ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌-ವೇ ಟೋಲ್‌ ದರ ಮತ್ತೆ ಹೆಚ್ಚಳ

Date:

Advertisements

ಒಂದಿಲ್ಲ ಒಂದು ಕಾರಣಕ್ಕೆ ಪದೇಪದೆ ಸುದ್ದಿಯಲ್ಲಿರುವ ಮೈಸೂರು-ಬೆಂಗಳೂರು ನಡುವಿನ ಎಕ್ಸ್‌ಪ್ರೆಸ್‌-ವೇ ಈಗ ಮತ್ತೊಮ್ಮೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಟೋಲ್‌ ದರವನ್ನು ಮತ್ತೆ ಹೆಚ್ಚಳ ಮಾಡಿದ್ದು, ವಾಹನ ಸವಾರರ ಕೆಂಗಣ್ಣಿಗೆ ಗುರಿಯಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ದರವನ್ನು ಶೇ.22ರಷ್ಟು ಏರಿಕೆ ಮಾಡಿದೆ. ಜೂನ್ 1ರಿಂದಲೇ ದುಬಾರಿ ಶುಲ್ಕ ವಸೂಲಿ ಮಾಡಲಾಗುತ್ತಿದ್ದು, ಪ್ರಯಾಣಿಕರ ಜೇಬಿಗೆ ಕತ್ತರಿ ಬಿದ್ದಿದೆ. ಫಾಸ್ಟ್ ಟ್ಯಾಗ್ ಇರುವ ಕಾರಣ ವಾಹನ ಸವಾರರ ಗಮನಕ್ಕೂ ಬಾರದೇ ಹಣ ವಸೂಲಿ ಮಾಡಲಾಗುತ್ತಿದೆ.

ಹಿಂದೆ ಏ. 1ರಿಂದ ಅನ್ವಯವಾಗುವಂತೆ ಎಕ್ಸ್‌ಪ್ರೆಸ್‌-ವೇ ಟೋಲ್‌ ಶುಲ್ಕವನ್ನು ಕನಿಷ್ಟ ₹35ರಿಂದ ಗರಿಷ್ಠ ₹305 ಹೆಚ್ಚಿಸಿ ಎನ್ಎಚ್ಎಐ ಆದೇಶ ಹೊರಡಿಸಿತ್ತು. ಮಾ. 14ರಿಂದ ಈ ಹೆದ್ದಾರಿಯಲ್ಲಿ ಶುಲ್ಕ ಸಂಗ್ರಹಿಸಲು ಆರಂಭಿಸಲಾಗಿದ್ದು, ಕೇವಲ 17 ದಿನಗಳಲ್ಲೇ ಶುಲ್ಕವನ್ನು ಪರಿಷ್ಕಕರಿಸಿದ್ದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

Advertisements

ಹೀಗಾಗಿ ಟೋಲ್ ಹೆಚ್ಚಳ ಆದೇಶವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಾಪಸ್ ಪಡೆದುಕೊಂಡಿತ್ತು. ಆದರೆ, ಈ ಆದೇಶವನ್ನು ಕೇವಲ 3 ತಿಂಗಳ ಅವಧಿಗೆ ಮಾತ್ರ ಹಿಂಪಡೆದು, ಮೂರು ತಿಂಗಳ ನಂತರ ಪುನಃ ಈ ಆದೇಶ ಜಾರಿ ಮಾಡಲು ಯೋಜನೆ ರೂಪಿಸಲಾಗಿತ್ತು. ಆದರೆ ಮೂರು ತಿಂಗಳಿಗೆ ಮುನ್ನವೇ ಟೋಲ್ ದರ ಮತ್ತೆ ಹೆಚ್ಚಳ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ‘ಹಾಡುಪಾಡು’ ರಾಮು ಖ್ಯಾತಿಯ ಹಿರಿಯ ಪತ್ರಕರ್ತ ಟಿಎಸ್ ರಾಮಸ್ವಾಮಿ ನಿಧನ

ಯಾವ ವಾಹನಕ್ಕೆ ಎಷ್ಟು ಶುಲ್ಕ ಹೆಚ್ಚಳ?

  • ಕಾರ್, ವ್ಯಾನ್‌, ಜೀಪ್‌ಗಳ ಏಕಮುಖ ಸಂಚಾರಕ್ಕೆ ₹135 ರಿಂದ ₹165ಕ್ಕೆ ಏರಿಕೆ (30 ರೂ ಹೆಚ್ಚಳ)
  • ಲಘು ವಾಹನಗಳು, ಮಿನಿ ಬಸ್‌ಗಳ ಏಕಮುಖ ಟೋಲ್‌ ₹220ರಿಂದ ₹270ಕ್ಕೆ ಏರಿಕೆ(50ರೂ ಹೆಚ್ಚಳ)
  • ಟ್ರಕ್‌, ಬಸ್, 2 ಆಕ್ಸೆಲ್‌ ವಾಹನಗಳ ಏಕಮುಖ ಸಂಚಾರಕ್ಕೆ ₹460 ರಿಂದ ₹565ಕ್ಕೆ ಏರಿಕೆ.(105 ಹೆಚ್ಚಳ)
  • 3 ಆಕ್ಸೆಲ್ ವಾಣಿಜ್ಯ ವಾಹನಗಳ ಏಕಮುಖ ಸಂಚಾರ ₹ 500 ರಿಂದ ₹615ಕ್ಕೆ ಏರಿಕೆ (115 ರೂ ಹೆಚ್ಚಳ)
  • ಭಾರಿ ವಾಹನಗಳ ಏಕಮುಖ ಸಂಚಾರ ₹ 720ರಿಂದ ₹885ಕ್ಕೆ ಏರಿಕೆ (165 ಹೆಚ್ಚಳ)
  • 7 ಅಥವಾ ಅದಕ್ಕಿಂತ ಹೆಚ್ಚಿನ ಆಕ್ಸೆಲ್‌ ವಾಹನಗಳ ಎಕಮುಖ ಸಂಚಾರ ₹880ರಿಂದ ₹1,080ಕ್ಕೆ ಏರಿಕೆ (₹200 ಹೆಚ್ಚಳ)

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X