ವದಂತಿಗಳಿಗೆ ಗ್ರಾಮಸ್ಥರು ಭಯಭೀತರಾಗದಂತೆ ಹಾಗೂ ಕಾರ್ಯಾಚರಣೆ ಮುಗಿಯುವವರೆಗೆ ಜನರು ಸಹಕರಿಸುವಂತೆ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಸಣ್ಣ ಉದ್ಯಮಗಳು ನಿರುದ್ಯೋಗ ಪ್ರಮಾಣ ಕಡಿಮೆ ಮಾಡುತ್ತವೆ: ಡಾ.ಗೀತಾ ಚಿಟಗುಬ್ಬಿ
ಟಿವಿಎಸ್ ಕಂಪನಿಯ ನೌಕರರು ರಾತ್ರಿಪಾಳಿ ಮುಗಿಸಿ ಹೋಗುವಾಗ ಎಚ್ಚರಿಕೆಯಿಂದ ಇರುವಂತೆ ತಿಳಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಅವಶ್ಯವಾದದನ್ನು ಒದಗಿಸಲು ಗ್ರಾಮ ಪಂಚಾಯತಿ ಪಿಡಿಒಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಎಸಿಎಫ್ ಲಕ್ಷ್ಮಿಕಾಂತ್, ಆರ್ಎಫ್ಒ ಸುರೇಂದ್ರ, ಸ್ಥಳೀಯ ಮುಖಂಡರುಗಳಾದ ಗೆಜ್ಜಗಳ್ಳಿ ಲೋಕೇಶ್, ಕೃಷ್ಣ ಸಿಂಧುವಳ್ಳಿ, ಚಿಕ್ಕಕಾನ್ಯ ಮಹದೇವಸ್ವಾಮಿ, ಹಾರೋಹಳ್ಳಿ ಸುರೇಶ್ ಇದ್ದರು.